ಮೈಸೂರು; ಲಾಕ್ಡೌನ್ನಲ್ಲಿ ಜೆಸಿಬಿ ಘರ್ಜನೆ, ಅಕ್ರಮ ಕಟ್ಟಡ ತೆರವು
ಮೈಸೂರು, ಜೂನ್ 04; ನಂಜನಗೂಡು ನಗರದಲ್ಲಿ ನಾಲೆಗಳ ಮೇಲೆಯೇ ಅಕ್ರಮವಾಗಿ ಕಟ್ಟಡ ನಿರ್ಮಿಸಿ ಅಂಗಡಿ, ಹೋಟೆಲ್ ನಡೆಸುತ್ತಿದ್ದವರಿಗೆ ಲಾಕ್ಡೌನ್ ವೇಳೆಯಲ್ಲಿ ತೆರವುಗೊಳಿಸಿ ಶಾಕ್ ನೀಡಲಾಗಿದೆ.
ಕಳೆದ ಹಲವು ವರ್ಷಗಳಿಂದ ನಂಜನಗೂಡು ನಗರದ ಕಾವೇರಿ ನೀರಾವರಿ ಇಲಾಖೆಗೆ ಸೇರಿದ ನಾಲೆ ಮೇಲೆ ಹಾಕಲಾಗಿದ್ದ ಕವರ್ ಡೆಕ್ ಮೇಲೆಯೇ ಅಕ್ರಮವಾಗಿ ಕಟ್ಟಡಗಳನ್ನು ನಿರ್ಮಿಸಿ ಅಲ್ಲಿ ಗೋಬಿ ಮಂಚೂರಿ, ಚಿಕನ್ ಅಂಗಡಿ, ಹೋಟೆಲ್, ಗೂಡಂಗಡಿ, ಹೀಗೆ ವಿವಿಧ ರೀತಿಯ ವ್ಯಾಪಾರ ವಹಿವಾಟುಗಳನ್ನು ನಡೆಸಲಾಗುತ್ತಿತ್ತು.
ಅಂಗಡಿಗಳನ್ನು ಅಲ್ಲಿಂದ ತೆರವುಗೊಳಿಸುವುದು ಕೂಡ ನಗರ ಸಭೆಗೆ ತಲೆನೋವಾಗಿ ಪರಿಣಮಿಸಿತ್ತು.
ಇದೀಗ ಲಾಕ್ಡೌನ್ ಸಮಯದಲ್ಲಿ ಯಾವುದೇ ವ್ಯಾಪಾರ ವಹಿವಾಟು ಇಲ್ಲದ ಕಾರಣ ಮತ್ತು ಜನ ಗುಂಪು ಸೇರದ ಹಿನ್ನಲೆಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ಕಾವೇರಿ ನೀರಾವರಿ ಇಲಾಖೆ ಹಾಗೂ ನಗರಸಭೆ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮ ಕಟ್ಟಡಗಳನ್ನು ತೆರೆವು ಗೊಳಿಸಿದ್ದು ಆ ಮೂಲಕ ಬಹಳಷ್ಟು ವರ್ಷಗಳಿಂದ ಬಗೆಹರಿಯದೆ ಉಳಿದಿದ್ದ ಸಮಸ್ಯೆಗೆ ಪರಿಹಾರ ದೊರೆತಂತಾಗಿದೆ.
ಹಾಗೆ ನೋಡಿದರೆ ಕಾವೇರಿ ನೀರಾವರಿ ಇಲಾಖೆಗೆ ಸೇರಿದ ನಾಲೆ ಮೇಲೆಯೇ ಗೋಬಿ ಮಂಚೂರಿ, ಚಿಕನ್ ಅಂಗಡಿಗಳು, ಬೀಡಿ ಅಂಗಡಿ, ಮಿಲಿಟರಿ ಹೋಟೆಲ್ಗಳು ತಲೆ ಎತ್ತಿದದ್ದವು. ಅದರ ಜೊತೆಗೆ ಕಬಾಬ್ ಅಂಗಡಿಗಳು ಇದ್ದುದರಿಂದ ಕುಡುಕರು ಕುಡಿದು ಅಲ್ಲಿಯೇ ಮಲಗುತ್ತಿದ್ದರು.
