ಅಂಬಾರಿ ಹೊತ್ತ ಆನೆಗಳ ಇತಿಹಾಸ: ಜಯಮಾರ್ತಾಂಡನೇ ಮೊದಲಿಗ
Recommended Video

ಮೈಸೂರು, ಅಕ್ಟೋಬರ್.09: ಮೈಸೂರು ದಸರಾ ಅಂದರೆ ನೆನಪಾಗುವುದು ವೈಭವೋಪೇತ ಅಂಬಾರಿ ಮತ್ತು ದಸರೆಯ ಆನೆಗಳ ವೈಭವ. ಜಂಬೂಸವಾರಿಯ ವೈಭವವನ್ನು ಕಣ್ತುಂಬಿಕೊಳ್ಳುವುದೇ ಒಂದು ಚೆಂದ.
ರಾಜ ಕೃಷ್ಣದೇವರಾಯ ಒಡೆಯರ್ ಕಾಲದಲ್ಲಿ ಪಿರಿಯಾಪಟ್ಟಣದ ಬೆಟ್ಟದಪುರದ ಬಳಿ ಸೆರೆಸಿಕ್ಕ ಜಯಮಾರ್ತಾಂಡ ಮೈಸೂರು ದಸರಾದಲ್ಲಿ ಅಂಬಾರಿ ಹೊತ್ತ ಮೊದಲ ಆನೆಯಾಗಿದೆ.
ಒಡೆಯರ್ ಕಾಲದಲ್ಲಿ ಪ್ರಾರಂಭವಾದ ವಿಜಯದಶಮಿಯಿಂದ ಅಂದಾಜು 45 ವರ್ಷಗಳ ಕಾಲ ಚಿನ್ನದ ಅಂಬಾರಿಯನ್ನು ಹೊತ್ತ ಹಿನ್ನೆಲೆಯಲ್ಲಿ ಜಯಮಾರ್ತಾಂಡ ಮಹಾರಾಜರ ಪ್ರೀತಿಗೆ ಪಾತ್ರವಾಗಿತ್ತು. ಆದ್ದರಿಂದ ಅರಮನೆಯ ಮಹಾದ್ವಾರಗಳಲ್ಲೊಂದಾದ ಜಯಮಾರ್ತಾಂಡ ದ್ವಾರಕ್ಕೆ ಈ ಆನೆ ಹೆಸರು ಇಡಲಾಗಿದೆ.
ಉಲ್ಲೇಖದ ಪ್ರಕಾರ 1902 ರಿಂದ ಅಂಬಾರಿ ಹೊತ್ತ ಆನೆಗಳೆಂದರೆ ವಿಜಯಬಹದ್ದೂರ್, ನಂಜುಂಡ, ರಾಮಪ್ರಸಾದ್, ಮೋತಿಲಾಲ್ ರಾಜ್ ಎನ್ನುತ್ತದೆ ಇತಿಹಾಸ. ಇದಾದ ಬಳಿಕ ಅಂಬಾರಿ ಹೊತ್ತ ಆನೆಗಳ ಇತಿಹಾಸ ಇಂತಿದೆ...

ಐರಾವತ
1935ರಲ್ಲಿ ಐರಾವತ ಆನೆಯನ್ನು ಹಾಲಿವುಡ್ ಚಿತ್ರ 'ದಿ ಎಲಿಫೆಂಟ್ ಬಾಯ್'ಗೆ ಬಳಸಿಕೊಳ್ಳಲಾಯಿತು. ಆನೆಯ ಮಾವುತನೇ ಚಿತ್ರದ ನಾಯಕ. ಚಿತ್ರ ಜಗತ್ತಿನಾದ್ಯಂತ ಪ್ರದರ್ಶನಗೊಂಡಿತು. ಆ ಮಾವುತ ಮತ್ಯಾರು ಅಲ್ಲ ಮೈಸೂರು ಸಾಬು.

ಬಿಳಿಗಿರಿ
ಇದು ಅಂಬಾರಿ ಹೊತ್ತ ಆನೆಗಳಲ್ಲಿ ಅತ್ಯಂತ ದೈತ್ಯ ಆನೆಯಾಗಿದ್ದು, ಇದರ ಎತ್ತರ 10.5 ಅಡಿ. ಸುಮಾರು 7 ಸಾವಿರ ಕೆ.ಜಿ. ಇತ್ತಂತೆ. 1975ರಲ್ಲಿ ಇದು ಮರಣ ಹೊಂದಿತು. ಇದರ ಮಾವುತ ಗೌಸ್ ಅಂತ. ಬಿಳಿಗಿರಿ ಹೆಗ್ಗಳಿಕೆ ಏನೆಂದರೆ ಇದೇ ಮಹಾರಾಜರನ್ನು ಹೊತ್ತೊಯ್ದ ಕೊನೆಯ ಆನೆ.

