ನಾಟಕದಲ್ಲಿ ಸಿದ್ದರಾಮಯ್ಯ, ಡಿಕೆಶಿಗೆ ಅಪಮಾನ: ರಂಗಾಯಣಕ್ಕೆ ಮುತ್ತಿಗೆ ಹಾಕಲು ನಿರ್ಧಾರ
ಮೈಸೂರು, ಜನವರಿ 7: ರಂಗಾಯಣದಲ್ಲಿ ನಡೆದ ನಾಟಕದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಅಪಮಾನ ಹಾಗೂ ನಿಂದನೆ ಮಾಡಿರುವುದನ್ನು ಖಂಡಿಸಿ ರಂಗಾಯಣಕ್ಕೆ ಮುತ್ತಿಗೆ ಹಾಕಲು ವಿವಿಧ ಸಂಘಟನೆಗಳ ಸ್ವಾಭಿಮಾನಿ ಹೋರಾಟ ಸಮಿತಿ ನಿರ್ಧರಿಸಿದೆ.
ರಂಗಾಯಣದ ಭೂಮಿಗೀತದಲ್ಲಿ ನಾಗರತ್ನಮ್ಮ ಕಾರ್ಯಾಗಾರ ವಿದ್ಯಾರ್ಥಿಗಳು ಕಾರ್ತಿಕ್ ಉಪಮನ್ಯು ನಿರ್ದೇಶನದಲ್ಲಿ ಚಂದ್ರಶೇಖರ ಕಂಬಾರ ರಚನೆಯ 'ಸಾಂಬಶಿವ ಪ್ರಹಸನ' ನಾಟಕ ಪ್ರಸ್ತುತಪಡಿಸಿದ್ದರು. ಈ ನಾಟಕದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಅವಹೇಳನ ಮಾಡಲಾಗಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘ ಆರೋಪಿಸಿತ್ತು.
ಅನ್ನ ಭಾಗ್ಯ, ಕಂಕಣ ಭಾಗ್ಯ ಸೇರಿದಂತೆ ವಿವಿಧ ಭಾಗ್ಯಗಳನ್ನು ನೀಡಿ ಜನರನ್ನು ಸೋಮಾರಿ ಮಾಡಲಾಗಿದೆ ಎಂಬ ಅಂಶವನ್ನು ನಾಟಕದಲ್ಲಿ ತೋರಿಸಲಾಗಿತ್ತು. ಅಲ್ಲದೇ, ಕೆಡಿ ಅಂಕಲ್ ಎಂಬ ಪಾತ್ರ ಸೃಷ್ಟಿಸಿ ಡಿ.ಕೆ.ಶಿವಕುಮಾರ್ ಅವರನ್ನು ಅವಮಾನಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಬಿ.ಸುಬ್ರಮಣ್ಯ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಅಲ್ಲದೇ ಸ್ವತಃ ಚಂದ್ರಶೇಖರ ಕಂಬಾರ ಅವರು, ನನ್ನ ನಾಟಕ ಯಾವುದೇ ವ್ಯಕ್ತಿಯನ್ನು ಕುರಿತು ಬರೆದಿಲ್ಲ. ಈ ನಾಟಕ ಮಾಡಲು ರಂಗಾಯಣವಾಗಲಿ, ಅದರ ನಿರ್ದೇಶಕರಾಗಲಿ ನನ್ನ ಅನುಮತಿ ಪಡೆದಿಲ್ಲ. ಹಾಗಾಗಿ ಸೂಕ್ತ ಕ್ರಮ ಕೈಗೊಳ್ಳಲಿ ಎಂದು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದರು.
ಶನಿವಾರ ಬೆಳಗ್ಗೆ 10 ಗಂಟೆಗೆ ಓವೆಲ್ ಮೈದಾನದಲ್ಲಿ ಖಂಡನಾ ಸಭೆಯನ್ನು ನಡೆಸಿ ಬಳಿಕ ಮೆರವಣಿಗೆ ಮೂಲಕ ರಂಗಾಯಣ ಕಡೆ ತೆರಳಿ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ. ನಗರದ ಪುರ ಭವನಲ್ಲಿ ಶನಿವಾರದಲ್ಲಿ ನಡೆದ ಸಭೆಯಲ್ಲಿ ನಗರದ ನಾನಾ ಸಂಘಟನೆಗಳ ಮುಖಂಡರು ಭಾಗವಹಿಸಿ ಸ್ವಾಭಿಮಾನಿ ಹೋರಾಟ ಸಮಿತಿ ನೇತೃತ್ವದಲ್ಲಿ ಜನವರಿ 10ರಂದು ರಂಗಾಯಣಕ್ಕೆ ಮುತ್ತಿಗೆ ಹಾಕಲು ನಿರ್ಣಯ ಕೈಗೊಂಡಿದ್ದಾರೆ.
ಇದರೊಂದಿಗೆ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಸಾಹಿತಿಗಳು ಮತ್ತು ಕಲಾವಿದರು ಸೇರಿದಂತಹ ಸ್ವಾಭಿಮಾನಿ ಹೋರಾಟ ಸಮಿತಿಯನ್ನು ಶಾಶ್ವತ ಹೋರಾಟ ಸಮಿತಿಯಾಗಿ ರಚಿಸಿ ಪಕ್ಷಾತೀತ ಮತ್ತು ಜಾತ್ಯಾತೀತ ಹೋರಾಟ ನಡೆಸಲು ಕರೆ ನೀಡಲಾಗಿದೆ.
ಸಭೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರ ಎಂ.ಲಕ್ಷ್ಮಣ್, ಕರ್ನಾಟಕರ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮ್, ಮಾಜಿ ಮೇಯರ್ ನಾರಾಯಣ್, ವಿಧಾನ ಪರಿಷತ್ ಸದಸ್ಯ ಡಾ.ತಿಮ್ಮಯ್ಯ, ಕರ್ನಾಟಕ ರಾಜ್ಯ ಪ್ರದೇಶ ಕುರುಬರ ಸಂಘದ ರಾಜ್ಯಾಧ್ಯಕ್ಷ ಸುಬ್ರಹ್ಮಣ್ಯ, ಮಾಜಿ ಶಾಸಕ ವಾಸು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರಾಧ್ಯಕ್ಷ ಆರ್,ಮೂರ್ತಿ, ರಂಗಾಯಣದ ಕಲಾವಿದ ಕೃಷ್ಣ ಪ್ರಸಾದ್ , ಮಾಜಿ ಮೇಯರ್ಗಳಾದ ನಾರಾಯಣ್, ಪುಷ್ಪಲತಾ ಚಿಕ್ಕಣ್ಣ, ಚಿಕ್ಕಣ್ಣ, ಪುಷ್ಪಲತಾ ಜಗನ್ನಾಥ್, ಕಾಂಗ್ರೆಸ್ ಮುಖಂಡರಾದ ಹರೀಶ್ಗೌಡ, ಪ್ರಶಾಂತ್ಗೌಡ, ಮಂಜುಳ ಮಾನಸ, ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಎನ್.ಆರ್.ನಾಗೇಶ್, ಯೋಗೇಶ್ ಉಪ್ಪಾರ್ ಉಪಸ್ಥಿತರಿದ್ದರು.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ












Click it and Unblock the Notifications