ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾರಾಪುರದಲ್ಲಿ ಗಿಳಿಗಳ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪಿಯ ಬಂಧನ

|
Google Oneindia Kannada News

ಮೈಸೂರು, ಏಪ್ರಿಲ್ 01: ಹೋಟೆಲ್‌ವೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 9 ಜೊತೆ ಗಿಳಿಗಳನ್ನು ವಶಕ್ಕೆ ಪಡೆದುಕೊಂಡು ಆರೋಪಿಯನ್ನು ಬಂಧಿಸಿರುವ ಘಟನೆ ಎಚ್.ಡಿ.ಕೋಟೆ ತಾಲೂಕಿನ ಕಾರಾಪುರ ಗ್ರಾಮದಲ್ಲಿ ನಡೆದಿದೆ.

ಕಾರಾಪುರ ಗ್ರಾಮದ ನಿವಾಸಿ ಅಬ್ದುಲ್ ರಶೀದ್ ಎಂಬುವವರ ಪುತ್ರ ನೂರ್‌ಉಲ್ಲಾ (45) ಬಂಧಿತ ಆರೋಪಿಯಾಗಿದ್ದಾನೆ. ಈತ ಡಿಸ್ಕವರಿ ಹೋಟೆಲ್‌ನಲ್ಲಿ ರೋಸರಿಂಗ್ ಪ್ಯಾರಾಕಿಟ್ ಎಂಬ ಜಾತಿಯ 9 ಗಿಳಿಗಳನ್ನು ಮಾರಾಟ ಮಾಡುವ ಸಲುವಾಗಿ ಬಚ್ಚಿಟ್ಟಿದ್ದನಲ್ಲದೆ, ಮಾರಾಟ ಮಾಡಲು ವ್ಯವಹಾರ ಕುದುರಿಸುತ್ತಿದ್ದನು ಎನ್ನಲಾಗಿದೆ.

ಉರುಳು ಹಾಕಿ ಹಂದಿಗಳನ್ನು ಬೇಟೆಯಾಡುತ್ತಿದ್ದ ನಾಲ್ವರು ಬೇಟೆಗಾರರ ಬಂಧನಉರುಳು ಹಾಕಿ ಹಂದಿಗಳನ್ನು ಬೇಟೆಯಾಡುತ್ತಿದ್ದ ನಾಲ್ವರು ಬೇಟೆಗಾರರ ಬಂಧನ

ಈ ಕುರಿತಂತೆ ಅರಣ್ಯ ಸಂಚಾರಿ ದಳದ ಪ್ರಭಾರ ಪಿಎಸ್ಐ ಎಂ.ಬಿ.ರಮೇಶ್ ಅವರಿಗೆ ಸಾರ್ವಜನಿಕರು ಮಾಹಿತಿ ನೀಡಿದ ಹಿನ್ನಲೆಯಲ್ಲಿ ತಮ್ಮ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದು ಆರೋಪಿ ನೂರ್ ಉಲ್ಲಾನನ್ನು ಬಂಧಿಸಿ ಆತನ ಬಳಿಯಿದ್ದ ಗಿಳಿಗಳನ್ನು ವಶಕ್ಕೆ ಪಡೆಯಲಾಗಿದೆ.

Illegal sale of parrots:Police arrested accused

ಅಲ್ಲದೇ ಆರೋಪಿ ವಿರುದ್ಧ ವನ್ಯ ಜೀವಿ ಕಾಯಿದೆ 1972 ರ ಅಡಿ ಪ್ರಕರಣ ದಾಖಲಿಸಿಕೊಂಡು ಎಚ್.ಡಿ.ಕೋಟೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯದ ಆದೇಶದ ಮೇರೆಗೆ ಪ್ರಕರಣವನ್ನು ಅಂತರಸಂತೆ ವನ್ಯ ಜೀವಿ ವಲಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಗೆ ವರ್ಗಾಯಿಸಲಾಗಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಕಾರ್ಯಾಚರಣೆಯಲ್ಲಿ ವೆಂಕಟಾಚಾಲಯ್ಯ, ನರಸಿಂಹಮೂರ್ತಿ, ಟಿ.ಆರ್. ರಘು, ಚೆಲುವರಾಜು, ಮಂಜುನಾಥ್, ಪ್ರದೀಪ್ ಭಾಗವಹಿಸಿದ್ದರು.

English summary
Police arrested the accused for attempting illegal sale of parrots. This incident took place in Karapur village of HD Kote Taluk.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X