ರಾಜೇಂದ್ರ
ಗಂಧದ ಗುಡಿ ಚಿತ್ರದಲ್ಲಿ ಡಾ. ರಾಜ್ ಆನೆಯ ದಂತದ ಮೇಲೆ ಕುಳಿತು ಹಾಡುವ ಹಾಡು ಯಾರಿಗೆ ತಾನೇ ನೆನಪಿಲ್ಲ. ಈ ಆನೆಯ ಹೆಸರು ರಾಜೇಂದ್ರ. ಚಿತ್ರದುದ್ದಕ್ಕೂ ಇದು ಭಾಗವಹಿಸಿದೆ. ಡಾ. ರಾಜ್ಗೆ ಅಚ್ಚುಮೆಚ್ಚಿನ ಆನೆ ಕೂಡ.

ದ್ರೋಣ
ದ್ರೋಣ 10.25 ಎತ್ತರದ ಆನೆ. ಇದು ಸುಮಾರು 6,400 ಕೆ.ಜಿ ತೂಕ ಇತ್ತು. 18 ವರ್ಷ ಸತತವಾಗಿ ಅಂಬಾರಿಗೆ ಬೆನ್ನುಕೊಟ್ಟ ಖ್ಯಾತಿ. ಕಿರುತೆರೆಯಲ್ಲಿ ಪ್ರಸಾರವಾಗುತ್ತಿದ್ದ ಜನಪ್ರಿಯ ಧಾರಾವಾಹಿ 'ದಿ ಸೋರ್ಡ್ ಆಫ್ ಟಿಪ್ಪುಸುಲ್ತಾನ್'ನ ಟಿಪ್ಪು ಪಾತ್ರಧಾರಿಯನ್ನು ಹೊತ್ತೂಯ್ದದ್ದೂ ಇದೇ ದ್ರೋಣ. 1998ರಲ್ಲಿ ಹೈ ಟೆನ್ಶನ್ ವಿದ್ಯುತ್ ತಗುಲಿ ಸಾವನ್ನಪ್ಪಿತು.

ಅರ್ಜುನ
ದ್ರೋಣನ ನಂತರ ಅರ್ಜುನ ಒಮ್ಮೆ ಅಂಬಾರಿ ಹೊತ್ತಿದ್ದ. ಆದರೆ ನಂತರದ ದಿನಗಳಲ್ಲಿ ಮಾವುತನನ್ನು ಕೊಂದ ಆರೋಪದಲ್ಲಿ ಅರ್ಜುನನನ್ನು ಉತ್ಸವದಿಂದ ಹೊರಗುಳಿಸಲಾಯಿತು.

ಬಲರಾಮ
ಅರ್ಜುನನ ನಂತರ ಬಲರಾಮನಿಗೆ ಅಂಬಾರಿ ಹೊರಿಸಲಾಯಿತು. ಬಲರಾಮ ಶಾಂತ ಸ್ವಭಾವದ ಆನೆ ಆಗಿದ್ದು, 1987ರಲ್ಲಿ ಕಟ್ಟೆಪುರದಲ್ಲಿ ಬಲರಾಮ, ಗಜೇಂದ್ರ, ವಿಕ್ರಮ, ಹರ್ಷ, ಪ್ರಶಾಂತ ಈ ಐದೂ ಆನೆಗಳನ್ನು ಹಿಡಿದಿದ್ದರು. ಹನ್ನೊಂದು ವರ್ಷಗಳ ಕಾಲ ಅಂಬಾರಿ ಹೊತ್ತ ಬಲರಾಮನಿಗೆ ಕಳೆದ ವರ್ಷ ನಿವೃತ್ತಿ ದೊರೆತಿದೆ.

ಅರ್ಜುನ
ದ್ರೋಣನ ಮರಣದ ನಂತರ ಒಮ್ಮೆ ಅಂಬಾರಿ ಹೊತ್ತಿದ್ದ ಅರ್ಜುನನ ಗುಣದ ಬಗ್ಗೆ ಸಾಕಷ್ಟು ಟೀಕೆಗಳು ಬಂದಿತ್ತು. ಆದರೂ ಬಲರಾಮನಿಗೆ ವಯಸ್ಸಾದ ಕಾರಣ ಕಳೆದ 3 ವರ್ಷದಿಂದ ಅಂಬಾರಿ ಹೊರುವ ಜವಾಬ್ದಾರಿ ಅರ್ಜುನನಿಗೆ ನೀಡಲಾಗಿದೆ. ಅರ್ಜುನ ಬರೋಬ್ಬರಿ 5,250 ಕೆಜಿ ತೂಕವನ್ನು ಹೊಂದುವ ಮೂಲಕ ತಂಡದ ಎಲ್ಲಾ ಆನೆಗಳಿಗಿಂತಲೂ ಬಲಿಷ್ಠನಾಗಿದ್ದಾನೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications