ಕೇಂದ್ರೀಕೃತ ಅಡುಗೆ ಕೇಂದ್ರ ಸ್ಥಾಪನೆಗೆ ಮೈಸೂರು ವಿವಿ ಚಿಂತನೆ
ಮೈಸೂರು, ಮೇ 31 : ಮೈಸೂರು ವಿಶ್ವವಿದ್ಯಾನಿಲಯದ ವಸತಿ ನಿಲಯದಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರವನ್ನು ನೀಡುವ ಸಲುವಾಗಿ ಇಸ್ಕಾನ್ ಮಾದರಿಯಂತೆ ಒಂದೇ ಸ್ಥಳದಲ್ಲಿ ಅಡುಗೆ ಕೋಣೆ ನಿರ್ಮಿಸಿ ಅಲ್ಲಿ ವಿದ್ಯಾರ್ಥಿಗಳ ಅನುಗುಣವಾಗಿ ಆಹಾರ ತಯಾರಿಸುವ ಹೊಸ ಯೋಜನೆಗೆ ಮೈಸೂರು ವಿವಿ ಮುಂದಾಗಿದೆ. ಈ ಕುರಿತ ಪ್ರಸ್ತಾವಕ್ಕೆ ಸಿಂಡಿಕೇಟ್ ಸಭೆಯಲ್ಲಿ ಒಪ್ಪಿಗೆ ಸಹ ನೀಡಲಾಯಿತು.
ಮೈಸೂರು ವಿ.ವಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ಪೂರೈಸುವ ದೃಷ್ಟಿಯಿಂದಾಗಿ ಕೇಂದ್ರೀಕೃತ ಅಡುಗೆ ಕೇಂದ್ರ ಸ್ಥಾಪಿಸುವ ಯೋಜನೆ ಇದಾಗಿದ್ದು, ಮೈಸೂರು ವಿ.ವಿ.ಯ 15 ಹಾಸ್ಟೆಲ್ ಗಳಿಗೆ ಆಹಾರ ತಯಾರಿ ನಡೆಯಬೇಕಿದೆ. ಸದ್ಯದ ವ್ಯವಸ್ಥೆಯಲ್ಲಿ ಹಾಸ್ಟೆಲ್ ಗಳ ವಿದ್ಯಾರ್ಥಿಗಳಿಗೆ ಆಹಾರ ಪೂರೈಸಲು ಪ್ರತ್ಯೇಕ ಟೆಂಡರ್ ಗಳನ್ನು ಕರೆಯಲಾಗುತ್ತಿತ್ತು. ಇದರಿಂದ ಒಂದೊಂದು ಹಾಸ್ಟೆಲ್ ಗೆ ಭಿನ್ನ ರುಚಿ ಹಾಗೂ ಗುಣಮಟ್ಟದ ಆಹಾರ ಪೂರೈಕೆಯಾಗುತ್ತಿತ್ತು. ಆದ್ದರಿಂದ ಕೇಂದ್ರೀಕೃತ ಅಡುಗೆ ಕೇಂದ್ರ ಸ್ಥಾಪಿಸಿ ಎಲ್ಲ ಹಾಸ್ಟೆಲ್ ಗಳಿಗೆ ಅಲ್ಲಿಂದಲೇ ಆಹಾರ ಪೂರೈಕೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ಹೇಳಿವೆ. ಮುಂದಿನ 3 ತಿಂಗಳಲ್ಲಿ ಈ ವ್ಯವಸ್ಥೆ ಜಾರಿಗೆ ಬರಲಿದೆ. ಕೇಂದ್ರೀಕೃತ ಅಡುಗೆ ಕೇಂದ್ರದ ಸ್ಥಾಪನೆಗೆ ಶೀಘ್ರದಲ್ಲೇ ಸ್ಥಳ ಗುರುತಿಸಲಾಗುವುದು ಎಂದು ತಿಳಿಸಿವೆ.
ಇದಿಷ್ಟೆ ಅಲ್ಲದೇ ಶೀಘ್ರದಲ್ಲೇ ಕೆ.ಆರ್.ನಗರದಲ್ಲಿ ಸ್ನಾತಕೋತ್ತರ ಕೇಂದ್ರ ತಲೆ ಎತ್ತಲಿದ್ದು ಕನ್ನಡ, ಇಂಗ್ಲಿಷ್ ಮತ್ತು ಸಮಾಜಶಾಸ್ತ್ರ ಅಧ್ಯಯನ ವಿಭಾಗಗಳು ಕಾರ್ಯಾರಂಭ ಮಾಡಲಿವೆ ಎಂದು ಮೂಲಗಳು ತಿಳಿಸಿವೆ. ಜೊತೆಗೆ ಅತಿಥಿ ಉಪನ್ಯಾಸಕರ ಸೇವೆಯನ್ನು ಕಾಯಂಗೊಳಿಸುವಂತೆ ಸೂಚಿಸಿ ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ವಿ.ವಿ. ನಿರ್ಧರಿಸಿದೆ.

ಮೈಸೂರು ವಿವಿ. ವ್ಯಾಪ್ತಿಯಲ್ಲಿ 10 ವರ್ಷಕ್ಕೂ ಹೆಚ್ಚು ಕಾಲದಿಂದ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು ಕಾಯಂಗೊಳಿಸಲು ತಕ್ಷಣವೇ ಮುಂದಾಗಬೇಕು ಎಂದು ಹೈಕೋರ್ಟ್, ರಾಜ್ಯ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಮೈಸೂರು ವಿ.ವಿ ರಿಜಿಸ್ಟ್ರಾರ್ ಅವರಿಗೆ ನಿರ್ದೇಶಿಸಿತ್ತು. ಬ್ಯಾಕ್ಲಾಗ್ ಹುದ್ದೆಗಳ ಭರ್ತಿ ಹಾಗೂ ಹೈದರಾಬಾದ್ ಕರ್ನಾಟಕ ಮೀಸಲಾತಿ ಸೌಲಭ್ಯ ಜಾರಿಗೊಳಿಸಲು ಸಹ ವಿಶ್ವವಿದ್ಯಾಲಯ ನಿರ್ಧರಿಸಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications