Get Updates
Get notified of breaking news, exclusive insights, and must-see stories!

ನಾಟಕದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ಗೆ ಅವಮಾನ ಆರೋಪ, ಮೈಸೂರಿನಲ್ಲಿ "ಕೈ" ಕಾರ್ಯಕರ್ತರ ಸಮರ

ಮೈಸೂರು, ಜನವರಿ, 10: 'ಸಾಂಬಶಿವ ಪ್ರಹಸನ' ನಾಟಕದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಅವಹೇಳನ ಘಟನೆ ಸಂಭವಿಸಿದ್ದು, ಇದನ್ನು ಖಂಡಿಸಿ ಸ್ವಾಭಿಮಾನಿ ಹೋರಾಟ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.

ರಂಗಾಯಣದ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಅವರನ್ನು ವಜಾ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಕಾಂಗ್ರೆಸ್ ಪಕ್ಷ ಸೇರಿದಂತೆ ನಾನಾ ಸಂಘಟನೆಗಳ ಸದಸ್ಯರು ರಂಗಾಯಣಕ್ಕೆ ಮುತ್ತಿಗೆ ಹಾಕುವ ಪ್ರಯತ್ನವನ್ನು ಮಾಡಿದರು. ಹಾಗೆಯೇ ಸರ್ಕಾರದ ವಿರುದ್ದ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ನಿಷೇಧಾಜ್ಞೆ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಪೊಲೀಸರು, ಮುತ್ತಿಗೆ ಹಾಕಲು ತೆರಳುತ್ತಿದ್ದ ಪ್ರತಿಭಟನಾಕಾರರನ್ನು ಜಿಲ್ಲಾಧಿಕಾರಿ ಕಚೇರಿ ಬಳಿಯೇ ತಡೆದು ವಾಪಾಸ್ ಕಳುಹಿಸಿದರು. ಯಾವುದೇ ಅನಾಹುತ ಆಗದಂತೆ ಪೊಲೀಸ್ ಬಂದೋ ಬಸ್ತ್ ಕೈಗೊಳ್ಳಲಾಗಿತ್ತು.

ಎನ್‌ಆರ್ ‍ಕ್ಷೇತ್ರದಲ್ಲಿ ಹಿಡಿತ ಸಾಧಿಸಿದ ತನ್ವೀರ್ ಸೇಠ್: ಈ ಬಾರಿ ಪ್ರತಿ ಸ್ಫರ್ಧಿ ಯಾರು..?
ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್, ವಕ್ತಾರ ಎಂ.ಲಕ್ಷ್ಮಣ್, ಪ್ರಗತಿಪರ ಚಿಂತಕ ಟಿ.ಗುರುರಾಜ್, ಹಿರಿಯ ರಂಗಕರ್ಮಿ ಕೃಷ್ಣಪ್ರಸಾದ್ ಸೇರಿದಂತೆ ಇತರರು ಸಮಾಜದಲ್ಲಿ ಅಶಾಂತಿ ವಾತಾವರಣ ನಿರ್ಮಾಣ ಮಾಡುತ್ತಿರುವ ಅಡ್ಡಂಡ ಕಾರ್ಯಪ್ಪ ವಿರುದ್ಧ ವಾಗ್ದಾಳಿ ನಡೆಸಿದರು. ಮೈಸೂರು ವಿಶ್ವವಿದ್ಯಾಲಯ ಕ್ರಾರ್ಡ್ ಹಾಲ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಯಿತು. ಅಲ್ಲಿಂದ ಹುಣಸೂರು ರಸ್ತೆಯಲ್ಲಿರುವ ಕಲಾಮಂದಿರದ ಆವರಣದಲ್ಲಿರುವ ರಂಗಾಯಣಕ್ಕ ಮುತ್ತಿಗೆ ಹಾಕಲು ಕಾರ್ಯಕರ್ತರು ಯತ್ನಿಸಿದರು. ಆದರೆ, ಪೊಲೀಸರು ಇದಕ್ಕೆ ಅವಕಾಶ ನೀಡಲಿಲ್ಲ. ರಸ್ತೆಯುದ್ದಕ್ಕೂ ತಮಟೆ ಬಡಿಕೊಂಡು ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ನಡೆಸಿದರು.

 6 ಗಂಟೆಯವರೆಗೂ 144 ಸೆಕ್ಷನ್ ಜಾರಿ

6 ಗಂಟೆಯವರೆಗೂ 144 ಸೆಕ್ಷನ್ ಜಾರಿ

ಜಿಲ್ಲಾಧಿಕಾರಿ ಕಚೇರಿಯ ಕಮಾನು ಗೇಟ್ ಬಳಿಯೇ ಬ್ಯಾರಿಕೇಡ್ ಮುಂದೆ ಸಾಕಷ್ಟು ಕಾರ್ಯಕರ್ತರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ರಂಗಾಯಣದ 200 ಮೀಟರ್ ಸುತ್ತ ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೂ ಪೊಲೀಸ್ ಆಯುಕ್ತ ರಮೇಶ್ ಬಾನೋಟ್ 144 ಸೆಕ್ಷನ್ ಜಾರಿಗೊಳಿಸಿದ್ದರು.

 ಪ್ರತಿಭಟನೆಯಲ್ಲಿ ಯಾರೆಲ್ಲ ಭಾಗಿಯಾಗಿದ್ದರು?

ಪ್ರತಿಭಟನೆಯಲ್ಲಿ ಯಾರೆಲ್ಲ ಭಾಗಿಯಾಗಿದ್ದರು?

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ಎಂ.ಕೆ. ಸೋಮಶೇಖರ್, ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷ ಡಾ.ಪುಷ್ಪಾ ಅಮರನಾಥ್, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ವಿಜಯ್ ಕುಮಾರ್, ಹಿಂದುಳಿದ ಜಾಗೃತ ವೇದಿಕೆಗಳ ಅಧ್ಯಕ್ಷ ಕೆ.ಎಸ್. ಶಿವರಾಂ ಸೇರಿದಂತೆ ಮತ್ತಿರರು ಇದ್ದರು.

 ಆಕ್ರೋಶಕ್ಕೆ ಕಾರಣವಾದ ಅಂಶಗಳ ವಿವರ

ಆಕ್ರೋಶಕ್ಕೆ ಕಾರಣವಾದ ಅಂಶಗಳ ವಿವರ

ರಂಗಾಯಣದ ಭೂಮಿಗೀತದಲ್ಲಿ ನಾಗರತ್ನಮ್ಮ ಕಾರ್ಯಾಗಾರ ವಿದ್ಯಾರ್ಥಿಗಳು, ಕಾರ್ತಿಕ್ ಉಪಮನ್ಯು ನಿರ್ದೇಶನದಲ್ಲಿ ಚಂದ್ರಶೇಖರ ಕಂಬಾರ್‌ ರಚನೆಯ ಸಾಂಬಶಿವ ಪ್ರಹಸನ' ನಾಟಕ ಪ್ರಸ್ತುತಪಡಿಸಿದ್ದರು. ಈ ನಾಟಕದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಅವಹೇಳನ ಮಾಡಲಾಗಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘ ಆರೋಪಿಸಿತ್ತು. ಅನ್ನ ಭಾಗ್ಯ, ಕಂಕಣ ಭಾಗ್ಯ ಸೇರಿದಂತೆ ವಿವಿಧ ಭಾಗ್ಯಗಳನ್ನು ನೀಡಿ ಜನರನ್ನು ಸೋಮಾರಿ ಮಾಡಲಾಗಿದೆ ಎಂಬ ಅಂಶವನ್ನು ನಾಟಕದಲ್ಲಿ ತೋರಿಸಲಾಗಿತ್ತು.

 ಡಿ.ಕೆ. ಶಿವಕುಮಾರ್‌ಗೆ ಅವಮಾನ, ಆರೋಪ

ಡಿ.ಕೆ. ಶಿವಕುಮಾರ್‌ಗೆ ಅವಮಾನ, ಆರೋಪ

ಅಲ್ಲದೆ, ಕೆಡಿ ಅಂಕಲ್ ಎಂಬ ಪಾತ್ರ ಸೃಷ್ಟಿಸಿ ಡಿ.ಕೆ. ಶಿವಕುಮಾರ್ ಅವರನ್ನು ಅವಮಾನಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಬಿ.ಸುಬ್ರಮಣ್ಯ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಲ್ಲದೆ, ಸ್ವತಃ ಚಂದ್ರಶೇಖರ್‌ ಕಂಬಾರ ಅವರು, ನನ್ನ ನಾಟಕ ಯಾವುದೇ ವ್ಯಕ್ತಿಯನ್ನು ಕುರಿತು ಬರೆದಿಲ್ಲ. ಈ ನಾಟಕ ಮಾಡಲು ರಂಗಾಯಣವಾಗಲಿ, ಅದರ ನಿರ್ದೇಶಕರಾಗಲಿ ನನ್ನ ಅನುಮತಿ ಪಡೆದಿಲ್ಲ. ಹಾಗಾಗಿ ಸೂಕ್ತ ಕ್ರಮ ಕೈಗೊಳ್ಳಲಿ ಎಂದು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+