ಇದು ಹೀಗೆಯೇ ಮುಂದುವರೆದರೆ ನಾಲೆಗೂ ಹಾನಿ ಆಗುವ ಸಾಧ್ಯತೆ ಇತ್ತು. ನೀರಾವರಿ ಇಲಾಖೆಗೆ ಕೂಡ ಇದೊಂದು ಸಮಸ್ಯೆಯಾಗಿ ಪರಿಣಮಿಸಿತ್ತು. ಹೀಗಾಗಿ ಅವರು ಪೊಲೀಸ್ ಇಲಾಖೆ ಮತ್ತು ನಗರಸಭೆಗೆ ಪತ್ರ ಬರೆದು ಕಟ್ಟಡಗಳನ್ನು ತೆರವು ಮಾಡುವಂತೆ ಮನವಿ ಮಾಡಿದ್ದರು.

ಕಾವೇರಿ ನೀರಾವರಿ ಇಲಾಖೆ ಅಧಿಕಾರಿಗಳ ಮನವಿಗೆ ಸ್ಪಂದಿಸಿದ ನಗರಸಭೆ ಮತ್ತು ಪೊಲೀಸ್ ಇಲಾಖೆ ಶುಕ್ರವಾರ ಜೆಸಿಬಿಯಿಂದ ಬೆಳ್ಳಂಬೆಳಗ್ಗೆ ಅಂಗಡಿಗಳನ್ನು ತೆರವುಗೊಳಿದ್ದು, ಈ ವೇಳೆ ಕೆಲವರು ತಡೆಯೊಡ್ಡುವ ಪ್ರಯತ್ನ ಮಾಡಿದರೂ ಅದಕ್ಕೆ ಸೊಪ್ಪು ಹಾಕದೆ ತೆರವು ಕಾರ್ಯವನ್ನು ಮುಂದುವರೆಸಲಾಯಿತು.
ನಗರಸಭೆ ಆಯುಕ್ತ ರಾಜಣ್ಣ ಮಾತನಾಡಿ, "ಅಕ್ರಮ ಕಟ್ಟಡಗಳು ಬಹಳ ವರ್ಷಗಳ ಹಿಂದೆಯೇ ತಲೆ ಎತ್ತಿದ್ದು, ಇವುಗಳಿಂದ ಬಹಳ ತೊಂದರೆ ಯಾಗುತ್ತಿತ್ತು. ಇದನ್ನೆಲ್ಲ ಅರಿತು ತೆರವು ಗೊಳಿಸಲಾಗಿದೆ. ಹಾಗೆಯೇ ನಗರದ ಸುಭಾಷ್ ಪಾರ್ಕ್ ನಲ್ಲಿರುವ ತರಕಾರಿ ಮಳಿಗೆ ಹಾಗೂ ಮಟನ್ ಮಳಿಗೆಗಳನ್ನು ಲಾಕ್ಡೌನ್ ಕಳೆದ ನಂತರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು. ಇದಲ್ಲದೆ ಮಟನ್ ಮಾರ್ಕೆಟ್ ಮಳಿಗೆಗಳನ್ನು ಬೇರೆ ಕಡೆ ಸ್ಥಳಾಂತರ ಮಾಡಲಾಗುವುದು" ಎಂದು ಹೇಳಿದರು.
-
Thalapathy Vijay: 400 ಕೋಟಿ ಆಸ್ತಿಗೆ ಒಡತಿ, ಲಂಡನ್ ಬೆಡಗಿ: ಯಾವ ಸಿನಿಮಾಗೂ ಕಡಿಮೆ ಇಲ್ಲ ದಳಪತಿ ವಿಜಯ್-ಸಂಗೀತಾ ಲವ್ ಸ್ಟೋರಿ -
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್ -
Sanju Samson: ವೆಸ್ಟ್ ಇಂಡೀಸ್ ವಿರುದ್ಧ ಅಬ್ಬರ: ತೆಗಳಿದ ಬಾಯಲ್ಲೇ ಸಂಜು ಸ್ಯಾಮ್ಸನ್ಗೆ ಗೌತಮ್ ಗಂಭೀರ್ ಶಹಭಾಸ್ಗಿರಿ -
Lunar Eclipse 2026:ನಾಳೆ ಕೇತುಗ್ರಸ್ತ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ದರ್ಶನದ ಸಮಯ ಬದಲು, ಗ್ರಹಣ ಶಾಂತಿ ಹೋಮ -
Horoscope March 2: ಈ ರಾಶಿಯವರಿಗೆ ಸಕಾರಾತ್ಮಕ ಪ್ರಗತಿ, ಮೇಷ-ಮೀನ ರಾಶಿಯವರೆಗೆ ಇಂದಿನ ದಿನ ಭವಿಷ್ಯ -
ಮಧ್ಯಪ್ರಾಚ್ಯದಲ್ಲಿ ವಿಮಾನಗಳ ಸಂಚಾರ ವ್ಯತ್ಯಯ: ಕರ್ನಾಟಕದ ನಾಗರಿಕರಿಗೆ ಸರ್ಕಾರ ನೆರವು -
Gold Rate : ಆಭರಣ ಪ್ರಿಯರಿಗೆ ಬಿಗ್ ಶಾಕ್; ಭಾರಿ ಏರಿಕೆ ಕಂಡ ಚಿನ್ನ- ಬೆಳ್ಳಿ ದರ, ಇಲ್ಲಿದೆ ಇಂದಿನ ಬೆಲೆ ಪಟ್ಟಿ -
Iran Vs America, Israel ಯುದ್ಧ ತೀವ್ರ: ಗಲ್ಫ್ ರಾಷ್ಟ್ರಗಳಿಗೂ ವ್ಯಾಪಿಸಿದ ಸಂಕಷ್ಟ; ಈ ಕ್ಷಣದ 10 ಪ್ರಮುಖ ಬೆಳವಣಿಗೆಗಳು -
ಯುದ್ಧದ ನಡುವೆಯೂ ಸರ್ವಧರ್ಮ ಸಮನ್ವಯತೆ ಸಂದೇಶ: ನಮ್ ಭಾರತ ಅಂದ್ರೆ ಹೀಗೆ ಅಂತಾ ವಿಶ್ವಕ್ಕೆ ಸಾರಿದ ಸಂಜು ಸ್ಯಾಮ್ಸನ್ -
Gold Price: ಇಂದು ಚಿನ್ನದ ಬೆಲೆಯಲ್ಲಿ ದಾಖಲೆಯ ಕುಸಿತ, ಯುದ್ಧದ ಎಫೆಕ್ಟ್ನಿಂದ ಬಂಗಾರ-ಬೆಳ್ಳಿ ಮತ್ತಷ್ಟು ದುಬಾರಿ! ಮುನ್ಸೂಚನೆ -
ಕರ್ನಾಟಕದ ಅಲಿಪುರದಲ್ಲಿ ಇರಾನ್ ನಾಯಕ ಖಮೇನಿ ಅಂದು ಆಡಿದ್ದ ಮಾತುಗಳೇನು ? -
Donald Trump: ಅಮೆರಿಕ, ಇಸ್ರೇಲ್ Vs ಇರಾನ್ ಯುದ್ಧದ ಬಗ್ಗೆ ಬಿಗ್ ಅಪ್ಡೇಟ್ಸ್ ಕೊಟ್ಟ ಡೊನಾಲ್ಡ್ ಟ್ರಂಪ್, ಏನದು












Click it and Unblock the Notifications