ಕೆಎಸ್ಆರ್ಟಿಸಿ ಬಸ್ ಹರಿದು ಮೈಸೂರಿನಲ್ಲಿ ಎರಡು ಬಲಿ
ನಿಂತಿದ್ದ ದ್ವಿಚಕ್ರ ವಾಹನದಲ್ಲಿ ಕುಳಿತು ಮಾತನಾಡುತ್ತಿದ್ದ ಈರ್ವರ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾದ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರು, ಏಪ್ರಿಲ್ 24: ನಿಂತಿದ್ದ ದ್ವಿಚಕ್ರ ವಾಹನದಲ್ಲಿ ಕುಳಿತು ಮಾತನಾಡುತ್ತಿದ್ದ ಈರ್ವರ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾದ ಘಟನೆ ಮೈಸೂರಿನ ಬನ್ನೂರು ರಿಂಗ್ ರಸ್ತೆಯಲ್ಲಿ ನಡೆದಿದೆ.
ಸಾತಗಳ್ಳಿ ಕಡೆಯಿಂದ ಕೊಲಂಬಿಯಾ ಏಷ್ಯಾ ಕಡೆಗೆ ಚಲಿಸುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಎದುರಿನಿಂದ ಬರುತ್ತಿದ್ದ ಲಾರಿಗೆ ಮುಖಾಮುಖಿಯಾಗಿತ್ತು. ಲಾರಿಗೆ ತಾಕಿ ಅನಾಹುತವಾಗದಂತೆ ತಪ್ಪಿಸುವ ಧಾವಂತದಲ್ಲಿ ಚಾಲಕ ಬಸ್ಸನ್ನು ಎಡಕ್ಕೆ ತಿರುಗಿಸಿದ್ದಾನೆ.[ನಿರ್ದೇಶಕ ಪುಟ್ಟಣ್ಣ ಕಣಗಾಲ್ ಮನೆಯಲ್ಲಿ ಕಳ್ಳತನ]

ಆದರೆ ಅಷ್ಟರಲ್ಲಾಗಲೇ ಲಾರಿ ಬಂದು ಬಸ್ಸಿಗೆ ಗುದ್ದಿದ ಪರಿಣಾಮ, ಬಸ್ಸು ಹತ್ತಿರದ ಪೆಟ್ಟಿಗೆ ಅಂಗಡಿ, ವಿದ್ಯುತ್ ಕಂಬಗಳಿಗೆ ಗುದ್ದಿದ್ದಲ್ಲದೆ, ರಸ್ತೆ ಬದಿಯಲ್ಲಿ ಮಾತನಾಡುತ್ತ ನಿಂತಿದ್ದ ಇಬ್ಬರು ಸವಾರರ ಮೇಲೆ ನುಗ್ಗಿದೆ. ಬಸ್ ಹರಿದ ಪರಿಣಾಮ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ ಸಿದ್ದಾರ್ಥ ನಗರ ಸಂಚಾರಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications