ಶ್ರೀನಿವಾಸಪ್ರಸಾದ್ ಗೆ ಆತ್ಮವಿಶ್ವಾಸವೇ ಮುಳುವಾಯಿತೇ?
ಪ್ರತಿಬಾರಿ ಗುಂಡ್ಲುಪೇಟೆ ಕ್ಷೇತ್ರದಿಂದ ಗೆಲುವು ಸಾಧಿಸುತ್ತಿದ್ದ ಶ್ರೀನಿವಾಸ್ ಪ್ರಸಾದ್ ಸೋಲಿಗೆ ಅತಿಯಾದ ಆತ್ಮವಿಶ್ವಾಸವೇ ಕಾರಣವೇ?
ಮೈಸೂರು, ಏಪ್ರಿಲ್ 13: ಗೆದ್ದೇ ಗೆಲ್ಲುತ್ತೇನೆ ಎಂಬ ಆತ್ಮವಿಶ್ವಾಸವೇ ನಂಜನಗೂಡು ಬಿಜೆಪಿ ಅಭ್ಯರ್ಥಿ ಶ್ರೀನಿವಾಸಪ್ರಸಾದ್ ಅವರ ಸೋಲಿಗೆ ಕಾರಣವಾಯಿತೆ?
ಖಂಡಿತ ಹೌದು, ಬಹುಶಃ ಇದು ಅನಿರೀಕ್ಷಿತ ಸೋಲು. ಪ್ರತಿಬಾರಿ ನಂಜನಗೂಡಿನಲ್ಲಿ ಗೆದ್ದು ಬರುತ್ತಿದ್ದ ಶ್ರೀನಿವಾಸಪ್ರಸಾದ್ ಈ ಬಾರಿಯೂ ಸುಮಾರು 25ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದರಲ್ಲದೆ, ಆ ಧೈರ್ಯದಿಂದಲೇ ಹೆಚ್ಚಾಗಿ ಪ್ರಚಾರಕ್ಕೂ ತೆರಳಿರಲಿಲ್ಲ.[ಶ್ರೀನಿವಾಸ್ ಪ್ರಸಾದ್ ಸೋಲಿಗೆ ಟಿಎನ್ ಸೀತಾರಾಂ ಬೇಸರ]
ಖುದ್ದು ಯಡಿಯೂರಪ್ಪ ಮತ್ತು ಬೆಂಬಲಿಗರ ತಂಡ ಅವರ ಅನುಪಸ್ಥಿತಿಯಲ್ಲಿ ಹಳ್ಳಿ ಹಳ್ಳಿಗೆ ತೆರಳಿ ಮತಯಾಚಿಸಿತ್ತು. ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಹೆಚ್ಚಿನ ಚುನಾವಣಾ ಜವಬ್ದಾರಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಹಿಸಿದ್ದರು. ಇದು ಸ್ಥಳೀಯ ನಿಷ್ಠಾವಂತ ಬಿಜೆಪಿ ಕಾರ್ಯಕರ್ತರ ಇರಿಸು ಮುರಿಸಿಗೂ ಕಾರಣವಾಗಿತ್ತು.

ಮೂಲಗಳ ಪ್ರಕಾರ ಪ್ರಚಾರಕ್ಕೆ ತೆರಳುತ್ತಿದ್ದ ಕಾರ್ಯಕರ್ತರೇ ಶ್ರೀನಿವಾಸಪ್ರಸಾದ್ ಅವರ ವಿರುದ್ಧ ತಿರುಗಿಬಿದ್ದಿದ್ದರು. ಇದಕ್ಕೆ ಕಾರಣವೂ ಇಲ್ಲದಿಲ್ಲ. ಪ್ರಚಾರಕ್ಕೆ ಪಕ್ಷದ ನಾಯಕರು ಬೆಳಿಗ್ಗೆ 6 ಗಂಟೆಗೆ ತೆರಳಿ ಹಳ್ಳಿಗಳಲ್ಲಿ ಮತಯಾಚನೆ ನಡೆಸುತ್ತಿದ್ದರೆ, ಶ್ರೀನಿವಾಸ ಪ್ರಸಾದ್ ಅವರು ಮಧ್ಯಾಹ್ನ 12ಕ್ಕೆ ತೆರಳುತ್ತಿದ್ದರಂತೆ. ಹಲವು ಕಡೆಗಳಿಗೆ ಅವರು ಬರಲು ಹಿಂದೇಟು ಹಾಕುತ್ತಿದ್ದರಂತೆ.
ಇನ್ನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಲ್ಲಿ ಹೆಚ್ಚಿನವರು ದಿವಂಗತ ಎಂ.ಮಹದೇವು ಅವರ ಬೆಂಬಲಿಗರಾಗಿದ್ದರು. ಎಂ.ಮಹದೇವು ಮತ್ತು ಶ್ರೀನಿವಾಸಪ್ರಸಾದ್ ಅವರ ನಡುವೆ ಹಾದು ಬರುತ್ತಿರಲಿಲ್ಲ. ಅವರಿಬ್ಬರೂ ರಾಜಕೀಯವಾಗಿ ಬದ್ಧ ವೈರಿಗಳಾಗಿದ್ದರು.
ಎಂ.ಮಹದೇವು ನಿಧನ ಬಳಿಕ ಅವರ ಬೆಂಬಲಿಗರು ಬಿಜೆಪಿಯಲ್ಲೇ ಇದ್ದರಾದರೂ ಶ್ರೀನಿವಾಸಪ್ರಸಾದ್ ಅವರ ಬಿಜೆಪಿ ಸೇರ್ಪಡೆ ಅವರಲ್ಲಿ ಬೇಸರಕ್ಕೆ ಕಾರಣವಾಗಿತ್ತು.[ಸೋತರೂ ಯಡಿಯೂರಪ್ಪ ಮೇಲೆ ಪ್ರತಾಪ್ ಸಿಂಹ ವಿಶ್ವಾಸ]

ಬಿಜೆಪಿ ಕಚೇರಿ ಕೂಡ ಎಂ.ಮಹದೇವು ಅವರ ನಿವಾಸದಲ್ಲೇ ಇತ್ತು. ಅವರ ಬಳಿಗೆ ನಾನೇಕೆ ಹೋಗಬೇಕೆಂಬ ಧೋರಣೆ ಬಹುಶಃ ಶ್ರೀನಿವಾಸಪ್ರಸಾದ್ ಅವರದ್ದಾಗಿತ್ತೇನೋ? ಅದನ್ನೇ ದಾಳವಾಗಿಸಿಕೊಂಡ ಕಾಂಗ್ರೆಸ್ ನಾಯಕರು ದಿವಂಗತ ಎಂ.ಮಹದೇವು ಅವರ ಮನೆಗೆ ತೆರಳಿ ಅವರ ಶ್ರೀಮತಿಯವರ ಆಶೀರ್ವಾದ ಪಡೆದು ಬೆಂಬಲ ಕೋರಿದ್ದರು. ಇದು ಕೂಡ ಶ್ರೀನಿವಾಸಪ್ರಸಾದ್ ಸೋಲಿಗೆ ಕಾರಣವಾಗಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ.'
ಒಟ್ಟಿನಲ್ಲಿ ಅತಿಯಾದ ಆತ್ಮವಿಶ್ವಾಸಕ್ಕೆ ಜನರು ಪಾಠ ಕಲಿಸಿದ್ದಾರೆ ಎನ್ನಬಹುದು!
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications