ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಾಸನದಲ್ಲಿ ಜೆಡಿಎಸ್ ಬೇರು ಅಲುಗಾಡುತ್ತಿದೆ: ಪ್ರತಾಪ್ ಸಿಂಹ

|
Google Oneindia Kannada News

Recommended Video

ಪ್ರತಾಪ್ ಸಿಂಹ ಸೇರಿದಂತೆ ಹಲವರಿಂದ ಜೆಡಿಎಸ್ ವಿರುದ್ಧ ಪ್ರತಿಭಟನೆ

ಮೈಸೂರು, ಫೆಬ್ರವರಿ 15: ಹಾಸನದಲ್ಲಿ ಶಾಸಕ ಪ್ರೀತಂಗೌಡ ಮನೆ ಮೇಲೆ ಜೆಡಿಎಸ್ ಕಾರ್ಯಕರ್ತರು ದಾಳಿ ನಡೆಸಿದ ಹಿನ್ನಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಮೈಸೂರಿನಲ್ಲಿ ನಿನ್ನೆ (ಫೆ.14 )ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ಜಮಾಯಿಸಿದ ಕಾರ್ಯಕರ್ತರು, ಜೆಡಿಎಸ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಶಾಸಕ ಪ್ರೀತಂಗೌಡರನ್ನು ರಾಜಕೀಯವಾಗಿ ಮಾತ್ರವಲ್ಲದೇ, ದೈಹಿಕವಾಗಿಯೂ ಮುಗಿಸಲು ಪ್ರಯತ್ನಿಸಿದ್ದಾರೆ. ಇದೊಂದು ವ್ಯವಸ್ಥಿತ ಪಿತೂರಿ.

ಎಚ್‌ಡಿಕೆ-ರೇವಣ್ಣ ವಿರುದ್ಧ ಕೊಲೆ ಸಂಚಿನ ಆರೋಪ ಹೊರಿಸಿದ ಬಿಜೆಪಿ ಶಾಸಕ ಪ್ರೀತಂಗೌಡ ಎಚ್‌ಡಿಕೆ-ರೇವಣ್ಣ ವಿರುದ್ಧ ಕೊಲೆ ಸಂಚಿನ ಆರೋಪ ಹೊರಿಸಿದ ಬಿಜೆಪಿ ಶಾಸಕ ಪ್ರೀತಂಗೌಡ

ಹಾಸನದಲ್ಲಿ ಜೆಡಿಎಸ್ ಬೇರು ಅಲಾಗಾಡುತ್ತಿದೆ. ಅದಕ್ಕಾಗಿ ಈ ರೀತಿಯ ದಾಳಿ ಯತ್ನಗಳು ನಡೆಯುತ್ತಿವೆ. ಜನರಿಂದ ತಿರಸ್ಕೃತಗೊಂಡವರು ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಾರೆ. ಈ ವೇಳೆ ನಾವು ಸರ್ಕಾರ ರಚಿಸಲು ಮಾಡಿರುವ ಪ್ರಯತ್ನದಲ್ಲಿ ತಪ್ಪೇನಿದೆ. ಇದನ್ನೇ ನೆಪ ಮಾಡಿಕೊಂಡು ಬಿಜೆಪಿ ಮೇಲೆ ದಾಳಿ ಮಾಡೋದು ಹೇಯ ಕೃತ್ಯ ಎಂದರು.

JDS is trying to finish Preetham Gowda politically:Pratap simha

ಎಚ್.ಡಿ.ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಮಾಡುತ್ತೀವಿ ಎಂದು ಹಲವು ತಿಂಗಳು ಕಳೆಯಿತು. ಆದರೆ, ಇದುವರೆಗೂ ಒಬ್ಬ ರೈತರ ಸಾಲ ಮನ್ನಾ ಆಗಿಲ್ಲ. ರಾಜ್ಯದಲ್ಲಿ ಎಂಥಹ ಆಡಳಿತ ನಡೆಸುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಪ್ರೀತಂಗೌಡ ಮನೆ ಮೇಲೆ ಕಲ್ಲು : ಜೆಡಿಎಸ್‌ನ 5 ಮಂದಿ ಮೇಲೆ ಎಫ್‌ಐಆರ್ಪ್ರೀತಂಗೌಡ ಮನೆ ಮೇಲೆ ಕಲ್ಲು : ಜೆಡಿಎಸ್‌ನ 5 ಮಂದಿ ಮೇಲೆ ಎಫ್‌ಐಆರ್

ಕೊಡಗು ಜಿಲ್ಲೆಯಲ್ಲಿ ಭೀಕರ ಮಳೆಯಾದಾಗ ನೆರೆ ಸಂತ್ರಸ್ಥರಿಗೆ ಕೇಂದ್ರ ಸರ್ಕಾರ ನೆರವು ನೀಡಿತು. ನೆರೆ ಪೀಡಿತರಿಗೆ ರಾಜ್ಯ ಸರ್ಕಾರದ ಕೊಡುಗೆಯೇನು ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದರು.

English summary
Mysuru BJP Leaders protest against JDS attack on MLA Preetham Gowda. In this time MP Pratap simha said that JDS is trying to finish Preetham Gowda politically and physically.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X