ಮೈಸೂರು ಪ್ರಾದೇಶಿಕ ಆಯುಕ್ತರ ತನಿಖಾ ವರದಿ ಸಲ್ಲಿಕೆ; ರೋಹಿಣಿ ಸಿಂಧೂರಿಗೆ ಸಂಕಷ್ಟ

ಮೈಸೂರು, ಜೂನ್ 22: ಭಾರೀ ಚರ್ಚೆಗೆ ಕಾರಣವಾಗಿದ್ದ ಮೈಸೂರು ಜಿಲ್ಲಾಧಿಕಾರಿ ಅಧಿಕೃತ ಸರಕಾರಿ ನಿವಾಸದಲ್ಲಿ ಈಜುಕೊಳ ನಿರ್ಮಾಣ ಬಗ್ಗೆ ಮೈಸೂರು ಪ್ರಾದೇಶಿಕ ಆಯುಕ್ತರಿಂದ ತನಿಖಾ ವರದಿ ಸಲ್ಲಿಕೆಯಾಗಿದೆ.

"ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಜಿಲ್ಲಾಧಿಕಾರಿಯಾಗಿದ್ದ ವೇಳೆ ಈಜುಕೊಳ ನಿರ್ಮಾಣದಲ್ಲಿ ಆಗಿರುವ ಪ್ರಮುಖ ನ್ಯೂನತೆಗಳನ್ನು ನಮೂದಿಸಿದ್ದು, ಈಜುಕೊಳ ನಿರ್ಮಾಣವು ಯಾವುದೇ ಸಾರ್ವಜನಿಕ ಹಿತಾಸಕ್ತಿ ಹೊಂದಿರುವುದಿಲ್ಲ,'' ಎಂದು ವರದಿಯಲ್ಲಿ ತಿಳಿಸಲಾಗಿದೆ.

ವರದಿಯಲ್ಲಿ ಇರುವ ಅಂಶಗಳು

1. ಮೈಸೂರು ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದ ಆವರಣದಲ್ಲಿ ಈಜುಕೊಳ ನಿರ್ಮಾಣಕ್ಕೆ ಸಂಬಂಧಪಟ್ಟಂತೆ 32 ಲಕ್ಷ ರೂ. ಗಳಿಗೆ ಅಂದಾಜು ಪಟ್ಟಿಯನ್ನು ತಯಾರಿಸಿದ್ದು, ಅಂದಾಜುಪಟ್ಟಿಗೆ ತಾಂತ್ರಿಕ ವರ್ಗದವರಿಂದ ಅಥವಾ ಲೋಕೋಪಯೋಗಿ ಇಲಾಖೆಯಿಂದ ಅನುಮೋದನೆ ಪಡೆದಿಲ್ಲ.

Mysuru: Investigation against Rohini Sindhuri; Report Submitted To Govt

2. ಈಜುಕೊಳದ ನಿರ್ಮಾಣದ ಬಗ್ಗೆ ಯಾವುದೇ ಪೂರ್ವಭಾವಿ ಆಡಳಿತಾತ್ಮಕ ಮಂಜೂರಾತಿ ಪಡೆದಿಲ್ಲ.

3. ಈಜುಕೊಳದ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಯಾವುದೇ ಕಾರ್ಯಾದೇಶ ಇಲ್ಲ.

4. ಕಾಮಗಾರಿ ನಿರ್ವಹಿಸಿದವರ ಒಪ್ಪಂದ ಪತ್ರಗಳು ಇಲ್ಲ.

Mysuru: Investigation against Rohini Sindhuri; Report Submitted To Govt

5. ಪಾರಂಪರಿಕ ಸಂರಕ್ಷಣಾ ಸಮಿತಿಯ ಅನುಮೋದನೆ ಪಡೆದಿಲ್ಲ.

ಮೈಸೂರು ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದ ಆವರಣದಲ್ಲಿ ಈಜುಕೊಳ ನಿರ್ಮಾಣ ಮಾಡಿರುವುದು ಯಾವುದೇ ಸಾರ್ವಜನಿಕರಿಗೆ ಉಪಯೋಗಿಸಲು ಸಾಧ್ಯವಿರುವುದಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದರಿಂದ ಅಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಹಿನ್ನಡೆಯಾಗುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+