ಎಚ್.ಡಿ.ಕೋಟೆ ಗ್ರಾಮಸ್ಥರಿಗೆ ತಲೆನೋವಾದ ಹುಲಿ –ಚಿರತೆ ಉಪಟಳ
ಮೈಸೂರು, ಮೇ 11: ಬೆಳ್ಳಂಬೆಳಗ್ಗೆ ಚಿರತೆಯೊಂದು ಎಚ್ ಡಿ ಕೋಟೆ ತಾಲೂಕಿನ ಗಡಿ ಭಾಗದಲ್ಲಿರುವ ಕ್ಯಾತನಹಳ್ಳಿ ಗ್ರಾಮದೊಳಗೆ ನುಗ್ಗಿ ರಾಜಾರೋಷವಾಗಿ ಬೀದಿಗಳಲ್ಲಿ ಅಡ್ಡಾಡಿದ್ದಲ್ಲದೇ ಮನೆಯೊಳಕ್ಕೆ ನುಗ್ಗಿ ಇಬ್ಬರ ಮೇಲೆ ದಾಳಿ ನಡೆಸಿ ಇಡೀ ಗ್ರಾಮಸ್ಥರೇ ಬೆಚ್ಚಿ ಬೀಳುವಂತೆ ಮಾಡಿದ ಘಟನೆ ಶುಕ್ರವಾರ (ಮೇ.10) ನಡೆದಿದೆ.
ಇದಾದ ಬಳಿಕ ಉರುಳಿಗೆ ಸಿಕ್ಕಿ ಕತ್ತು, ಕಾಲು ಹೊಟ್ಟೆಯ ಭಾಗದಲ್ಲಿ ಗಂಭೀರ ಗಾಯವಾಗಿ ನಿತ್ರಾಣಗೊಂಡಿದ್ದ ಚಿರತೆಯನ್ನು ಸೆರೆ ಹಿಡಿದು ಮೈಸೂರಿನ ಮೃಗಾಲಯಕ್ಕೆ ಸಾಗಿಸುತ್ತಿದ್ದ ವೇಳೆ ದಾರಿ ಮಧ್ಯದಲ್ಲೇ ಸಾವಿಗೀಡಾಗಿದೆ.
ಗ್ರಾಮದಲ್ಲಿರುವ ಸಾರ್ವಜನಿಕ ಆಸ್ಪತ್ರೆ ಬಳಿ ಶುಕ್ರವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಚಿರತೆ ಕೆಲ ರೈತರಿಗೆ ಕಾಣಿಸಿಕೊಂಡಿದೆ. ನಂತರ ರಸ್ತೆಯಲ್ಲಿ ರಾಜಾರೋಷವಾಗಿ ಅಡ್ಡಾಡಿ ನಟರಾಜ್ ಎಂಬುವರ ಮನೆಯೊಳಗೆ ನುಗ್ಗಿದೆ. ಮನೆಯೊಳಗಿದ್ದ ನಟರಾಜ್ ಅವರ ಪತ್ನಿ ಚಿರತೆಯನ್ನು ಕಂಡು ಗಾಬರಿಯಾಗಿ ಮನೆಯಿಂದ ಹೊರಬಂದು ಮುಂದಿನ ಬಾಗಿಲನ್ನು ಮುಚ್ಚಿದ್ದಾರೆ.

ಕುಟುಂಬದವರ ಕಿರುಚಾಟ ಕೇಳಿ ಸ್ಥಳಕ್ಕೆ ಬಂದ ಆನಂದಮೂರ್ತಿ ಮತ್ತು ದಾಸಶೆಟ್ಟಿ ಅವರ ಮನೆಯ ಒಳಗೆ ಪ್ರವೇಶಿಸಿ ಚಿರತೆ ನೋಡಲು ಮುಂದಾದರು. ಈ ವೇಳೆ ಮೋಟುಗೋಡೆಯ ಕೆಳಗೆ ಅವಿತಿದ್ದ ಈ ಚಿರತೆ ಇಬ್ಬರ ಮೇಲೂ ದಾಳಿ ನಡೆಸಿದೆ. ಕೂಡಲೇ ಅವರನ್ನು ಕರೆದುಕೊಂಡು ಹೋದ ಗ್ರಾಮಸ್ಥರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ.
