ಅಸಹಿಷ್ಣುತೆ ಎಲ್ಲಾ ಧರ್ಮದಲ್ಲೂ ಇದೆ: ಪೇಜಾವರ ಶ್ರೀ
ಮೈಸೂರು, ಡಿಸೆಂಬರ್, 15: ಮೊದಲು ದೇಶದಲ್ಲಿ ನಡೆಯುತ್ತಿರುವ ಮತಾಂತರಗಳು ನಿಲ್ಲಬೇಕು. ಈ ದಿಕ್ಕಿನಲ್ಲಿ ಯುವ ಸಮುದಾಯ ಕಾರ್ಯೋನ್ಮುಖ ಆಗಬೇಕು ಎಂದು ಉಡುಪಿ ಕೃಷ್ಣ ಮಠದ ಶ್ರೀ ಪೇಜಾವರ ವಿಶ್ವೇಶ್ವರತೀರ್ಥ ಸ್ವಾಮೀಜಿಗಳು ಅಭಿಪ್ರಾಯಪಟ್ಟರು.
ಉಡುಪಿಯ ಪರ್ಯಾಯ ಪೀಠ ಅಲಂಕರಿಸುವ ಮುನ್ನ ನಂಜನಗೂಡು ಪಟ್ಟಣದ ಶ್ರೀ ಕೃಷ್ಣಧಾಮ, ಹಾಗೂ ಶ್ರೀ ರಾಘವೇಂದ್ರ ಸ್ವಾಮಿಗಳವರ ಮೂಲ ಮಠಕ್ಕೆ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಪೇಜಾವರ ಶ್ರೀಗಳು, 'ಅಸಹಿಷ್ಣುತೆ ಎಂಬುದು ಕೇವಲ ಹಿಂದೂ ಧರ್ಮದಲ್ಲಿ ಮಾತ್ರವಲ್ಲ ಮುಸ್ಲಿಂ ಧರ್ಮ ಸೇರಿದಂತೆ ಇತರ ಎಲ್ಲಾ ಧರ್ಮಗಳಲ್ಲಿಯೂ ಇದೆ' ಎಂದು ಹೇಳಿದರು.[ಪೇಜಾವರ ಶ್ರೀಗಳಿಗೆ 'ನಿನ್ನ ತಿಥಿ ದಿನವೇ ಬಾಬ್ರಿ ಮಸೀದಿ ಕಟ್ತೇವೆ' ಅಂದವರ್ಯಾರು?]

ಇತ್ತೀಚಿನ ದಿನಗಳಲ್ಲಿ ನಹು ಚರ್ಚೆಗೆ ಬಂದಿರುವ ಅಸಹಿಷ್ಣತೆಯು ಹಿಂದಿನಿಂದಲೂ ನಡೆದು ಬಂದಿದೆ. ಆದರೆ ಅದಕ್ಕೆ ಇತ್ತೀಚಿಗೆ ಹೆಚ್ಚಾಗಿ ಪ್ರಚಾರ ನೀಡಲಾಗುತ್ತಿದೆ. ಇಂದು ಧರ್ಮವನ್ನು ಉಳಿಸಿ ಬೆಳೆಸುವ ಸಂಕಲ್ಪವನ್ನು ಪ್ರತಿಯೊಬ್ಬ ಭಾರತೀಯರು ಮಾಡಬೇಕು. ಸಹಬಾಳ್ವೆಯಿಂದ ದೇಶದ ಅಭಿವೃದ್ದಿ ಸಾಧ್ಯ ಎಂದರು.['ಅಸಹಿಷ್ಣುತೆ'ಗೆ ಭಾರತೀಯ ಮುಸ್ಲಿಂ ಮಹಿಳೆ ಹಿಡಿದ ಕನ್ನಡಿ]
ಈ ಸಂದರ್ಭದಲ್ಲಿ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ, ಶ್ರೀ ಮಠದ ವ್ಯವಸ್ಥಾಪಕ ರಾಜ ಸುಧೀಂದ್ರಚಾರ್. ಪಂಡಿತ ಸುಧಾಕರ್, ಧರ್ಮಾಧಿಕಾರಿ ರಾಜ ವ್ಯಾಸರಾಜಚಾರ್, ಶಂಕರ ಮಠದ ಆಡಳಿತ ಮಠದ ಧರ್ಮಾಧಿಕಾರಿ ಶ್ರೀಕಂಠ ಜೋಯಿಸ್ಸು, ಜಯರಾಮಚಾರ್, ಭಾರಧ್ವಾಜ್ ಚಾರ್, ಸುಬ್ಬಲಕ್ಮೀ ಹಾಗೂ ಶ್ರೀ ಕೃಷ್ಣಧಾಮದ ಗುರುರಾಜಧರ್ಮ, ಶಿಲ್ಪಗುರುಪ್ರಸಾದ್. ಸಿಬ್ಬಂದಿವರ್ಗ ಶ್ರೀ ಮಠದ ಅಂತರಂಗ ಭಕ್ತರು ಹಾಜರಿದ್ದರು.
-
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications