ನಿಮಗೆ ಗೊತ್ತೇ? ಅರಮನೆಯಲ್ಲಿರುವ ಎಲ್ಲಾ ಕಾರುಗಳ ನಂಬರ್ 1953..!
ಮೈಸೂರು, ಅಕ್ಟೋಬರ್. 18: ಇಂದು ಗುರುವಾರ ಆಯುಧ ಪೂಜೆಯ ಹಿನ್ನೆಲೆಯಲ್ಲಿ ಎಲ್ಲರೂ ಬೆಳಗ್ಗೆಯೇ ಎದ್ದು ತಮ್ಮ ವಾಹನಗಳನ್ನು ಶುಭ್ರವಾಗಿ ಸ್ವಚ್ಛಗೊಳಿಸಿ, ಪೂಜಿಸಿ, ಸಿಂಗರಿಸಿ ಸಂತಸಪಡುತ್ತಾರೆ. ಮೈಸೂರಿನ ಅರಮನೆಯಲ್ಲಿಯೂ ಸಹ ರಾಜರು ಬಳಸಿದ ಶಸ್ತ್ರಾಸ್ತ್ರಗಳು, ಫಿರಂಗಿಗೆ ಹಾಗೂ ಪಟ್ಟದ ಪ್ರಾಣಿಗಳಿಗೆ ವಿಶೇಷ ಪೂಜೆ ಮಾಡಲಾಗುತ್ತದೆ.

ಅಂದಹಾಗೆ ರಾಜವಂಶಸ್ಥರಾದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಖಾಸಗಿ ವಾಹನಗಳ ಪೂಜೆ ನಡೆಯುವುದು ವಾಡಿಕೆ . ಅವರ ಎಲ್ಲಾ ಕಾರುಗಳನ್ನು ಸಾಲಿಗೆ ನಿಲ್ಲಿಸಿ ಪೂಜೆ ಮಾಡಲಾಗುತ್ತದೆ. ವಿಶೇಷವೆಂದರೆ ಅವರ ಎಲ್ಲಾ ಕಾರುಗಳ ಸಂಖ್ಯೆಯೂ 1953 ಎಂಬ ನಂಬರ್ ನಲ್ಲಿದೆ.

ಹೌದು, ರಾಜವಂಶಸ್ಥ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರಿಗೆ ಕಾರುಗಳ ಬಗ್ಗೆ ಬಲು ವ್ಯಾಮೋಹ. ದುಬಾರಿ ಕಾರುಗಳನ್ನು ಖರೀದಿಸುವುದು ಅವರ ಹವ್ಯಾಸವಾಗಿತ್ತು. ಅವರ ಬಳಿ ಬಿಎಂಡಬ್ಲ್ಯೂ ಕಾರಿನ ಎಲ್ಲಾ ಮಾಡೆಲ್ ಗಳು ಹಾಗೂ ಮರ್ಸಿಡೆಸ್ ಬೆಂಝ್ ಕಾರು ಸೇರಿದಂತೆ ಇಂಡಿಯನ್ ಕಾರುಗಳು ಇದ್ದವು.

ಮತ್ತೊಂದು ಕುತೂಹಲದ ವಿಷಯ ಅಂದ್ರೆ ಈ ಎಲ್ಲಾ ಕಾರಿನ ಸಂಖ್ಯೆ 1953. 1953ರಲ್ಲಿ ರಾಜ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ಜನಿಸಿದ ವರ್ಷ. ಆದ್ದರಿಂದಲೇ ಅವರ ಕಾರಿನ ಸಂಖ್ಯೆಗಳು ಸಹ ಇದೇ ಆಗಿದೆ. ಜತೆಗೆ ಅವರು ಬಳಸುತ್ತಿದ್ದ ದೂರವಾಣಿಗಳು ಸಹ ಇದೇ ಸಂಖ್ಯೆಯನ್ನು ಒಳಗೊಂಡಿತ್ತು ಎಂಬುದು ಕೌತುಕ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್












Click it and Unblock the Notifications