ಗ್ರಾಮದಲ್ಲಿ ಈ ವಿಚಾರ ಹರಡುತ್ತಿದ್ದಂತೆ ನೂರಾರು ಜನ ಮನೆಯ ಸುತ್ತಲೂ ಜಮಾಯಿಸಿ ಚಿರತೆಯನ್ನು ಸೆರೆ ಹಿಡಿಯಲು ಮತ್ತು ಸಾಯಿಸಲು ಮುಂದಾಗಿದ್ದಾರೆ. ಇದನ್ನು ಗಮನಿಸಿದ ಗ್ರಾಮದ ಮುಖಂಡ ಕ್ಯಾತನಹಳ್ಳಿ ನಾಗರಾಜು ಮತ್ತಿತರರು ಅರಣ್ಯಾಧಿಕಾರಿ ಮಧು ಅವರಿಗೆ ಮಾಹಿತಿ ನೀಡಿದ್ದಾರೆ.

ಗ್ರಾಮಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ಸ್ನಾನದ ಮನೆಯಲ್ಲಿದ್ದ ಚಿರತೆಗೆ ಅರವಳಿಕೆ ಚುಚ್ಚುಮದ್ದು ನೀಡುತ್ತಿದ್ದಂತೆ, ಜ್ಞಾನ ತಪ್ಪಿ ಬಿದ್ದಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ಚಿಕಿತ್ಸೆ ನೀಡಿ ಚಿರತೆಯನ್ನು ಮೈಸೂರಿನ ಮೃಗಾಲಯಕ್ಕೆ ಸಾಗಿಸುತ್ತಿದ್ದ ವೇಳೆ ಸಾಲುಂಡಿ ಬಳಿ ಸಾವಿಗೀಡಾಗಿದೆ. ಉರುಳಿಗೆ ಸಿಲುಕಿ ಕತ್ತು ಹೊಟ್ಟೆ ಕಾಲಿಗೆ ಗಂಭೀರ ಗಾಯವಾಗಿದ್ದರಿಂದ ಹಾಗೂ ಮೂರು ವಾರಗಳಿಂದ ಆಹಾರ ಸೇವಿಸದೆ ಸಂಪೂರ್ಣ ನಿತ್ರಾಣಗೊಂಡಿತ್ತು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಹುಲಿಯ ಹೆಜ್ಜೆಯ ಗುರುತುಗಳು ಪತ್ತೆ
ತಾಲೂಕಿನ ಮೊತ್ತ ಗ್ರಾಮದ ಬಳಿ ಹುಲಿಯ ಹೆಜ್ಜೆಯ ಗುರುತುಗಳು ಪತ್ತೆಯಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಅರಣ್ಯ ಅಧಿಕಾರಿಗಳು ಸಹ ಅದು ಹುಲಿ ಹೆಜ್ಜೆ ಗುರುತು ಎಂದು ಖಚಿತ ಪಡಿಸಿಕೊಂಡಿದ್ದಾರೆ.
ನಂತರ ಹೆಜ್ಜೆಯ ಗುರುತುಗಳನ್ನು ಹಿಂಬಾಲಿಸಿ ಹೋಗಿದ್ದಾರೆ. 15 ದಿನಗಳ ಹಿಂದೆ ರವಿ ಎಂಬುವವರ ತೋಟದಲ್ಲಿ ಹುಲಿಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ರೈತರು ಆತಂಕಗೊಂಡಿದ್ದಾರೆ. ಪ್ರಾದೇಶಿಕ ವಲಯದ ಅಧಿಕಾರಿ ಮಧು, ಹುಲಿ ಸೆರೆ ಹಿಡಿಯಲು ಈಗಾಗಲೇ ಬೋನನ್ನು ಇರಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಭರವಸೆ ನೀಡಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications