ವಿಕಲಚೇತನ ಮಕ್ಕಳೊಂದಿಗೆ ಮೈಸೂರ್ ವಾರಿಯರ್ಸ್!
ಮೈಸೂರಿನಲ್ಲಿ ಸಾರ್ಥಕ ಸ್ವಾತಂತ್ರ್ಯೋತ್ಸವ. ಅಂಗವಿಕಲ ಶಾಲಾ ವಿದ್ಯಾರ್ಥಿಗಳೊಂದಿಗೆ ಆಟವಾಡಿದ ಮೈಸೂರು ವಾರಿಯರ್ಸ್ ತಂಡ.
ಮೈಸೂರು, ಆಗಸ್ಟ್ 15: ನಗರದ ರಂಗರಾವ್ ಸ್ಮಾರಕ ವಿಕಲಚೇತನರ (ಆರ್ಎಂಎಸ್ಡಿ) ಶಾಲೆಯ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯಕ್ತ ನಡೆದ ಆಸಕ್ತಿದಾಯಕ ಸೌಹಾರ್ಧ ಕ್ರಿಕೆಟ್ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ತಂಡದ ಆಟಗಾರರು ವಿಕಲಚೇತನ ಮಕ್ಕಳೊಂದಿಗೆ ಕ್ರಿಕೆಟ್ ಆಡುವ ಮೂಲಕ ಗಮನಸೆಳೆದರು.
ಅಂಧ ಮಕ್ಕಳೊಂದಿಗೆ ಕ್ರಿಕೆಟ್ ಆಡುವ ವೇಳೆ ಮೈಸೂರು ವಾರಿಯರ್ಸ್ ತಂಡದ ಆಟಗಾರರು ಕಣ್ಣನ್ನು ಮುಚ್ಚಿ ಆಟವಾಡಿದ್ದು ವಿಶೇಷವಾಗಿತ್ತು. ಮಕ್ಕಳು ಆಟಗಾರರೊಂದಿಗೆ ಆಟವಾಡಿ ಸಂಭ್ರಮಿಸಿದರು.

ಕೆಲವು ವಿದ್ಯಾರ್ಥಿನಿಯರು ಬೌಲಿಂಗ್ ಮಾಡಿದರೆ, ಆಟಗಾರರು ಬ್ಯಾಟಿಂಗ್ ಮಾಡಿದರು. ಆಟಗಾರರು ಬೌಲಿಂಗ್ ಮಾಡಿದರೆ ವಿದ್ಯಾರ್ಥಿನಿಯರು ಬ್ಯಾಟಿಂಗ್ ಮಾಡಿದರು. ಒಂದಷ್ಟು ಸಮಯ ಖುಷಿಯಾಗಿ ಕಾಲ ಕಳೆದ ಆಟಗಾರರು ಮಕ್ಕಳೊಂದಿಗೆ ಫೋಟೋ ತೆಗೆಯಿಸಿಕೊಂಡು ಸಂತಸಪಟ್ಟರು.

ಇದೇ ವೇಳೆ ಶಾಲಾವರಣದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯದಿನಾಚರಣೆ ಆಚರಿಸಲಾಯಿತು.
ಎನ್ಆರ್ ಸಮೂಹದ ಅಧ್ಯಕ್ಷ ಗುರು, ಸಂಸ್ಥೆಯ ಸುಪ್ರೀಮ್ ಸಾಲಿಯಾನ್, ಸಿಇಓ ಪ್ಲಾನ್ಸಿ, ಅರ್ಜುನ್ ರಂಗ ಸೇರಿದಂತೆ ಹಲವರು ಇದ್ದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications