Get Updates
Get notified of breaking news, exclusive insights, and must-see stories!

ವರುಣಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಸಿಂಧ್ಯ

Recommended Video

      ವರುಣಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಸಿಂಧ್ಯ | Oneindia Kannada

      ಬೆಂಗಳೂರು, ಅಕ್ಟೋಬರ್ 30: ಜಾತ್ಯಾತೀತ ಜನತಾದಳಕ್ಕೆ ಮರಳಿರುವ ಮಾಜಿ ಸಚಿವ ಹಿರಿಯ ರಾಜಕಾರಣಿ ಪಿ.ಜಿ.ಆರ್. ಸಿಂಧ್ಯ ಅವರಿಗೆ ಪ್ರತಿಷ್ಠಿತ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ಆಹ್ವಾನ ಸಿಕ್ಕಿದೆ.

      ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸುತ್ತಿರುವ ಮೈಸೂರಿನ ವರುಣಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಪಿ.ಜಿ.ಆರ್. ಸಿಂಧ್ಯ ಕಣಕ್ಕಿಳಿಯುವ ಸಾಧ್ಯತೆ ಇದೆ.

      ದಶಕಕ್ಕೂ ಹೆಚ್ಚು ಕಾಲ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದ ಹಿರಿಯ ರಾಜಕಾರಣಿ ಸಿಂಧ್ಯ ಸೋಮವಾರ ಮರಳಿ ಜೆಡಿಎಸ್‌ ಸೇರಲಿದ್ದಾರೆ. ಸಿದ್ದರಾಮಯ್ಯ ಶಕ್ತಿ ಕುಗ್ಗಿಸಲು ಸಿದ್ಧತೆ ನಡೆಸಿರುವ ಜೆಡಿಎಸ್ ವರಿಷ್ಠರು ಸಿಂಧ್ಯ ಅವರನ್ನು ವರುಣಾದಲ್ಲಿ ಕಣಕ್ಕೆ ಇಳಿಸಲು ಚಿಂತನೆ ನಡೆಸಿದ್ದಾರೆ.

      JD(S) likely to field PGR Sindhia from Varuna constituency

      ಹಾಲಿ ಪ್ರತಿನಿಧಿಸುವ ವರುಣಾ ಕ್ಷೇತ್ರವನ್ನು ತಮ್ಮ ಪುತ್ರ ಡಾ. ಯತೀಂದ್ರ ಅವರಿಗೆ ಬಿಟ್ಟುಕೊಟ್ಟು, ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ದರಾಮಯ್ಯ ತಯಾರಿ ನಡೆಸಿದ್ದಾರೆ. ವರುಣಾದಲ್ಲಿ ಒಕ್ಕಲಿಗರು, ಲಿಂಗಾಯಿತರು ಮತ್ತು ಹಿಂದುಳಿದ ವರ್ಗಗಳ ಮತದಾರರ ಸಂಖ್ಯೆ ಹೆಚ್ಚು. ಈ ಲೆಕ್ಕಾಚಾರದಲ್ಲಿ ಸಿಂಧ್ಯ ಅವರನ್ನು ಕಣಕ್ಕೆ ಇಳಿಸಿ, ಸಿದ್ದರಾಮಯ್ಯ ಅವರನ್ನು ಮೈಸೂರಿನಲ್ಲೇ ಕಟ್ಟಿ ಹಾಕುವ ಚಿಂತನೆ ಜೆಡಿಎಸ್‌ ವರಿಷ್ಠರದ್ದಾಗಿದೆ.

      JD(S) likely to field PGR Sindhia from Varuna constituency

      ಭಾನುವಾರ ಸಂಜೆ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದ ಸಿಂಧ್ಯ ಪಕ್ಷಕ್ಕೆ ಮರು ಸೇರ್ಪಡೆಯಾಗುವ ಕುರಿತು ಮಾತುಕತೆ ನಡೆಸಿದರು. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಉಪಸ್ಥಿತರಿದ್ದರು.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+