ಕಾರಾಪುರದಲ್ಲಿ ಗಿಳಿಗಳ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪಿಯ ಬಂಧನ
ಮೈಸೂರು, ಏಪ್ರಿಲ್ 01: ಹೋಟೆಲ್ವೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 9 ಜೊತೆ ಗಿಳಿಗಳನ್ನು ವಶಕ್ಕೆ ಪಡೆದುಕೊಂಡು ಆರೋಪಿಯನ್ನು ಬಂಧಿಸಿರುವ ಘಟನೆ ಎಚ್.ಡಿ.ಕೋಟೆ ತಾಲೂಕಿನ ಕಾರಾಪುರ ಗ್ರಾಮದಲ್ಲಿ ನಡೆದಿದೆ.
ಕಾರಾಪುರ ಗ್ರಾಮದ ನಿವಾಸಿ ಅಬ್ದುಲ್ ರಶೀದ್ ಎಂಬುವವರ ಪುತ್ರ ನೂರ್ಉಲ್ಲಾ (45) ಬಂಧಿತ ಆರೋಪಿಯಾಗಿದ್ದಾನೆ. ಈತ ಡಿಸ್ಕವರಿ ಹೋಟೆಲ್ನಲ್ಲಿ ರೋಸರಿಂಗ್ ಪ್ಯಾರಾಕಿಟ್ ಎಂಬ ಜಾತಿಯ 9 ಗಿಳಿಗಳನ್ನು ಮಾರಾಟ ಮಾಡುವ ಸಲುವಾಗಿ ಬಚ್ಚಿಟ್ಟಿದ್ದನಲ್ಲದೆ, ಮಾರಾಟ ಮಾಡಲು ವ್ಯವಹಾರ ಕುದುರಿಸುತ್ತಿದ್ದನು ಎನ್ನಲಾಗಿದೆ.
ಈ ಕುರಿತಂತೆ ಅರಣ್ಯ ಸಂಚಾರಿ ದಳದ ಪ್ರಭಾರ ಪಿಎಸ್ಐ ಎಂ.ಬಿ.ರಮೇಶ್ ಅವರಿಗೆ ಸಾರ್ವಜನಿಕರು ಮಾಹಿತಿ ನೀಡಿದ ಹಿನ್ನಲೆಯಲ್ಲಿ ತಮ್ಮ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದು ಆರೋಪಿ ನೂರ್ ಉಲ್ಲಾನನ್ನು ಬಂಧಿಸಿ ಆತನ ಬಳಿಯಿದ್ದ ಗಿಳಿಗಳನ್ನು ವಶಕ್ಕೆ ಪಡೆಯಲಾಗಿದೆ.

ಅಲ್ಲದೇ ಆರೋಪಿ ವಿರುದ್ಧ ವನ್ಯ ಜೀವಿ ಕಾಯಿದೆ 1972 ರ ಅಡಿ ಪ್ರಕರಣ ದಾಖಲಿಸಿಕೊಂಡು ಎಚ್.ಡಿ.ಕೋಟೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯದ ಆದೇಶದ ಮೇರೆಗೆ ಪ್ರಕರಣವನ್ನು ಅಂತರಸಂತೆ ವನ್ಯ ಜೀವಿ ವಲಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಗೆ ವರ್ಗಾಯಿಸಲಾಗಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಕಾರ್ಯಾಚರಣೆಯಲ್ಲಿ ವೆಂಕಟಾಚಾಲಯ್ಯ, ನರಸಿಂಹಮೂರ್ತಿ, ಟಿ.ಆರ್. ರಘು, ಚೆಲುವರಾಜು, ಮಂಜುನಾಥ್, ಪ್ರದೀಪ್ ಭಾಗವಹಿಸಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications