ಬಿಗ್ ಬಾಸ್ ಶೋ ನಿಂದ ಅನ್ಯಾಯ : ದೂರು ನೀಡಲು ಮುಂದಾದ ಟೈಲರ್
ಮೈಸೂರು, ನವೆಂಬರ್ 15 : ಖಾಸಗಿ ವಾಹಿನಿ ಕಲರ್ಸ್ ಕನ್ನಡದಲ್ಲಿ, ಪರಮೇಶ್ವರ ಗುಂಡ್ಕಲ್ ಅವರ ಉಸ್ತುವಾರಿಯಲ್ಲಿ ಬಿತ್ತರವಾಗುತ್ತಿರುವ ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಶೋನಲ್ಲಿ ಅನ್ಯಾಯವಾಗಿದೆ ಎಂದು ನಗರದ ಟೈಲರ್ ಭಯಾನಕ ನಾಗರಾಜ ಉರುಫ್ ನಾಗರಾಜ್ ದೂರಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ನಡೆಯುತ್ತಿರುವ ಬಿಗ್ ಬಾಸ್ ನಲ್ಲಿ ಸಾಮಾನ್ಯರಿಗೆ ಅವಕಾಶ ನೀಡಲಾಗುವುದೆಂದು ಘೋಷಿಸಿತ್ತು, ಈ ಹಿನ್ನಲೆಯಲ್ಲಿ ಅನ್ ಲೈನ್ ಮುಖಾಂತರ 40 ಸಾವಿರ ಅಧಿಕ ಅರ್ಜಿಗಳು ಬಂದಿದ್ದು, ಇದರಂತೆ ನಾನು ಅರ್ಜಿ ಗುಜರಾಯಿಸಿದ್ದೆ, ಅರ್ಜಿ ಅಂಗೀಕೃತವಾಗಿ ರಸೀದಿಯು ಬಂದಿತ್ತು, ಕಾರ್ಯಕ್ರಮ ಆರಂಭವಾಗುವವರೆಗೆ ಕಾದಿದ್ದೆ, ಆದರೆ ಯಾವುದೇ ಸೂಚನೆ ನೀಡದೆ ಇದ್ದರಿಂದ ನನ್ನ ಸಮಯ ವ್ಯರ್ಥವಾಗಿದೆ, ಈ ಬಗ್ಗೆ ನ್ಯಾಯಾಂಗ ಹೋರಾಟ ಮಾಡಲಾಗುವುದು ಎಂದು ದೂರಿದರು.

ಟೈಲರ್ ವೃತ್ತಿ ನಿರ್ವಹಿಸುತ್ತಿರುವ ನಾನು ಒಬ್ಬ ಸಾಮಾನ್ಯ, ನನ್ನ ಸ್ವವಿವರ ಹಾಗೂ ಇತರರಿಗಿಂತ ಭಿನ್ನವೆಂದು ವಿಡಿಯೋವನ್ನು ಅಪ್ ಲೋಡ್ ಮಾಡಿದ್ದೆ, ಈಗ ಸ್ಪರ್ಧೆಯಲ್ಲಿ ಭಾಗಿಯಾಗಿರುವ ಸಾಮಾನ್ಯರು ಹೇಗೆ ಭಿನ್ನವೆಂದು ಎಲ್ಲಿಯೂ ಸ್ಪಷ್ಟನೇ ನೀಡಿಲ್ಲ.
ಪ್ರಯೋಜಕರು ಪೂರ್ವ ನಿರ್ಣಯದಂತೆ ಸ್ಪರ್ಧಿಗಳನ್ನು ಆಯ್ಕೆ ಮಾಡಿಕೊಂಡಿದ್ದು, ಕೇವಲ ಟಿಆರ್.ಪಿಗಾಗಿ ಸಾಮಾನ್ಯರಿಗೆ ಅವಕಾಶ ನೀಡಲಾಗುವುದು ಎಂದು ಸುಳ್ಳು ಪ್ರಕಟಣೆ ನೀಡಿದ್ದು ಅಕ್ಷಮ್ಯವೆಂದ ಅವರು, ಕೊನೆಪಕ್ಷ ಸೈನಿಕರ ಮಕ್ಕಳಿಗಾದರೂ ಅವಕಾಶ ನೀಡಿದ್ದರೆ ಅವರ ಕುಟುಂಬಗಳಿಗೆ ಸಹಾಯವಾಗುತ್ತಿತ್ತು, ಪೂರ್ವ ನಿಯೋಜಿತ ಕಾರ್ಯಕ್ರಮದಂತೆ ನಡೆಯುತ್ತಿರುವ ಬಿಗ್ ಬಾಸ್ ನಿಲ್ಲಬೇಕೆಂದು ಇಲ್ಲವೇ ವಾಹಿನಿ ವಿರುದ್ಧ ನ್ಯಾಯಾಂಗ ಹೋರಾಟ ನಡೆಸುವುದಾಗಿ ಹೇಳಿದರು.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications