ದಸರಾದಲ್ಲಿ ಈ ಬಾರಿ ಮೈಸೂರು ಮೃಗಾಲಯಕ್ಕೆ ಬಂದ ಆದಾಯವೆಷ್ಟು?
ಮೈಸೂರು, ಅಕ್ಟೋಬರ್ 9: ಕಳೆದ ಮೂರು ವರ್ಷದಲ್ಲಿ ಆಯುಧ ಪೂಜೆ ಹಾಗೂ ದಸರಾ ಹಬ್ಬದ ಹತ್ತು ದಿನಗಳ ಅವಧಿಯ ಮೃಗಾಲಯದ ವೀಕ್ಷಕರ ಸಂಖ್ಯೆ ಹಾಗೂ ಆದಾಯದಲ್ಲಿ ಏರಿಕೆ ಕಂಡಿದೆ.
ಮೈಸೂರು ಮೃಗಾಲಯಕ್ಕೆ ಈ ಬಾರಿ ಹತ್ತು ದಿನದಲ್ಲಿ 1.65 ಲಕ್ಷ ಜನರು ಭೇಟಿ ನೀಡಿದ್ದು, ಒಟ್ಟಾರೆ ಟಿಕೆಟ್ ನಿಂದ 159.76 ಲಕ್ಷ ಆದಾಯ ಸಂಗ್ರಹವಾಗಿದೆ.
2016ರಲ್ಲಿ ಹತ್ತು ದಿನಗಳ ಅವಧಿಯಲ್ಲಿ ವೀಕ್ಷಕರ ಸಂಖ್ಯೆ 1.24 ಲಕ್ಷವಿದ್ದು, ಟಿಕೆಟ್ ನಿಂದ 70.53 ಲಕ್ಷ ಸಂಗ್ರಹವಾಗಿತ್ತು. ವಿಜಯ ದಶಮಿ ದಿನದಂದು 15.08 ಲಕ್ಷ ರೂಪಾಯಿ ಸಂಗ್ರಹವಾಗಿತ್ತು. 2017ರಲ್ಲಿ ಹತ್ತು ದಿನಗಳ ಅವಧಿಯಲ್ಲಿ ವೀಕ್ಷಕರ ಸಂಖ್ಯೆ 1.23 ಲಕ್ಷವಿದ್ದು, ಟಿಕೆಟ್ ನಿಂದ ಆದಾಯ 69.17 ಲಕ್ಷ ರೂಪಾಯಿ ದೊರೆತಿತ್ತು.

2018ರಲ್ಲಿ 1.53ಲಕ್ಷ ವೀಕ್ಷಕರು ಬಂದಿದ್ದು, 105.64 ಲಕ್ಷ ರೂ ಆದಾಯ ಸಂಗ್ರಹವಾಗಿತ್ತು. ಈ ಬಾರಿ, ಅಂದರೆ, 2019ರಲ್ಲಿ 1.65 ಲಕ್ಷ ವೀಕ್ಷಕರು ಭೇಟಿ ನೀಡಿದ್ದು, 159.76 ಲಕ್ಷ ರೂಪಾಯಿ ಆದಾಯ ಸಂಗ್ರಹವಾಗಿದೆ. ಆಯುಧ ಪೂಜೆ ದಿನ 30,273 ಜನ ಭೇಟಿ ನೀಡಿದ್ದು, 29.77 ಲಕ್ಷ ರೂ, ವಿಜಯದಶಮಿ ದಿನ 28,386 ಜನರು ಭೇಟಿ ನೀಡಿದ್ದು, 28.28 ಲಕ್ಷ ರೂಪಾಯಿ ಸಂಗ್ರಹವಾಗಿರುವುದಾಗಿ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications