ಕೊಡಗಿನಲ್ಲಿ ಧಾರಾಕಾರ ಮಳೆ: ಕೆಆರ್ ಎಸ್ ಒಳ ಹರಿವು ಹೆಚ್ಚಳ
ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕೆಆರ್ ಎಸ್ ಡ್ಯಾಂನ ಒಳಹರಿವಿನಲ್ಲಿ ಗಣನೀಯ ಹೆಚ್ಚಳ. ಕಳೆದೊಂದು ವಾರದಲ್ಲಿ ಅಣೆಕಟ್ಟಿಗೆ 20 ಸಾವಿರ ಕ್ಯುಸೆಕ್ಸ್ ನೀರು ಹರಿವು ಬಂದಿದೆ ಎಂದು ಹೇಳಿದ ಮೂಲಗಳು.
ಬೆಂಗಳೂರು, ಜುಲೈ 22: ಮಂಡ್ಯ ಜಿಲ್ಲೆಯ ಕೃಷ್ಣರಾಜ ಸಾಗರ ಅಣೆಕಟ್ಟು (ಕೆಆರ್ ಎಸ್ ಡ್ಯಾಂ) ಇನ್ನೂ ಭರ್ತಿಯಾಗಿಲ್ಲ ಎಂಬ ಕೊರಗು ಕಾಡುತ್ತಿದ್ದ ಅನೇಕರಿಗೆ ಈಗ ಖುಷಿಪಡುವ ಸಂದರ್ಭ ಬಂದಿದೆ. ಹಾಗೆಂದ ಮಾತ್ರಕ್ಕೇ ಅಣೆಕಟ್ಟು ತುಂಬಿದೆ ಎಂದರ್ಥವಲ್ಲ. ಕೊಡಗಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಅಣೆಕಟ್ಟಿನ ಒಳ ಹರಿವು ಹೆಚ್ಚಾಗಿದೆ. ಇದು ಮೈಸೂರು ಪ್ರಾಂತ್ಯದ ರೈತ ಸಮುದಾಯಕ್ಕೆ ಸಮಾಧಾನ ತಂದಿದೆ.
ಕಳೆದೊಂದು ವಾರದಿಂದ ಒಳಹರಿವು ಹೆಚ್ಚಾಗಿದ್ದು, ಈವರೆಗೆ ಕೆಆರ್ ಎಸ್ ಗೆ 20 ಸಾವಿರ ಕ್ಯುಸೆಕ್ಸ್ ನೀರು ಬಂದಿದೆ. ಜಲಾಶಯದ ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಸದ್ಯದ ಮಟ್ಟ 83 ಅಡಿ ಇದೆ. ಅಣೆಕಟ್ಟಿನಿಂದ ಮೂರು ಸಾವಿರ ಮೂರು ಸಾವಿರ ಕ್ಯುಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ.

ಅತ್ತ, ಕಬಿನಿ ಜಲಾಶಯಕ್ಕೂ ನೀರಿನ ಒಳ ಹರಿವು ಹೆಚ್ಚಾಗಿದ್ದು, ಶನಿವಾರದಂತೆ ಅಣೆಕಟ್ಟಿನಲ್ಲಿನ ನೀರಿನ ಮಟ್ಟ 2.275 ಕ್ಯೂಸೆಕ್ಸ್ ಇದೆ. ಜಲಾಶಯದ ಗರಿಷ್ಠ ಮಟ್ಟ 2,284 ಅಡಿ ಆಗಿದ್ದು, ಡ್ಯಾಮ್ ನಿಂದ ಪ್ರತಿನಿತ್ಯ ಒಂದು ಸಾವಿರ ಕ್ಯುಸೆಕ್ಸ್ ನೀರು ಹರಿಯಬಿಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ರೈತರ ಆಕ್ರೋಶ: ಕೆಆರ್ ಎಸ್ ಜಲಾಶಯದಿಂದ ದಿನವೊಂದಕ್ಕೆ ಮೂರು ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಬಿಡುತ್ತಿರುವುದು ಕರ್ನಾಟಕ ವ್ಯಾಪ್ತಿಯ ಕಾವೇರಿ ಕಣಿವೆಯ ರೈತರಲ್ಲಿ ಆಕ್ರೋಶ ತಂದಿದೆ. ಅಣೆಕಟ್ಟು ತುಂಬುವುದಕ್ಕೂ ಮುನ್ನವೇ ಈ ರೀತಿ ತಮಿಳುನಾಡಿಗೆ ನೀರು ಬಿಡುವುದರಿಂದ ಕರ್ನಾಟಕದ ರೈತರಿಗೆ ತೊಂದರೆಯಾಗುತ್ತದೆ ಎಂದು ಅವರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications