ಪುನೀತ್ ಸ್ಪೂರ್ತಿ: ಮೈಸೂರಲ್ಲಿ ಹೆಚ್ಚಾಯಿತು ನೇತ್ರದಾನಿಗಳ ಸಂಖ್ಯೆ
ಮೈಸೂರು,ಜುಲೈ 28: ಕನ್ನಡ ಖ್ಯಾತ ನಟ ಪುನೀತ್ ರಾಜ್ ಕುಮಾರ್ ನಿಧನದ ಬಳಿಕ ಮೈಸೂರಿನಲ್ಲಿ ನೇತ್ರದಾನಿಗಳ ಸಂಖ್ಯೆ ಹೆಚ್ಚಾಗಿದೆ. ಆ ಮೂಲಕ ಹಲವರು ದೃಷ್ಟಿಚೇತನರ ಬದುಕಿನಲ್ಲಿ ಬೆಳಕು ಮೂಡಿಸುತ್ತಿದ್ದಾರೆ.
ಜಿಲ್ಲೆಯ ಮಾಹಿತಿ ಪ್ರಕಾರ ಕಳೆದ ಏಳು ತಿಂಗಳಲ್ಲಿ 3,200 ಕ್ಕೂ ಹೆಚ್ಚು ಮಂದಿ ಕಣ್ಣಿನ ದಾನ ಮಾಡಲಿಚ್ಚಿಸಿ ಒಪ್ಪಿಗೆ ಪತ್ರ ನೀಡಿದ್ದಾರೆ. ಎಂಟು ತಿಂಗಳಲ್ಲಿ 88 ಮಂದಿ ಮೃತಪಟ್ಟವರ ನೇತ್ರಗಳನ್ನು ಅವರ ಕುಟುಂಬದವರು ದಾನ ಮಾಡಿ ನೂರಾರು ಮಂದಿಗೆ ಬೆಳಕಾಗಿದ್ದಾರೆ. ನಗರದ ಕೆ.ಆರ್.ಆಸ್ಪತ್ರೆಯಲ್ಲಿ ಮರಣ ಹೊಂದಿದವರ ಕಣ್ಣು (ಅಯ್ ಬಾಲ್)ದಾನ ಮಾಡುವ ಪ್ರಮಾಣ ಹೆಚ್ಚಾಗಿದೆ.
ಅಗತ್ಯ ಇರುವವರಿಗೆ ಅಳವಡಿಕೆ
2021ರ ಅಕ್ಟೋಬರ್ನಲ್ಲಿ ಮೃತಪಟ್ಟ 14, ಡಿಸೆಂಬರ್ನಲ್ಲಿ 16, 2022ರ ಜನವರಿಯಲ್ಲಿ 12, ಫೆಬ್ರವರಿಯಲ್ಲಿ 10, ಮಾರ್ಚ್ನಲ್ಲಿ 16, ಏಪ್ರಿಲ್ನಲ್ಲಿ 6, ಮೇ ತಿಂಗಳಲ್ಲಿ 6 ಹಾಗೂ ಜೂನ್ನಲ್ಲಿ 8 ಮಂದಿಯ ನೇತ್ರಗಳನ್ನು ಸಂಗ್ರಹಿಸಲಾಗಿದೆ. ಅವುಗಳನ್ನು ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಂಡು ಕಣ್ಣಿನ ದೃಷ್ಟಿ ಸಂಪೂರ್ಣ ನಷ್ಟವಾಗಿದೆ ಎಂದು ಕಂಡುಬಂದ ಮೊದಲು ನೋಂದಾಯಿಸಿಕೊಂಡಿರುವ ಫಲಾನುಭವಿಗಳಿಗೆ ಜೋಡಣೆ ಮಾಡಲಾಗಿದೆ. ಉಳಿದವು, ಅಗತ್ಯವಿರುವ ಸರಕಾರಿ ಆಸತ್ರೆಗಳಿಗೆ ಕಳುಹಿಸಿ ಅಲ್ಲಿ ಅಗತ್ಯವಿರುವವರಿಗೆ ಅಳವಡಿಸಲಾಗುತ್ತಿದೆ.

ದಾನ ಮಾಡುವ ಕ್ರಮ?
ಮೊದಲೇ ಕಣ್ಣಿನ ದಾನ ಮಾಡಲು ನೋಂದಣಿ ಮಾಡಿದ್ದವರು ಮೃತಪಟ್ಟಲ್ಲಿ 8 ಗಂಟೆಯೊಳಗಾಗಿ ಕಣ್ಣುಗಳನ್ನು ಸಂಗ್ರಹಿಸಲಾಗುತ್ತದೆ. ಕ್ಯಾನ್ಸರ್ನಂತಹ ಕಾಯಿಲೆ ಹಾಗೂ ಯಾವುದೇ ಇನ್ನಿತರ ಸೋಂಕು ಇದ್ದವರನ್ನು ಹೊರತುಪಡಿಸಿ ಉಳಿದಂತೆ ಎಲ್ಲ ವಯಸ್ಸಿನ ನೋಂದಾಯಿತ ಮೃತ ಪಟ್ಟವರ ದೇಹದಿಂದ ಕಣ್ಣುಗಳನ್ನು ಸಂಗ್ರಹಿಸಲಾಗುವುದು. ಕಣ್ಣುಗಳ ದಾನ ಮಾಡಲು ಬಯಸುವ ಕುಟುಂಬದವರು ಕೆ.ಆರ್.ಆಸ್ಪತ್ರೆ ನೇತ್ರ ಭಂಡಾರದ ನೇತ್ರಾಧಿಕಾರಿ ಡಾ.ಚಂದ್ರಕಲಾ ಅವರನ್ನು ಸಂಪರ್ಕಿಸಬಹುದು. ಮೊ: 831045 9334, 9448392947, 9449406787.
"ಎಂಟು ತಿಂಗಳ ಹಿಂದೆ ನಡೆದ ಪುನೀತ್ ರಾಜ್ಕುಮಾರ್ (2021ರ ಅಕ್ಟೋಬರ್) ಅವರ ಕಣ್ಣು ದಾನದಿಂದ ನಾಲ್ಕು ಮಂದಿಗೆ ದೃಷ್ಟಿ ಬಂದಿತ್ತು. ಈ ಸೇವಾ ಕಾರ್ಯ ನಿಜಕ್ಕೂ ಸಾರ್ವಜನಿಕರ ಕಣ್ಣು ತೆರೆಸಿದೆ. ಇತ್ತೀಚೆಗೆ ಮೃತಪಟ್ಟವರ ಕಡೆಯವರು ಕಣ್ಣುದಾನ ಮಾಡಲು ಹೆಚ್ಚಾಗಿ ಮುಂದೆ ಬರುತ್ತಿದ್ದಾರೆ. ಹೀಗಾಗಿ ಕಳೆದ 8 ತಿಂಗಳಲ್ಲಿ ಹೆಚ್ಚುವರಿಯಾಗಿ ನೂರಾರು ಮಂದಿಗೆ ದೃಷ್ಟಿ ನೀಡಲು ಸಾಧ್ಯವಾಗಿದೆ"ಎಂದು ಕೆ.ಆರ್.ಆಸ್ಪತ್ರೆ ಕಣ್ಣಿನ ವಿಭಾಗದ ಮುಖ್ಯಸ್ಥ ಡಾ.ಕೆ.ಸತೀಶ್ ತಿಳಿಸಿದ್ದಾರೆ.

ನಟ ಪುನೀತ್ ರಾಜ್ಕುಮಾರ್ ರಿಂದ ಸಾಕಷ್ಟು ಮಂದಿ ಅವರ ಅಭಿಮಾನಿಗಳು, ಸಾರ್ವಜನಿಕರು ಸ್ಫೂರ್ತಿಗೊಂಡಿದ್ದಾರೆ. ಕುಟುಂಬದಲ್ಲಿ ಯಾರಾದರೂ ಮರಣ ಹೊಂದಿದರೆ ಅವರ ಅಂಗಾಂಗಗಳು ಬೇರೆಯವರಿಗೆ ಅನುಕೂಲವಾಗುವುದಾರೆ ಬಳಸಿಕೊಳ್ಳಲಿ ಎಂಬ ಅರಿವು ಮೂಡಿದೆ. ಹೀಗಾಗಿ ಅಂಗಾಂಗ ದಾನ ಮಾಡುವ ಪ್ರಕ್ರಿಯೆ ಹೆಚ್ಚಾಗಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications