ಮೈಸೂರಲ್ಲಿ ಕೊರೊನಾ ಸೋಂಕು ಪರೀಕ್ಷೆ ಹೆಚ್ಚಳ: ಜಿಲ್ಲಾಧಿಕಾರಿ
ಮೈಸೂರು, ಜುಲೈ 28: ಮೈಸೂರು ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ಸೋಂಕಿತರನ್ನು ಬೇಗನೆ ಪತ್ತೆ ಹಚ್ಚುವ ನಿಟ್ಟಿನಲ್ಲಿ ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆಯನ್ನು ಹೆಚ್ಚಿಸಲಾಗುವುದೆಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
Recommended Video
ರ್ಯಾಪಿಡ್ ಪರೀಕ್ಷೆ ಕುರಿತು ಮಾಹಿತಿ ನೀಡಿದ ಅವರು ನರಸಿಂಹರಾಜ ಕ್ಷೇತ್ರದಲ್ಲಿ ನಡೆಯುತ್ತಿದ್ದ ಪರೀಕ್ಷೆಯನ್ನು ಇತರ ವಿಧಾನಸಭಾ ಕ್ಷೇತ್ರಗಳಿಗೂ ವಿಸ್ತರಿಸಲಾಗಿದೆ. ಕೃಷ್ಣರಾಜ ಕ್ಷೇತ್ರ ವ್ಯಾಪ್ತಿಯ ನಾಚನಹಳ್ಳಿ, ಚಾಮರಾಜ ಕ್ಷೇತ್ರ ವ್ಯಾಪ್ತಿಯ ಮೊದಲ ಹಂತದಲ್ಲಿ 2300 ಆ್ಯಂಟಿಜೆನ್ ಕಿಟ್ ಪೂರೈಸಲಾಗಿತ್ತು.
ಹೋಂ ಕ್ವಾರಂಟೈನ್ ನಲ್ಲಿ ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು ಒಳಗೊಂಡಂತೆ ಕೆಲವು ಜಿಲ್ಲೆಗಳಿಗೆ ಮಾತ್ರ ಹೆಚ್ಚಿನ ಸಂಖ್ಯೆಯಲ್ಲಿ ಕಿಟ್ ನೀಡಲಾಗಿತ್ತು. ಎರಡನೇ ಹಂತದಲ್ಲಿ ವಿವಿಧ ಜಿಲ್ಲೆಗಳಿಗೆ ಒಟ್ಟು ಹತ್ತುಸಾವಿರ ಕಿಟ್ ನೀಡಲಾಗಿದ್ದು, ಮೈಸೂರಿಗೂ ಹೆಚ್ಚಿನ ಕಿಟ್ ಗಳು ಬಂದಿವೆ ಎಂದಿದ್ದಾರೆ.
ಎನ್.ಆರ್ ಕ್ಷೇತ್ರದಲ್ಲಿ 7 ದಿನ ಸತತವಾಗಿ ಆ್ಯಂಟಿಜೆನ್ ಕಿಟ್ ಮೂಲಕ ರ್ಯಾಪಿಡ್ ಪರೀಕ್ಷೆ ಮಾಡಲಾಗಿತ್ತು. ಅದಕ್ಕಾಗಿ ಸಿಬ್ಬಂದಿಗೆ ಎರಡು ದಿನ ವಿಶ್ರಾಂತಿ ನೀಡಲಾಗಿತ್ತು. ಶನಿವಾರ, ಭಾನುವಾರ ಪರೀಕ್ಷೆ ನಡೆಯಲಿಲ್ಲ. ಸೋಮವಾರದಿಂದ ಮತ್ತೆ ಆರಂಭಿಸಲಾಗಿದೆ. ಕಿಟ್ ಗಳ ಕೊರತೆಯಿಂದ ಪರೀಕ್ಷೆ ನಿಲ್ಲಿಸಲಾಗಿದೆ ಎಂಬ ವರದಿ ತಪ್ಪು ಎಂದು ಸ್ಪಷ್ಟಪಡಿಸಿದ್ದಾರೆ.
ಎಸ್ಕೇಪ್ ಆಗಲು ಮೈಸೂರು ಡಿಸಿ ನಂಬರ್ ಕೊಟ್ಟು ಯಾಮಾರಿಸಿದ ಸೋಂಕಿತ
ಮೈಸೂರು ವೈದ್ಯಕೀಯ ಕಾಲೇಜು, ಅಪೋಲೊ ಮತ್ತು ಜೆಎಸ್ಎಸ್ ಆಸ್ಪತ್ರೆಯಲ್ಲೂ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ. ಈ ಹಿಂದೆ ದಿನಕ್ಕೆ 450 ರಿಂದ 700 ಪರೀಕ್ಷೆ ನಡೆದಿದ್ದರೆ ಈಗ 1,200 ಪರೀಕ್ಷೆಗಳು ನಡೆಯುತ್ತಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.