ತಿ.ನರಸೀಪುರದಲ್ಲಿ ಜೂಜು ಮತ್ತು ಕುಡುಕರ ಹಾವಳಿ: ಅಬಕಾರಿ ಅಧಿಕಾರಿಗಳ ಮುಂದೆ ಸಾರ್ವಜನಿಕರ ಆಕ್ರೋಶ
ಮೈಸೂರು, ಸೆಪ್ಟೆಂಬರ್ 19: ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬಿ.ಶೆಟ್ಟಹಳ್ಳಿ ಪಂಚಾಯತಿ ವ್ಯಾಪ್ತಿಯಲ್ಲಿ ಜೂಜು ಮತ್ತು ಕುಡುಕರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಗ್ರಾಮ ಪಂಚಾಯಿತಿ ಹಾಗೂ ಅಬಕಾರಿ ಇಲಾಖೆಗೆ ದೂರು ನೀಡಿದರು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ಗ್ರಾಮ ಸಭೆಯಲ್ಲಿ ಸಾರ್ವಜನಿಕರು ಬಹಿರಂಗವಾಗಿ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ತಿ.ನರಸೀಪುರ ತಾಲೂಕು ತಲಕಾಡು ಹೋಬಳಿ ಬಿ.ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮ ಸಭೆ, ಮತ್ತು ಜಮಾಬಂದಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಭೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಟ್ಟಮ್ಮಎಂ. ಶಂಭುಲಿಂಗಯ್ಯ ಇವರ ಅಧ್ಯಕ್ಷತೆಯಲ್ಲಿ ಹಾಗೂ. ಉಸ್ತುವಾರಿ ಅಧಿಕಾರಿ. ಗೋವಿಂದರಾಜು ರವರ ಸಮ್ಮುಖದಲ್ಲಿ ಸಭೆ ನಡೆಯಿತು.

ಡಿ.ಎಸ್.ಎಸ್ ಸಂಚಾಲಕ ಕುಕ್ಕೊರು ರಾಜು. ಮಾತನಾಡಿ 'ಟಿ. ಮೇಡಗಹಳ್ಳಿ ಗ್ರಾಮದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಜೂಜು ಅಡ್ಡೆ ನಡೆಯುತ್ತಿರುವ ಬಗ್ಗೆ ಪಂಚಾಯತಿ ಅಧಿಕಾರಿಗಳು ತಿಳಿಸಿದರು ಸಹ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದರು. ಜೂಜಾಟದಿಂದ ಮಹಿಳೆಯರು ಮಹಿಳೆಯ ಸಂಸಾ ರಕ್ಕೆ ತುಂಬಾ ತೊಂದರೆ ಉಂಟಾಗಿದೆ ಎಂದುವರು ಉಳಿದ ಧ್ವನಿಗೂಡಿಸಿದರು.
ಪರವಾನಿಗೆ ಪಡೆದ ಮಧ್ಯದ ಅಂಗಡಿ ಮಾಲೀಕರು. ಗ್ರಾಮಗಳಿರುವ ಸಣ್ಣಪುಟ್ಟ ಅಂಗಡಿಗಳಿಗೂ ಸಹ ಸರಬರಾಜು ಮಾಡುತ್ತಿದ್ದಾರೆ. ಇದರಿಂದ ಸಂಸಾರಗಳಲ್ಲಿ ಗಲಾಟೆ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗುತ್ತಿದೆ. ಇದಕ್ಕೆಲ್ಲ ಕಾರಣ ಅಬಕಾರಿ ಇಲಾಖೆ ಎಂದು ನೇರವಾಗಿ ಆರೋಪಿಸಿದರು. ಈ ವೇಳೆ ಸ್ಥಳೀಯ ಅಬಕಾರಿ ಅಧಿಕಾರಿ ಕೂಡ ಸಭೆಯಲ್ಲಿದ್ದರು.
ವಸತಿ ಯೋಜನೆಗಾಗಿ ಸಾರ್ವಜನಿಕರಿಂದ ಒಟ್ಟು 186 ಅರ್ಜಿ ಬಂದಿದ್ದು, ಅದರಲ್ಲಿ ಅಂಬೇಡ್ಕರ್ ವಸತಿ ಯೋಜನೆಯಲ್ಲಿ 10 ಮನೆ ಪರಿಶಿಷ್ಟ ಜಾತಿ ಹಾಗೂ 5 ಮನೆಯನ್ನು ಪರಿಶಿಷ್ಟ ಪಂಗಡಕ್ಕೆ ಹಾಗೂ ಬಸವ ವಸತಿ ಯೋಜನೆಯ 24 ಮನೆಗಳಲ್ಲಿ 20 ಸಾಮಾನ್ಯ ವರ್ಗ, ಅಲ್ಪ ಸಂಖ್ಯಾತರರಿಗೆ 4 ಮನೆಗಳು ಆಯ್ಕೆ ಆಗಿರುವ ಬಗ್ಗೆ ಸಭೆಯಲ್ಲಿ ವಿವರಿಸಲಾಗಿದೆ.
ಈ ಸಂದರ್ಭದಲ್ಲಿ ಅಬಕಾರಿ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಶಿವಕುಮಾರ್, ಶಿಕ್ಷಣ ಇಲಾಖೆ ಸಿಆರ್ಪಿ ಸಿದ್ದಲಿಂಗಪ್ಪ, ತೋಟಗಾರಿಕೆ ಇಲಾಖೆ ಪುಟ್ಟಸ್ವಾಮಿ, ಉಪಾಧ್ಯಕ್ಷರು ದಕ್ಷಿಣಮೂರ್ತಿ. ಎಸ್, ಸದಸ್ಯರುಗಳಾದ ಶಿವಶಂಕರ, ಮಂಜುಳಾ, ಉಮಾಪತಿ, ಚಿಕ್ಕನಾಗಮ್ಮ, ನಂಜಮಣಿ, ಬಸಮ್ಮಣಿ, ನೀಲಯ್ಯ, ಕುಮಾರ್, ಪಿಡಿಒ ಕೆಂಪೇಗೌಡ, ಎಸ್ ಡಿ ಎ ವಿಶ್ವನಾಥ್, ಬಿಲ್ ಕಲೆಕ್ಟರ್ ಪ್ರಕಾಶ್ ಹಾಗೂ ಗ್ರಾಮಸ್ಥರು ಅಂಗನವಾಡಿ, ಆಶಾ, ಕಾರ್ಯಕರ್ತರು ವಿವಿಧ ಇಲಾಖೆ ನೌಕರರು ಹಾಜರಿದ್ದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications