ತಂತ್ರಜ್ಞಾನದ ಅಳವಡಿಕೆ: ಮೈಸೂರು ಕೆಎಸ್ಆರ್ಟಿಸಿಗೆ 1 ಕೋಟಿ ಲಾಭ
ಮೈಸೂರು, ಅಕ್ಟೋಬರ್ 21 : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚತುರ ಸಾರಿಗೆ ವ್ಯವಸ್ಥೆ (ಐಟಿಎಸ್) ಜಾರಿಗೆ ಬಂದ ಮೇಲೆ ಕೆಎಸ್ಆರ್ಟಿಸಿ ವರ್ಷಕ್ಕೆ 1 ಕೋಟಿ ಉಳಿತಾಯವಾಗುತ್ತಿದೆ. ಅಲ್ಲದೆ, ಈ ವ್ಯವಸ್ಥೆ ಅಳವಡಿಸಿಕೊಳ್ಳಲು ರಾಜಸ್ಥಾನ, ಕೇರಳ, ಗುಜರಾತ್, ಮಧ್ಯಪ್ರದೇಶ ರಾಜ್ಯಗಳಿಂದ ಬೇಡಿಕೆ ಬರುತ್ತಿದೆ. ಸಾರಿಗೆ ಅಧಿಕಾರಿಗಳು ಇಲ್ಲಿಗೆ ಬಂದು ಅಧ್ಯಯನ ನಡೆಸಿ ಹೋಗಿದ್ದಾರೆ.
ಸಂಚಾರ ವ್ಯವಸ್ಥೆ ಸುಧಾರಣೆ ಜೊತೆಗೆ ಕಾರ್ಯಾಚರಣೆ ವೆಚ್ಚ ತಗ್ಗಿದೆ. ಚಾಲಕರ ಕಾರ್ಯವೈಖರಿ ಮೇಲೆ ನಿಗಾ ಇಟ್ಟಿರುವುದರಿಂದ ಅಜಾಗರೂಕತೆಯ ಚಾಲನೆ ಕಡಿಮೆಯಾಗಿದೆ. ಹೀಗಾಗಿ, ಅಪಘಾತಗಳು ಕಡಿಮೆ ಆಗಿವೆ. ಇಂಧನವೂ ಉಳಿತಾಯವಾಗುತ್ತಿದೆ' ಎಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಕ ಕೆ.ರಾಮಮೂರ್ತಿ ತಿಳಿಸಿದರು.

ಚತುರ ಸಾರಿಗೆ ವ್ಯವಸ್ಥೆ ಐಟಿಎಸ್ ವಿಶೇಷ ವಾಹನ ಶೋಧ ವ್ಯವಸ್ಥೆ (ವೆಹಿಕಲ್ ಟ್ರ್ಯಾಕಿಂಗ್ ಸಿಸ್ಟಮ್) ಮೂಲಕ 460 ಬಸ್ಗಳಿಗೂ ಜಿಪಿಎಸ್ ಅಳವಡಿಸಿ ನಿಯಂತ್ರಣಾ ಕೊಠಡಿಯಿಂದ ಮೇಲ್ವಿಚಾರಣೆ ನಡೆಸಲಾಗುತ್ತಿದೆ. ಈ ವ್ಯವಸ್ಥೆ ಮೂಲಕ ಬಸ್ ಎಲ್ಲಿದೆ, ಎಷ್ಟು ವೇಗವಾಗಿ ಹೋಗುತ್ತಿದೆ, ಎಷ್ಟು ಹೊತ್ತಿಗೆ ಮುಂದಿನ ನಿಲ್ದಾಣ ತಲುಪಲಿದೆ, ಯಾವ ನಿಲ್ದಾಣದಲ್ಲಿ ಬಸ್ ನಿಲ್ಲಿಸಿಲ್ಲ ಎಂಬ ಸಮಗ್ರ ಚಿತ್ರಣ ಸಿಗುತ್ತಿದೆ. ದ್ವಿಮುಖ ಸಂವಹನಕ್ಕೆ ಅವಕಾಶ ಕಲ್ಪಿಸಲಾಗಿದೆ. ವೇಗ ಹೆಚ್ಚಿಸಿದಾಗ ಎಚ್ಚರಿಕೆಯನ್ನೂ ನೀಡಬಹುದು. ತಮ್ಮ ಬಡಾವಣೆಯ ನಿಲ್ದಾಣಕ್ಕೆ ಎಷ್ಟು ಹೊತ್ತಿಗೆ ಬಸ್ ಬರುತ್ತದೆ ಎಂಬುದನ್ನು ಪ್ರಯಾಣಿಕರು ತಿಳಿದುಕೊಳ್ಳಬಹುದು. ಆಪ್ ಕೂಡ ಅಭಿವೃದ್ಧಿಪಡಿಸಲಾಗಿದೆ.
ಐಟಿಎಸ್ ಜಾರಿಗೂ ಮುನ್ನ ಮೈಸೂರಿನಲ್ಲಿ ಅಪಘಾತಗಳಿಂದ ಉಂಟಾಗುತ್ತಿದ್ದ ಸಮಸ್ಯೆಗಳಿಗೆ ಸಾರಿಗೆ ಸಂಸ್ಥೆ ಮೇಲೆ ವರ್ಷಕ್ಕೆ 80 ಲಕ್ಷಕ್ಕೂ ಹೆಚ್ಚು ಹೊರೆ ಬೀಳುತಿತ್ತು. ಈಗ ಶೇ 50ರಷ್ಟು ಹೊರೆ ತಗ್ಗಿದೆ. ಯಾರೋ ಅಪಘಾತ ಮಾಡಿ ಸಾರಿಗೆ ಸಂಸ್ಥೆಯನ್ನು ಹೊಣೆಗಾರಿಕೆ ಮಾಡುತ್ತಿದ್ದರು. ಈಗ ಆ ರೀತಿ ಮಾಡಲು ಸಾಧ್ಯವಾಗುತ್ತಿಲ್ಲ. ನಗರದಲ್ಲಿ 193 ಬಸ್ ನಿಲುಗಡೆ ತಾಣಗಳು ಇವೆ. ಈ ತಾಣಗಳಲ್ಲಿ ಅಳವಡಿಸಿರುವ ಡಿಜಿಟಲ್ ಫಲಕಗಳಲ್ಲಿ ಬಸ್ ಬರುವ ಸಮಯ ತೋರಿಸಲಾಗುತ್ತದೆ. ಈ ತಾಣಗಳನ್ನು ನಿಯಂತ್ರಣ ಕೊಠಡಿಯೊಂದಿಗೆ ಸಂಪರ್ಕ ಕಲ್ಪಿಸಲಾಗಿದೆ.
ಮುಖ್ಯ ನಿಲ್ದಾಣದಲ್ಲೂ ಈ ವ್ಯವಸ್ಥೆ ಇದೆ. ಯಾವ ಪ್ಲಾಟ್ಫಾರ್ಮ್ಗೆ ಯಾವ ಬಸ್ ಎಷ್ಟು ಹೊತ್ತಿಗೆ ಬರುತ್ತದೆ ಎಂಬ ಮಾಹಿತಿಯನ್ನು ಡಿಜಿಟಲ್ ಫಲಕದಲ್ಲಿ ತೋರಿಸಲಾಗುತ್ತದೆ. ಅದಷ್ಟೇ ಅಲ್ಲ; ಮುಂದಿನ ಯಾವ ಸಂಖ್ಯೆ ಬಸ್ ಎಷ್ಟು ಹೊತ್ತಿಗೆ ಬರುತ್ತದೆ ಎಂಬ ಮಾಹಿತಿಯೂ ಇರುತ್ತದೆ. ಪ್ರಯಾಣಿಕರ ಸಮಯ ಉಳಿತಾಯದ ಜತೆಗೆ ಸಂಸ್ಥೆಗೂ ಲಾಭವಾಗಿದೆ. ಹಲವು ನಗರಗಳಿಂದ ಈ ವ್ಯವಸ್ಥೆಗೆ ಬೇಡಿಕೆ ಬರುತ್ತಿದೆ ಎಂದು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಕ ಕೆ.ರಾಮಮೂರ್ತಿ ತಿಳಿಸಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications