ಮೈಸೂರು ದಸರಾದಲ್ಲಿ 'ರಂಗೋಲಿ' ಬಗ್ಗೆ ಸಚಿವೆ ಜಯಮಾಲ ಆಡಿದ ಮಾತುಗಳಿವು..
ಮೈಸೂರು, ಅಕ್ಟೋಬರ್. 11: ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ವಿಶ್ವ ವಿಖ್ಯಾತ ದಸರಾ ಸಂಭ್ರಮ ಗರಿಗೆದರಿದರಿದ್ದು, ಮಹಿಳೆಯರಿಗಾಗಿ ಏರ್ಪಡಿಸಿದ್ದ ರಂಗೋಲಿ ಸ್ಪರ್ಧೆಗೆ ಸಚಿವೆ ಜಯಮಾಲ ಚಾಲನೆ ನೀಡಿದರು.
ಅರಮನೆ ಆವರಣದಲ್ಲಿ ನಡೆಯುತ್ತಿರುವ ಎರಡನೇ ದಿನದ ದಸರಾ ಕಾರ್ಯಕ್ರಮದಲ್ಲಿ ಮಹಿಳೆಯರು ಹಾಗೂ ಮಕ್ಕಳಿಗಾಗಿ ರಂಗೋಲಿ ಸ್ಪರ್ಧೆ ಆಯೋಜನೆ ಮಾಡಲಾಗಿದೆ. ಸ್ಪರ್ಧೆಗೆ ಸುಮಾರು 80 ಮಂದಿಯ ಹೆಸರು ನೋಂದಣಿಯಾಗಿದ್ದು, ಜಿಲ್ಲೆಯ ವಿವಿಧ ಭಾಗಗಳ ಮಹಿಳೆಯರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವೆ ಜಯಮಾಲ, ರಂಗೋಲಿ ನಮ್ಮ ಸಾಂಸ್ಕೃತಿಕ ಪರಂಪರೆಯ ಬಹುದೊಡ್ಡ ಕಲೆ. ರಂಗೋಲಿ ಮಧ್ಯದಲ್ಲಿ ದೇವರು ಬಂದು ಕೂರುತ್ತಾರೆ ಎಂಬ ನಂಬಿಕೆ ಇದೆ. ರಂಗೋಲಿಗೆ ಕೆಟ್ಟ ಶಕ್ತಿಗಳನ್ನು ದೂರ ಮಾಡುವ ಶಕ್ತಿ ಇದೆ. ಆದ್ದರಿಂದ ಮನೆ ಮುಂದೆ ರಂಗೋಲಿ ಬಿಡಿಸುವ ಸಂಪ್ರದಾಯ ನಡೆದುಕೊಂಡು ಬಂದಿದೆ.

ಈ ಬಾರಿ ದಸರಾದಲ್ಲಿ ರಂಗೋಲಿ ಸ್ಪರ್ಧೆ ಆಯೋಜಿಸಿರುವುದು ಖುಷಿ ನೀಡಿದೆ. ನಾನು ಕೂಡ ಮನೆಯಲ್ಲಿ ರಥಸಪ್ತಮಿ, ದೀಪಾವಳಿ ಸಂದರ್ಭದಲ್ಲಿ ರಂಗೋಲಿ ಬಿಡಿಸುತ್ತೇನೆ ಎಂದು ಸಂತೋಷ ವ್ಯಕ್ತಪಡಿಸಿದರು.
ದಸರಾ ಪ್ರಯುಕ್ತ 'ಪಾರಂಪರಿಕ ಉಡುಗೆಯಲ್ಲಿ ಪಾರಂಪರಿಕ ನಡಿಗೆ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು . ನಗರದ ಪುರಭವನದ ಬಳಿ ಬೆಳಗ್ಗೆ ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ಚಾಲನೆ ನೀಡಿದರು.

ಪಾರಂಪರಿಕ ಉಡುಗೆಯಾದ ರೇಷ್ಮೆ ಪಂಚೆ, ಶರ್ಟ್ ಹಾಗೂ ಶಲ್ಯ ಧರಿಸಿ ಬಂದ ಸಚಿವರು ಎಲ್ಲರ ಗಮನ ಸೆಳೆದರು. ಬಾಲಕರಿಂದ ವೃದ್ಧರವರೆಗೂ ಪಾರಂಪರಿಕ ಉಡುಗೆ ತೊಟ್ಟು ಪಾರಂಪರಿಕ ನಡಿಗೆಯಲ್ಲಿ ಪಾಲ್ಗೊಂಡರು .
ಮೈಸೂರು ಪೇಟಾ , ಸಿಲ್ಕ್ ಪಂಚೆ , ಸಿಲ್ಕ್ ಸೀರೆ ತೊಟ್ಟು ನಾಗರಿಕರು ಮಿಂಚಿದರು. ಮೈಸೂರಿನ ಪುರಭವನದಿಂದ ಪ್ರಾರಂಭವಾದ ನಡಿಗೆ ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದರು. ಅಲ್ಲದೆ ಪಾರಂಪರಿಕ ಕಟ್ಟಡಗಳ ಸುತ್ತಲೂ ಸಂಚಾರ ಆರಂಭಿಸಿ ಪ್ರವಾಸಿಗರಿಗೆ ಮೈಸೂರಿನ ಪರಂಪರೆಯ ಬಗ್ಗೆ ಮಾಹಿತಿ ನೀಡಿದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications