ಡಿಕೆಶಿ ಮಾವನ ಮನೆಯಲ್ಲಿ 3ನೇ ದಿನವೂ ಮುಂದುವರಿದ ಐಟಿ ದಾಳಿ
ಮೈಸೂರು, ಆಗಸ್ಟ್ 4: ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಮಾವ ತಿಮ್ಮಯ್ಯ ಅವರ ಮೈಸೂರು ನಿವಾಸದಲ್ಲಿ ಮೂರನೇ ದಿನವೂ ಐಟಿ ಅಧಿಕಾರಿಗಳು ಶೋಧ ಮುಂದುವರೆಸಿದ್ದಾರೆ. ಇದರಿಂದ ತಿಮ್ಮಯ್ಯ ಅವರ ನಿವಾಸದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಇಲ್ಲದಂತಾಗಿದೆ.
ಐಟಿ ಅಧಿಕಾರಿಗಳು ತಿಮ್ಮಯ್ಯಗೆ ಸೇರಿದ ಎಲ್ಲಾ ವ್ಯವಹಾರಗಳನ್ನು ಸ್ಥಗಿತಗೊಳಿಸಿದ ಹಿನ್ನೆಲೆ ಕಳೆದ ಮೂರು ದಿನಗಳಿಂದ ಜೆ.ಪಿ.ನಗರದಲ್ಲಿರುವ ಸೀಗೆಪುಡಿ ಕಾರ್ಖಾನೆಯನ್ನು ಸಹ ತಾತ್ಕಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಕಾರ್ಖಾನೆಯಲ್ಲಿ ಸೀಗೆಪುಡಿ ತಯಾರಿಕೆ ಹಾಗೂ ಕಾರ್ಖಾನೆಯ ಎಲ್ಲ ಚಟುವಟಿಕೆಗಳು ಬಂದ್ ಆಗಿದೆ. ಕಳೆದ ಮೂರು ದಿನಗಳಿಂದ ಸೀಗೆಪುಡಿ ಕಾರ್ಖಾನೆಯನ್ನು ಸ್ಥಗಿತಗೊಳಿಸಲಾಗಿದೆ. ಐಟಿ ಅನುಮತಿ ಇಲ್ಲದೇ ಸೀಗೆಪುಡಿ ತಯಾರಿಕೆ ಕಾರ್ಖಾನೆ ಪ್ರವೇಶಿಸುವಂತಿಲ್ಲ. ಆ.2 ರಂದು ತಿಮ್ಮಯ್ಯ ಅವರನ್ನು ಐಟಿ ಅಧಿಕಾರಿಗಳು ಸೀಗೆಪುಡಿ ಕಾರ್ಖಾನೆಗೆ ಕರೆದುಕೊಂಡು ಹೋಗಿದ್ದರು.
ಐಟಿ ಅಧಿಕಾರಿಗಳು ನಿನ್ನೆ ರಾತ್ರಿ 10.30ಕ್ಕೆ ದಾಖಲೆ ಪರಿಶೀಲನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಡಿಕೆಶಿ ಮಾವ ತಿಮ್ಮಯ್ಯ ನಿವಾಸದಿಂದ 6 ಅಧಿಕಾರಿಗಳು ತೆರಳಿದ್ದರು. ಆದರೆ ತಿಮ್ಮಯ್ಯ ನಿವಾಸದಲ್ಲೇ ಓರ್ವ ಐಟಿ ಅಧಿಕಾರಿ, ಓರ್ವ ಪುರುಷ ಪೊಲೀಸ್ ಸಿಬ್ಬಂದಿ, ಓರ್ವ ಮಹಿಳಾ ಪೊಲೀಸ್ ಸಿಬ್ಬಂದಿ ಮನೆಯಲ್ಲೇ ವಾಸ್ತವ್ಯ ಹೂಡಿದ್ದರು. ಮನೆಯ ಹೊರಗೆ ಇಬ್ಬರು ಬೀಟ್ ಪೊಲೀಸರು ಕಾವಲಿದ್ದರು.

ಇಂದು ಬೆಳಿಗ್ಗೆ ಓರ್ವ ಐಟಿ ಅಧಿಕಾರಿ ತಿಮ್ಮಯ್ಯ ನಿವಾಸಕ್ಕೆ ಬಂದಿದ್ದು, ಐಟಿ ಶೋಧ ಮುಂದುವರೆಸಿದ್ದಾರೆ.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications