ನಾಡಹಬ್ಬ ದಸರಾದಲ್ಲಿ ಪರಿಸರ ಸ್ನೇಹಿ ದೀಪಾಲಂಕಾರಕ್ಕೆ ವ್ಯವಸ್ಥೆ
ಮೈಸೂರು, ಜುಲೈ 23 : ಕಾಮನ್ವೆಲ್ತ್ ಸೇರಿದಂತೆ ಮತ್ತಿತರ ಕ್ರೀಡಾಕೂಟಗಳ ಉದ್ಘಾಟನೆ ಹಾಗೂ ಸಮಾರೋಪ ಸಮಾರಂಭವನ್ನು ವರ್ಣರಂಜಿತಗೊಳಿಸಲು ಫೈರೋ ಟೆಕ್ನಿಷಿಯನ್ ಗಳು ಹೊಗೆ ರಹಿತ ಹಾಗೂ ಪರಿಸರ ಸ್ನೇಹಿ ವಿದ್ಯುನ್ಮಾನ ಹೂಕುಂಡ-ಪಟಾಕಿಗಳನ್ನು ಬಳಸುತ್ತಾರೆ. ಅವನ್ನು ಈ ಬಾರಿ ದಸಾರದ ಪಂಜಿನ ಕವಾಯತುವಿನಲ್ಲಿ ಬಳಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಅಭಿಪ್ರಾಯಪಟ್ಟರು.
ದಸರಾ ಸಿದ್ಧತೆ ಕುರಿತು ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ವಿದ್ಯುನ್ಮಾನ ಬಾಣಬಿರುಸುಗಳ ತಜ್ಞರಿಂದ ಈ ಬಗ್ಗೆ ಮಾಹಿತಿ ಪಡೆದುಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ದಸರಾ ಮೆರವಣಿಗೆ ವಿಶ್ವವಿಖ್ಯಾತ ಜಂಬೂಸವಾರಿಯನ್ನು ಈ ಬಾರಿ ಇನ್ನೂ ಹೆಚ್ಚು ಆಕರ್ಷಕವಾಗಿ ನಡೆಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಹೀಗಾಗಿ ಹೊಸ, ಭಿನ್ನ ಆಲೋಚನೆಗಳೊಂದಿಗೆ ದಸರಾ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಿದೆ. ಈ ಬಾರಿಯ ನಾಡಹಬ್ಬ ಆಚರಣೆಗೆ ಬೇಕಿರುವ ಯೋಜನೆಗಳನ್ನು ಸಾಧ್ಯವಾದಷ್ಟೂ ಮಿತವ್ಯಯದಲ್ಲಿ ಸಿದ್ಧಪಡಿಸಿಕೊಳ್ಳಿ ಎಂದರು.

ಮುಖ್ಯಮಂತ್ರಿಗಳ ಅಧ್ಯಕ್ಷತೆಯ ದಸರಾ-2018ರ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ದಸರಾ ಉಪಸಮಿತಿಗಳನ್ನು ರಚಿಸಲಾಗುವುದು ಎಂದರು.
ಬನ್ನಿಮಂಟಪದಲ್ಲಿ ನಡೆಯುವ ಪಂಜಿನ ಕವಾಯತು ಬಳಿಕದ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಶಿಷ್ಟ ಹಾಗೂ ವಿಭಿನ್ನವಾಗಿರಲಿ. ನೃತ್ಯದೊಂದಿಗೆ ಜೂಡೋ, ಮಾರ್ಷಲ್ ಆರ್ಟ್ಸ್ ಪದರ್ಶನವನ್ನೂ ವ್ಯವಸ್ಥೆ ಮಾಡಬಹುದು ಎಂದರು.
ದೇಶ-ವಿದೇಶದ ಹೆಚ್ಚಿನ ಪವಾಸಿಗರು ಆಗಮಿಸಿ ಭಾಗವಹಿಸಲು ಅವಕಾಶವಾಗುವಂತಹ ಕಾರ್ಯಕ್ರಮಗಳನ್ನೂ ರೂಪಿಸಬೇಕಿದೆ. ದಸರಾದ 15 ದಿನ ಮೊದಲು ಆಹ್ವಾನ ಪತ್ರಿಕೆಗಳು ಸಿದ್ಧಗೊಂಡು ವಿತರಣೆಯಾಗಬೇಕು. ಅದಕ್ಕಾಗಿ ರೂಪುರೇಷೆ ಸಿದ್ಧಪಡಿಸಿಕೊಳ್ಳಿ ಎಂದು ಸೂಚಿಸಿದರು.

ದಸರಾ ದೀಪಾಲಂಕಾರ ವೇಳೆ ಮರಗಳಿಗೆ, ಪಕ್ಷಿಗಳಿಗೆ ಧಕ್ಕೆ ಉಂಟಾಗುತ್ತದೆಂಬ ದೂರು ಕೇಳಿಬಂದಿವೆ. ಪಕ್ಷಿ ಸಂಕುಲಕ್ಕೆ ತೊಂದರೆಯಾಗದಂತೆ ಪರಿಸರ ಸ್ನೇಹಿ ದೀಪಾಲಂಕಾರಕ್ಕೆ ವ್ಯವಸ್ಥೆ ಮಾಡಿರಿ ಎಂದು ಕಿವಿಮಾತು ಹೇಳಿದರು. ಕಳೆದ ಬಾರಿ ದಸರಾ ಚಲನಚಿತ್ರೋತ್ಸವದಲ್ಲಿ ಸಿನಿಮಾ ಪ್ರದರ್ಶನವಷ್ಟೇ ಇತ್ತು.
ಈ ಬಾರಿ ಚಲನಚಿತ್ರ ನಿರ್ಮಾಣ, ನಿರ್ದೇಶನ, ಸಂಕಲನ, ಛಾಯಾಗ್ರಹಣ ಮುಂತಾದ ವಿಷಯಗಳ ಬಗ್ಗೆ ಪರಿಣಿತರಿಂದ ಕಾರ್ಯಾಗಾರಗಳನ್ನು ಆಯೋಜಿಸಿ ಎಂದು ಸೂಚಿಸಿದರು.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications