ಉಪಚುನಾವಣೆ: ಚುನಾವಣಾಧಿಕಾರಿಯಾಗಿ ಜೆ.ಜಗದೀಶ್ ನೇಮಕ
ಮೈಸೂರು, ಮಾರ್ಚ್ 14: ಮೈಸೂರು ಜಿಲ್ಲೆಯ ನಂಜನಗೂಡು ಹಾಗೂ ಚಾಮರಾಜನಗರದ ಗುಂಡ್ಲುಪೇಟೆ ಉಪಚುನಾವಣೆಗೆ ಮಾರ್ಚ್ 14ರಿಂದ 21ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದ್ದು, ಚುನಾವಣಾಧಿಕಾರಿಯಾಗಿ ಮೈಸೂರು ಪಾಲಿಕೆಯ ಆಯುಕ್ತ ಜೆ. ಜಗದೀಶ್ ನೇಮಕವಾಗಿದ್ದಾರೆ.[ನಂಜನಗೂಡು: ನಾಮಪತ್ರ ಸಲ್ಲಿಕೆಗೆ ಮಾರ್ಚ್ 21 ಕಡೆಯ ದಿನಾಂಕ]
ಪಾಲಿಕೆಯ ಆಯುಕ್ತ ಜೆ.ಜಗದೀಶ್ ಇದೀಗ ಚುನಾವಣಾಧಿಕಾರಿಯಾಗಿ ನೇಮಕಗೊಂಡಿದ್ದು, ಚುನಾವಣೆಗೆ ಸಂಬಂಧಿಸಿದ ಕಾರ್ಯಗಳನ್ನು ನಿಭಾಯಿಸಲಿದ್ದಾರೆ. ಮಾರ್ಚ್ 21 ರ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಬಹುದು. ಹಾಗೆಯೇ ಮಾರ್ಚ್ 22 ರಂದು ನಾಮಪತ್ರ ಪರಿಶೀಲನಾ ಕಾರ್ಯ ನಡೆಯಲಿದೆ. ಮಾರ್ಚ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.[ಇದು ಪ್ರಚಾರವೋ, ವಿಜಯೋತ್ಸವವೋ ಗೊತ್ತಾಗುತ್ತಿಲ್ಲ: ಬಿ.ಎಸ್.ವೈ]
ಏ.9 ರಂದು ಮತದಾನ ನಡೆಯಲಿದ್ದು, ಅಭ್ಯರ್ಥಿಗಳ ಭವಿಷ್ಯ ಏ.13 ರಂದು ನಿರ್ಧಾರವಾಗಲಿದೆ. ಈ ನಡುವೆ ಚುನಾವಣಾ ಆಯೋಗದ ನಿಯಮದಂತೆ ಈ ಚುನಾವಣೆಯಲ್ಲಿ ಓರ್ವ ಅಭ್ಯರ್ಥಿ 28 ಲಕ್ಷ ರೂ. ಗಿಂತ ಹೆಚ್ಚು ಖರ್ಚು ಮಾಡುವಂತಿಲ್ಲ ಎಂದು ಆಯೋಗ ಸೂಚಿಸಿದೆ.