83ನೇ ಕನ್ನಡ ಸಾಹಿತ್ಯ ಸಮ್ಮೇಳನದ ಹೆಸರಿನಲ್ಲಿ ಅಕ್ರಮ ವಸೂಲಿ?
ಮೈಸೂರು, ನವೆಂಬರ್ 5 : ಅರಮನೆ ನಗರಿ ಮೈಸೂರಿನಲ್ಲಿ ನವೆಂವರ್ 24 ರಿಂದ 26ರವರೆಗೆ ನಗರದಲ್ಲಿ ನಡೆಯುವ 83ನೇ ಕನ್ನಡ ಸಾಹಿತ್ಯ ಸಮ್ಮೇಳನದ ಹೆಸರಿನಲ್ಲಿ ಸಗಟು ವ್ಯಾಪಾರಿಗಳಿಂದ ದವಸ ಧಾನ್ಯ, ಹಣ ವಸೂಲಿ ಮಾಡಲಾಗುತ್ತಿದೆಯೇ?! ಹೌದು ಹೀಗೊಂದು ಮಾತುಗಳು ಸದ್ಯ ಮೈಸೂರಿಗರಲ್ಲಿ ಮನೆ ಮಾಡಿದೆ.
ಈ ಪ್ರಶ್ನೆ ಜನರಲ್ಲಿ ಕಾಡಲು ಪ್ರಮುಖ ಕಾರಣವೇ ಸಾಮಾಜಿಕ ಜಾಲತಾಣ. ಮೈಸೂರಿನ ಯುವಕನೋರ್ವ ಫೇಸ್'ಬುಕ್ ನಲ್ಲಿ ಈ ರೀತಿಯ ಪೋಸ್ಟ್ ವೊಂದನ್ನು ಹಾಕಿದ್ದಾನೆ.

ಸಮ್ಮೇಳನಕ್ಕಾಗಿ ಸರ್ಕಾರದಿಂದ ಆರು ಕೋಟಿ ರೂ.ಅನುದಾನ ಬಿಡುಗಡೆಯಾಗಿದ್ದರೂ, ಹತ್ತು ಕೋಟಿ ಅನುದಾನ ನೀಡಲಾಗುವುದು ಎಂದು ಉಸ್ತುವಾರಿ ಸಚಿವರೇ ಭರವಸೆ ನೀಡಿದ್ದಾರೆ.
ಆದರೆ ಕೆಲವರು ಸಂಘಟನೆ ಹೆಸರಿನಲ್ಲಿ ಸಾಹಿತ್ಯ ಸಮ್ಮೇಳನದ ಹೆಸರು ಹೇಳಿಕೊಂಡು 'ಕಲೆಕ್ಷನ್' ಮಾಡುತ್ತಿದ್ದಾರೆ. ಇವರಿಗೆ ಜಿಲ್ಲಾಡಳಿತವಾಗಲಿ, ಪೊಲೀಸ್ ಇಲಾಖೆಯಾಗಲಿ ಎಚ್ಚರಿಕೆ ನೀಡಿಲ್ಲ. ಈ ಬಗ್ಗೆ ಯಾವುದೇ ಭಯವೂ ಇಲ್ಲದೇ ವಸೂಲಿಯಲ್ಲಿ ತೊಡಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ನಕಲಿ ರಸೀದಿ ನೀಡಿ ಸಂತೆಪೇಟೆ, ಬಂಡಿಪಾಳ್ಯ ಎಪಿಎಂಸಿ ಸೇರಿದಂತೆ ಹಲವೆಡೆಗೆ ಹೋಗಿ ಕನ್ನಡ ಸಾಹಿತ್ಯ ಸಮ್ಮೇಳನದ ಹೆಸರಿನಲ್ಲಿ ಸಗಟು ವ್ಯಾಪಾರಿಗಳಿಂದ ಅಕ್ಕಿ, ಸಕ್ಕರೆ, ಬೆಲ್ಲ ಸೇರಿದಂತೆ ದವಸ ಧಾನ್ಯಗಳನ್ನು ಮೂಟೆ ಲೆಕ್ಕದಲ್ಲಿ ವಸೂಲಿ ಮಾಡಲಾಗುತ್ತಿದೆ.
ಜತೆಗೆ ಕೆಲ ವರ್ತಕರಿಂದ ಹಣ ವಸೂಲಿ ಮಾಡಿ ಅವರಿಗೆ ಸಾಹಿತ್ಯ ಸಮ್ಮೇಳನದ ಹೆಸರಿನಲ್ಲಿ ಮುದ್ರಿಸಿಕೊಂಡಿರುವ ನಕಲಿ ರಶೀದಿ ನೀಡಲಾಗುತ್ತಿದೆ. ನೀಡದಿದ್ದರೆ ಎಲ್ಲಿ ನಮ್ಮನ್ನು ಕನ್ನಡ ವಿರೋಧಿಗಳೆಂದು ಬಿಂಬಿಸಿಬಿಡುವರೋ ಎನ್ನುವ ಭಯವಿರುವುದರಿಂದ ಯಾರೂ ಪ್ರಶ್ನೆ ಮಾಡುವುದಿಲ್ಲ ಎನ್ನಲಾಗಿದೆ. ಇದು ನಿಜವೇ ಆಗಿದ್ದರೆ ಪೊಲೀಸರು, ಜಿಲ್ಲಾಡಳಿತ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications