ನಾಡಹಬ್ಬ ದಸರಾದಲ್ಲಿ ಪರಿಸರ ಸ್ನೇಹಿ ದೀಪಾಲಂಕಾರಕ್ಕೆ ವ್ಯವಸ್ಥೆ
ಮೈಸೂರು, ಜುಲೈ 23 : ಕಾಮನ್ವೆಲ್ತ್ ಸೇರಿದಂತೆ ಮತ್ತಿತರ ಕ್ರೀಡಾಕೂಟಗಳ ಉದ್ಘಾಟನೆ ಹಾಗೂ ಸಮಾರೋಪ ಸಮಾರಂಭವನ್ನು ವರ್ಣರಂಜಿತಗೊಳಿಸಲು ಫೈರೋ ಟೆಕ್ನಿಷಿಯನ್ ಗಳು ಹೊಗೆ ರಹಿತ ಹಾಗೂ ಪರಿಸರ ಸ್ನೇಹಿ ವಿದ್ಯುನ್ಮಾನ ಹೂಕುಂಡ-ಪಟಾಕಿಗಳನ್ನು ಬಳಸುತ್ತಾರೆ. ಅವನ್ನು ಈ ಬಾರಿ ದಸಾರದ ಪಂಜಿನ ಕವಾಯತುವಿನಲ್ಲಿ ಬಳಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಅಭಿಪ್ರಾಯಪಟ್ಟರು.
ದಸರಾ ಸಿದ್ಧತೆ ಕುರಿತು ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ವಿದ್ಯುನ್ಮಾನ ಬಾಣಬಿರುಸುಗಳ ತಜ್ಞರಿಂದ ಈ ಬಗ್ಗೆ ಮಾಹಿತಿ ಪಡೆದುಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ದಸರಾ ಮೆರವಣಿಗೆ ವಿಶ್ವವಿಖ್ಯಾತ ಜಂಬೂಸವಾರಿಯನ್ನು ಈ ಬಾರಿ ಇನ್ನೂ ಹೆಚ್ಚು ಆಕರ್ಷಕವಾಗಿ ನಡೆಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಹೀಗಾಗಿ ಹೊಸ, ಭಿನ್ನ ಆಲೋಚನೆಗಳೊಂದಿಗೆ ದಸರಾ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಿದೆ. ಈ ಬಾರಿಯ ನಾಡಹಬ್ಬ ಆಚರಣೆಗೆ ಬೇಕಿರುವ ಯೋಜನೆಗಳನ್ನು ಸಾಧ್ಯವಾದಷ್ಟೂ ಮಿತವ್ಯಯದಲ್ಲಿ ಸಿದ್ಧಪಡಿಸಿಕೊಳ್ಳಿ ಎಂದರು.

ಮುಖ್ಯಮಂತ್ರಿಗಳ ಅಧ್ಯಕ್ಷತೆಯ ದಸರಾ-2018ರ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ದಸರಾ ಉಪಸಮಿತಿಗಳನ್ನು ರಚಿಸಲಾಗುವುದು ಎಂದರು.
ಬನ್ನಿಮಂಟಪದಲ್ಲಿ ನಡೆಯುವ ಪಂಜಿನ ಕವಾಯತು ಬಳಿಕದ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಶಿಷ್ಟ ಹಾಗೂ ವಿಭಿನ್ನವಾಗಿರಲಿ. ನೃತ್ಯದೊಂದಿಗೆ ಜೂಡೋ, ಮಾರ್ಷಲ್ ಆರ್ಟ್ಸ್ ಪದರ್ಶನವನ್ನೂ ವ್ಯವಸ್ಥೆ ಮಾಡಬಹುದು ಎಂದರು.
ದೇಶ-ವಿದೇಶದ ಹೆಚ್ಚಿನ ಪವಾಸಿಗರು ಆಗಮಿಸಿ ಭಾಗವಹಿಸಲು ಅವಕಾಶವಾಗುವಂತಹ ಕಾರ್ಯಕ್ರಮಗಳನ್ನೂ ರೂಪಿಸಬೇಕಿದೆ. ದಸರಾದ 15 ದಿನ ಮೊದಲು ಆಹ್ವಾನ ಪತ್ರಿಕೆಗಳು ಸಿದ್ಧಗೊಂಡು ವಿತರಣೆಯಾಗಬೇಕು. ಅದಕ್ಕಾಗಿ ರೂಪುರೇಷೆ ಸಿದ್ಧಪಡಿಸಿಕೊಳ್ಳಿ ಎಂದು ಸೂಚಿಸಿದರು.

ದಸರಾ ದೀಪಾಲಂಕಾರ ವೇಳೆ ಮರಗಳಿಗೆ, ಪಕ್ಷಿಗಳಿಗೆ ಧಕ್ಕೆ ಉಂಟಾಗುತ್ತದೆಂಬ ದೂರು ಕೇಳಿಬಂದಿವೆ. ಪಕ್ಷಿ ಸಂಕುಲಕ್ಕೆ ತೊಂದರೆಯಾಗದಂತೆ ಪರಿಸರ ಸ್ನೇಹಿ ದೀಪಾಲಂಕಾರಕ್ಕೆ ವ್ಯವಸ್ಥೆ ಮಾಡಿರಿ ಎಂದು ಕಿವಿಮಾತು ಹೇಳಿದರು. ಕಳೆದ ಬಾರಿ ದಸರಾ ಚಲನಚಿತ್ರೋತ್ಸವದಲ್ಲಿ ಸಿನಿಮಾ ಪ್ರದರ್ಶನವಷ್ಟೇ ಇತ್ತು.
ಈ ಬಾರಿ ಚಲನಚಿತ್ರ ನಿರ್ಮಾಣ, ನಿರ್ದೇಶನ, ಸಂಕಲನ, ಛಾಯಾಗ್ರಹಣ ಮುಂತಾದ ವಿಷಯಗಳ ಬಗ್ಗೆ ಪರಿಣಿತರಿಂದ ಕಾರ್ಯಾಗಾರಗಳನ್ನು ಆಯೋಜಿಸಿ ಎಂದು ಸೂಚಿಸಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications