ಕಬಿನಿ ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಳ, ಇದಕ್ಕಿಂತ ಖುಷಿ ಏನಿದೆ?
ಮೈಸೂರು, ಜೂನ್ 29 : ಕಾವೇರಿ, ಕಬಿನಿ ಜಲಾಶಯ ಭಾಗಗಳಲ್ಲಿ ನಿರಂತರವಾಗಿ ನೈಋತ್ಯ ಮುಂಗಾರು ಮಳೆ ಸುರಿಯುತ್ತಿರುವುದರಿಂದ ಕೃಷ್ಣರಾಜಸಾಗರ, ಕಬಿನಿ ಜಲಾಶಯದ ನೀರಿನ ಒಳ ಹರಿವು ಹೆಚ್ಚಾಗಿದೆ.
4 ಸಾವಿರ ಕ್ಯುಸೆಕ್ ನೀರು ಹೆಚ್ಚಾಗಿದ್ದು, ಇದೇ ರೀತಿ ಮಳೆ ಮುಂದುವರಿದರೆ ಕೆಆರ್ ಎಸ್ ಡ್ಯಾಮ್ ನ ನೀರಿನ ಮಟ್ಟ ಹೆಚ್ಚಾಗಲಿದೆ. ಗರಿಷ್ಟ ಮಟ್ಟ 124.85 ಅಡಿ ಇದ್ದು, ಇದೀಗ 68.85 ಅಡಿ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೂರು ವರ್ಷಗಳಿಂದ ಕೈಕೊಟ್ಟು ರಾಜ್ಯವನ್ನು ತೀವ್ರ ಬರಗಾಲ ಇತ್ತು. ಮುಂಗಾರು ಮಳೆ ಈ ಬಾರಿ ಆಶಾಕಿರಣ ಮೂಡಿಸಿದೆ. ರಾಜ್ಯದ ಬಹುತೇಕ ಕಡೆ ಮುಂಗಾರು ಚುರುಕುಗೊಂಡಿದ್ದು, ಕರಾವಳಿ, ಮಲೆನಾಡು ಮತ್ತಿತರ ಪ್ರದೇಶಗಳಲ್ಲಿ ಉತ್ತಮ ಮಳೆ ಬೀಳತೊಡಗಿದೆ.
ಪ್ರಮುಖ ಜಲಾಶಯಗಳ ಸುತ್ತಮುತ್ತಲೂ ಎರಡು ಮೂರು ದಿನಗಳಿಂದ ಧಾರಾಕಾರ ಮಳೆ ಸುರಿಯತೊಡಗಿದೆ. ಇದರ ಪರಿಣಾಮ ಜಲಾಶಯಕ್ಕೆ ಹೆಚ್ಚಿನ ನೀರು ಹರಿದುಬರುತ್ತಿದೆ.
ಇನ್ನು ಕೇರಳದ ವೈನಾಡು ಪ್ರದೇಶದಲ್ಲಿ ಸತತ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಬೀಚನಹಳ್ಳಿ ಬಳಿ ಇರುವ ಕಬಿನಿ ಜಲಾಶಯದ ನೀರಿನ ಒಳಹರಿವು ಹೆಚ್ಚಾಗಿದ್ದು, ಗರಿಷ್ಠ ಮಟ್ಟ 2,285 ಅಡಿ ಇದ್ದು, ಇಂದಿನ ಮಟ್ಟ 2,257 ಅಡಿಗಳಷ್ಟು ನೀರು ಬಂದಿದೆ.
ಮುಂದಿನ ದಿನಗಳಲ್ಲಿ ಇದೇ ರೀತಿ ಮಳೆ ಸುರಿದರೆ ಇನ್ನೂ ಹೆಚ್ಚು ನೀರು ಬರಲಿದೆ ಎಂದು ಕಬಿನಿ ಜಲಾಶಯದ ಎಂಜಿನಿಯರ್ ಗಳು ತಿಳಿಸಿದ್ದಾರೆ. ಕೊಡಗು, ಕೇರಳ ಭಾಗದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ಎಚ್ ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳ ಹರಿವು ಹೆಚ್ಚಳವಾಗಿದೆ.
ಹೀಗಾಗಿ ಜಲಾಶಯಕ್ಕೆ ಹರಿದು ಬರುತ್ತಿರುವ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಎಚ್.ಡಿ.ಕೋಟೆ ಭಾಗದ ರೈತರಲ್ಲಿ ಸಂತಸ ಮೂಡಿದೆ.
ಗುರುವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿಯ ಬಹುತೇಕ ಕಡೆ, ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ. ಆದರೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಘಟ್ಟ ಪ್ರದೇಶಗಳ ಒಂದೆರಡು ಕಡೆ ಭಾರೀ ಮಳೆ ಸುರಿಯುವ ಸಂಭವವಿದೆ. ಮೈಸೂರು ಭಾಗದಲ್ಲೂ ಇನ್ನೂ ಐದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
-
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ












Click it and Unblock the Notifications