ಕೆಪಿಎಸ್ಸಿ ಗೆಜೆಟೆಡ್ ಅಧಿಕಾರಿಗಳ ನೇಮಕದಲ್ಲಿ ಅಕ್ರಮ: ಕೆಪಿಸಿಸಿ ಆರೋಪ
ಮೈಸೂರು, ಸೆಪ್ಟೆಂಬರ್ 17: ಕೆಪಿಎಸ್ಸಿಯ ಮೂಲಕ 2015 ರಲ್ಲಿ 428 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಡಿಜಿಟಲ್ ಮೌಲ್ಯಮಾಪನದಲ್ಲಿ ಅಕ್ರಮ ನಡೆದಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.
ಇಂದು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಲಕ್ಷ್ಮಣ್, ಕೆಪಿಎಸ್ಸಿ ಮೇಲೆ ಗುರುತರ ಆರೋಪ ಮಾಡಿದ್ದಾರೆ. ಕೆಲ ವಿದ್ಯಾರ್ಥಿಗಳು ಮೌಲ್ಯಮಾಪನದ ಉತ್ತರ ಪತ್ರಿಕೆಯನ್ನು ಆರ್ ಟಿಐ ಮೂಲಕ ಪಡೆದು ಹೈಕೋರ್ಟ್ ಗೆ ಸಲ್ಲಿಸಿದ್ದಾರೆ. ಕೆಲ ವಿದ್ಯಾರ್ಥಿಗಳು ಡಿಜಿಟಲ್ ಮೌಲ್ಯಮಾಪನದಲ್ಲಿ ಅಂಕಗಳನ್ನು ಬದಲಾವಣೆ ಮಾಡಿದ್ದಾರೆ ಎಂದು ದೂರಿದ್ದಾರೆ.
ಇದಕ್ಕೆ ಪೂರಕವೆಂಬಂತೆ ಮಹಾರಾಷ್ಟ್ರ ಮೂಲದ ಇಂಡಿಯನ್ ಸೈಬರ್ ಇನ್ಸ್ಟಿಟ್ಯೂಟ್ ನವರು ಮೌಲ್ಯಮಾಪನದಲ್ಲಿ ಅಕ್ರಮ ನಡೆದಿದೆ ಎಂಬ ವರದಿ ನೀಡಿದ್ದಾರೆ. ಉತ್ತರ ಪತ್ರಿಕೆಯ ಪ್ರತಿಗಳನ್ನು ಅಭ್ಯರ್ಥಿಗಳಿಗೆ ನೀಡಬೇಕೆಂದು ಕೋರ್ಟ್ ಆದೇಶಿಸಿದ್ದರೂ, ಕೆಪಿಎಸ್ಸಿ ಉತ್ತರ ಪತ್ರಿಕೆ ನೀಡುತ್ತಿಲ್ಲ. ಅಭ್ಯರ್ಥಿಗಳ ಅಂಕಗಳನ್ನು ತಿದ್ದಿದ್ದಾರೆ ಎಂದು ದೂರಿದರು.

ಮೌಲ್ಯಮಾಪಕರ ಸಹಿಯನ್ನು ಡಿಜಿಟಲ್ ರೂಪದಲ್ಲಿ ಮಾಡಬೇಕು. ಆದರೆ ಯಾವ ಮೌಲ್ಯಮಾಪಕರ ಸಹಿ ಇಲ್ಲದಿರುವುದು ಆರೋಪಕ್ಕೆ ಪುಷ್ಠಿ ನೀಡುವಂತಿದೆ. ಜೊತೆಗೆ ಅಭ್ಯರ್ಥಿಗಳಿಗೆ ಕಳುಹಿಸಿರುವ ಅಂಕಪಟ್ಟಿಯಲ್ಲಿ ಕೆಪಿಎಸ್ಸಿ ಲೋಗೋ ಮತ್ತು ಕಾರ್ಯದರ್ಶಿಯವರ ಸಹಿ ಇಲ್ಲ.
ಈ ಲೋಪಗಳಿಗೆ ನಾವು ಕೆಪಿಎಸ್ಸಿ ಅಧ್ಯಕ್ಷರನ್ನು ದೂಷಣೆ ಮಾಡುತ್ತಿಲ್ಲ. ಇದರಲ್ಲಿ ಯಾವುದೋ ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ತಿಳಿಸಿದರು.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications