ಮೈಸೂರು, ಯುವಕರ ಸದ್ವಿನಿಯೋಗದಿಂದ ದೇಶ ಬಲಿಷ್ಠ: ರಾಷ್ಟ್ರಪತಿ
ಮೈಸೂರು, ಡಿಸೆಂಬರ್ 30 :ಭಾರತ ಪುರಾತನ ನಾಗರಿಕತೆಗೆ ಹೆಸರುವಾಸಿಯಾಗಿದ್ದು, 2020ರ ವೇಳೆಗೆ ವಿಶ್ವದ ಹೆಚ್ಚು ಯುವಕರನ್ನು ಒಳಗೊಂಡ ರಾಷ್ಟ್ರವಾಗಿ ಬದಲಾಗಲಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಭಿಪ್ರಾಯಪಟ್ಟರು.
ಬುಧವಾರ ಮೈಸೂರಿನ ನಂಜನಗೂಡು ತಾಲೂಕಿನ ಅಡಕನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಆಯೋಜಿಸಲಾದ 17ನೇ ರಾಷ್ಟ್ರೀಯ ಜಾಂಬೂರಿ ಸಮಾವೇಶವನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಉದ್ಘಾಟಿಸಿದರು. ಬಳಿಕ ಮಾತನಾಡಿದರು.
ಜಾಂಬೂರಿ ಸ್ಕೌಟ್ಸ್ ಗೈಡ್ಸ್, ರೇಂಜರ್ಸ್ ಅಂಡ್ ರೋವರ್ಸ್ ಹಾಗೂ ಸ್ವಯಂಸೇವಕರಲ್ಲಿ ನಾಯಕತ್ವಗುಣ, ಸಹಾಯ ಮನೋಭಾವ, ನೈತಿಕ ಮಾನದಂಡಗಳು ಹಾಗೂ ಮೌಲ್ಯಗಳನ್ನು ಬೆಳೆಸಲಿದೆ. ಇದರಲ್ಲಿ ಭಾಗವಹಿಸುವವರಿಗೆ ಪರಸ್ಪರ ಆಲೋಚನೆಗಳ ವಿನಿಮಯ, ಕೌಶಲ ಹಾಗೂ ಪ್ರತಿಭಾ ಪ್ರದರ್ಶನಕ್ಕೆ ಸಹಾಯಕವಾಗಲಿದ್ದು ಯುವಕರಲ್ಲಿ ಆಂತರಿಕ ಮೌಲ್ಯ, ಸೇವೆ, ಶಿಸ್ತು, ದೇಶಭಕ್ತಿಯ ಬಗ್ಗೆ ಅರಿವು ಮೂಡಿಸಲು ಸಹಾಯಕವಾಗಲಿದೆ ಎಂದು ಹೇಳಿದರು.[ಡಿ.29 ಮೈಸೂರಿಗೆ ರಾಷ್ಟ್ರಪತಿ: ಜಾಂಬೂರಿ ಉತ್ಸವ ಉದ್ಘಾಟನೆ]

ದೇಶದ ಜನಂಖ್ಯೆಯಲ್ಲಿ ಶೇ.50ರಷ್ಟು ಮಂದಿ 25ವರ್ಷದೊಳಗಿನ ಯುವಕರಾಗಿದ್ದು, ದೇಶದ ಬಹುದೊಡ್ಡ ಆಸ್ತಿಯಾಗಿದ್ದಾರೆ. ಇಂತಹ ಆಸ್ತಿಯನ್ನು ದೇಶದ ಅಭಿವೃದ್ಧಿಗೆ, ಉತ್ತಮ ಸಮಾಜ ನಿರ್ಮಾಣಕ್ಕೆ ಸನ್ನದ್ಧಗೊಳಿಸಿ ಪ್ರೋತ್ಸಾಹಿಸಿ ಮುನ್ನಡೆಸಿದಾಗ ಮಾತ್ರ ನಿಜವಾದ ಆಸ್ತಿಯಾಗಿ ಪರಿವರ್ತನೆಯಾಗಲಿದ್ದಾರೆ. ಅಂತಹ ಜವಾಬ್ದಾರಿ ನಮ್ಮ ಮೇಲಿದೆ. ಯುವಕರನ್ನು ಕೈಹಿಡಿದು ಸರಿದಾರಿಯಲ್ಲಿ ಮುನ್ನಡೆಸಿದರೆ ಭಾರತ ವಿಶ್ವದ ಬಲಿಷ್ಠ ರಾಷ್ಟ್ರವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.
ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜೂಬಾಯಿ ರೂಢಬಾಯಿ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ರಾಸಾಯನಿಕ, ಗೊಬ್ಬರ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್, ಯುವಜನ ಸೇವೆ ಮತ್ತು ಕ್ರೀಡಾ ಸಚಿವ ವಿಜಯ್ ಗೋಯಲ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್, ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನ ಅಧ್ಯಕ್ಷ ಅನಿಲ್ ಕುಮಾರ್ ಜೈನ್, ಮುಖ್ಯ ರಾಷ್ಟ್ರೀಯ ಆಯುಕ್ತ ಬಿ.ಐ.ನಾಗರಾಳೆ, ರಾಜ್ಯದ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಸೇರಿದಂತೆ ಇನ್ನಿತರರು ಹಾಜರಿದ್ದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!











Click it and Unblock the Notifications