Get Updates
Get notified of breaking news, exclusive insights, and must-see stories!

ಕಾರಾಪುರದಲ್ಲಿ ಗಿಳಿಗಳ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪಿಯ ಬಂಧನ

ಮೈಸೂರು, ಏಪ್ರಿಲ್ 01: ಹೋಟೆಲ್‌ವೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 9 ಜೊತೆ ಗಿಳಿಗಳನ್ನು ವಶಕ್ಕೆ ಪಡೆದುಕೊಂಡು ಆರೋಪಿಯನ್ನು ಬಂಧಿಸಿರುವ ಘಟನೆ ಎಚ್.ಡಿ.ಕೋಟೆ ತಾಲೂಕಿನ ಕಾರಾಪುರ ಗ್ರಾಮದಲ್ಲಿ ನಡೆದಿದೆ.

ಕಾರಾಪುರ ಗ್ರಾಮದ ನಿವಾಸಿ ಅಬ್ದುಲ್ ರಶೀದ್ ಎಂಬುವವರ ಪುತ್ರ ನೂರ್‌ಉಲ್ಲಾ (45) ಬಂಧಿತ ಆರೋಪಿಯಾಗಿದ್ದಾನೆ. ಈತ ಡಿಸ್ಕವರಿ ಹೋಟೆಲ್‌ನಲ್ಲಿ ರೋಸರಿಂಗ್ ಪ್ಯಾರಾಕಿಟ್ ಎಂಬ ಜಾತಿಯ 9 ಗಿಳಿಗಳನ್ನು ಮಾರಾಟ ಮಾಡುವ ಸಲುವಾಗಿ ಬಚ್ಚಿಟ್ಟಿದ್ದನಲ್ಲದೆ, ಮಾರಾಟ ಮಾಡಲು ವ್ಯವಹಾರ ಕುದುರಿಸುತ್ತಿದ್ದನು ಎನ್ನಲಾಗಿದೆ.

ಈ ಕುರಿತಂತೆ ಅರಣ್ಯ ಸಂಚಾರಿ ದಳದ ಪ್ರಭಾರ ಪಿಎಸ್ಐ ಎಂ.ಬಿ.ರಮೇಶ್ ಅವರಿಗೆ ಸಾರ್ವಜನಿಕರು ಮಾಹಿತಿ ನೀಡಿದ ಹಿನ್ನಲೆಯಲ್ಲಿ ತಮ್ಮ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದು ಆರೋಪಿ ನೂರ್ ಉಲ್ಲಾನನ್ನು ಬಂಧಿಸಿ ಆತನ ಬಳಿಯಿದ್ದ ಗಿಳಿಗಳನ್ನು ವಶಕ್ಕೆ ಪಡೆಯಲಾಗಿದೆ.

Illegal sale of parrots:Police arrested accused

ಅಲ್ಲದೇ ಆರೋಪಿ ವಿರುದ್ಧ ವನ್ಯ ಜೀವಿ ಕಾಯಿದೆ 1972 ರ ಅಡಿ ಪ್ರಕರಣ ದಾಖಲಿಸಿಕೊಂಡು ಎಚ್.ಡಿ.ಕೋಟೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯದ ಆದೇಶದ ಮೇರೆಗೆ ಪ್ರಕರಣವನ್ನು ಅಂತರಸಂತೆ ವನ್ಯ ಜೀವಿ ವಲಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಗೆ ವರ್ಗಾಯಿಸಲಾಗಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಕಾರ್ಯಾಚರಣೆಯಲ್ಲಿ ವೆಂಕಟಾಚಾಲಯ್ಯ, ನರಸಿಂಹಮೂರ್ತಿ, ಟಿ.ಆರ್. ರಘು, ಚೆಲುವರಾಜು, ಮಂಜುನಾಥ್, ಪ್ರದೀಪ್ ಭಾಗವಹಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+