ವಿಶ್ವಕ್ಕೆ ಭಾರತೀಯರು ಸಂಸ್ಕಾರ ಕಲಿಸಬಲ್ಲರು: ವಜೂಭಾಯ್ ವಾಲಾ
ಜನ ದುಡ್ಡಿನ ಹಿಂದೆ ಬಿದ್ದು ನೆಮ್ಮದಿಯ ಜೀವನದಿಂದ ದೂರಾಗುತ್ತಿದ್ದಾರೆ. ಆದರೆ ಆಧ್ಯಾತ್ಮಿಕ ಚಿಂತನೆಗಳನ್ನು ಮೈಗೂಡಿಸಿಕೊಂಡರೆ ಮಾತ್ರ ಬದುಕು ಹಸನಾಗುತ್ತದೆ ಎಂದು ವಜೂಭಾಯ್ ವಾಲಾ ಹೇಳಿದರು
ಮೈಸೂರು , ಏಪ್ರಿಲ್ 3 : ಭಾರತೀಯರಿಗೆ ದೇಶಕಟ್ಟುವ ಶಕ್ತಿಯೊಂದಿಗೆ ವಿಶ್ವಕ್ಕೆ ಸಂಸ್ಕಾರ ಕಲಿಸುವ ಸಾಮರ್ಥ್ಯವೂ ಇದೆ ಎಂದು ರಾಜ್ಯಪಾಲ ವಜೂಭಾಯ್ ರೂಢಾಬಾಯ್ ವಾಲಾ ಅಭಿಪ್ರಾಯಪಟ್ಟರು.
ಅಂತಾರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘ(ಇಸ್ಕಾನ್)ದ ವತಿಯಿಂದ ಏಪ್ರಿಲ್ 2 ಭಾನುವಾರದಂದು ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ 150 ಕೋಟಿ ರೂ. ವೆಚ್ಚದ ನವ ಬೃಂದಾವನ ಧಾಮದ ಶಿಲಾನ್ಯಾಸವನ್ನು ನೆರವೇರಿಸಿ, ಅವರು ಮಾತನಾಡಿದರು.['ಇಂದಿರಾ ಕ್ಯಾಂಟೀನ್'ಗೆ ಈರುಳ್ಳಿ-ಬೆಳ್ಳುಳ್ಳಿ ಸಂಕಟ]

ದೇಶದಲ್ಲಿ ಭೌತಿಕತೆ ಹಾಗೂ ಆಧ್ಯಾತ್ಮಿಕತೆಯ ಮಧ್ಯೆ ಸಂಘರ್ಷವೇರ್ಪಟ್ಟಿದೆ. ಎಲ್ಲರೂ ಭೋಗ ಜೀವನ ಶೈಲಿಗೆ ಮಾರು ಹೋಗಿದ್ದಾರೆ. ಇದರಿಂದ ಅವರ ಮಾನಸಿಕ, ದೈಹಿಕ ಶಾಂತಿ, ನೆಮ್ಮದಿ ಹಾಳಾಗುತ್ತಿದೆ. ದುಡ್ಡಿನ ಹಿಂದೆ ಬಿದ್ದು ನೆಮ್ಮದಿಯ ಜೀವನದಿಂದ ದೂರಾಗುತ್ತಿದ್ದಾರೆ. ಆದರೆ ಆಧ್ಯಾತ್ಮಿಕ ಚಿಂತನೆಗಳನ್ನು ಮೈಗೂಡಿಸಿಕೊಂಡರೆ ಮಾತ್ರ ಬದುಕು ಹಸನಾಗುತ್ತದೆ ಎಂದರು.
ಇಸ್ಕಾನ್ ಸಂಸ್ಥೆ ವಿಶ್ವಕ್ಕೆ ಕೃಷ್ಣನ ಶಾಂತಿ ಸಂದೇಶಗಳನ್ನು ಸಾರುವ ಮೂಲಕ ಸಾಮಾಜಿಕ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಇಲ್ಲಿನ ಇಸ್ಕಾನ್ ಸಂಸ್ಥೆಯ ಎಲ್ಲರೂ ಸಮಾಜದ ಅಭಿವೃದ್ಧಿಗೆ ತಮ್ಮ ಜೀವನವನ್ನೆ ಮುಡಿಪಾಗಿಟ್ಟಿದ್ದಾರೆ, ಅವರನ್ನು ಗೌರವಿಸುವ ಅಗತ್ಯತೆ ಇದೆ ಎಂದು ಇಸ್ಕಾನ್ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಮೈಸೂರು ಸಾಂಸ್ಕೃತಿಕ ನಗರಿ, ಅರಮನೆಗಳ ನಗರಿ, ಶಾಂತಿಯ ನಗರಿ, ಸಂಸ್ಕಾರಗಳ ನಗರಿ ಎಂದೆಲ್ಲಾ ಕರೆಸಿಕೊಂಡಿರುವ ಮೈಸೂರನ್ನು ಚಾಮುಂಡೇಶ್ವರಿ ಪೊರೆಯುತ್ತಿದ್ದು, ಬೃಂದಾವನ ಧಾಮದ ನಿರ್ಮಾಣದಿಂದ ಕೃಷ್ಣನ ಶ್ರೀರಕ್ಷೆಯೂ ಮೈಸೂರಿಗರಿಗೆ ಒಲಿಯಲಿದೆ ಎಂದು ಹೇಳಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications