ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಾ ರಾ ಮಹೇಶ್ ಗೆ ಅವಾಜ್ ಹಾಕಿದ್ದ ಜೆಡಿಎಸ್ ಮುಖಂಡ ಅಮಾನತು

|
Google Oneindia Kannada News

ಮೈಸೂರು, ಜುಲೈ 22 : ಸಚಿವ ಸಾ ರಾ ಮಹೇಶ್ ಅವರಿಗೆ ಅವಾಜ್ ಹಾಕಿದ ಹಿನ್ನೆಲೆಯಲ್ಲಿ ಹಾಗೂ ವಿಶ್ವನಾಥ್ ಅವರ ಬೆಂಬಲಕ್ಕೆ ನಿಲ್ಲುವುದಾಗಿ ತಿಳಿಸಿದ್ದ ಹುಣಸೂರು ತಾಲ್ಲೂಕು ಯುವ ಜೆಡಿಎಸ್ ಅಧ್ಯಕ್ಷ ಲೋಕೇಶ್ ಎಸ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಅಮಾನತು ಮಾಡಲಾಗಿದೆ.

 ಸಾ ರಾ ಮಹೇಶ್ ಗುಳ್ಳೆ ನರಿ; ವಿಶ್ವನಾಥ್ ಪುತ್ರ ಅಮಿತ್ ಸಾ ರಾ ಮಹೇಶ್ ಗುಳ್ಳೆ ನರಿ; ವಿಶ್ವನಾಥ್ ಪುತ್ರ ಅಮಿತ್

ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆಯಲ್ಲಿ ಇವರನ್ನು ಅಮಾನತು ಮಾಡಲಾಗಿದೆ. ಹುಣಸೂರು ಶಾಸಕ ವಿಶ್ವನಾಥ್ ಅವರಿಗೆ ಬೆಂಬಲ ನೀಡುವ ಹಿನ್ನೆಲೆ ಲೋಕೇಶ್, ಸಚಿವ ಸಾ ರಾಮಹೇಶ್ ಅವರಿಗೆ ಬೈದಿದ್ದರು. ಅವರಿಬ್ಬರ ನಡುವಿನ ದೂರವಾಣಿ ಸಂಭಾಷಣೆ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

JDS leader suspended from party for threatening Minister Sa Ra Mahesh

ವಿಶ್ವನಾಥ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ವಿಶ್ವನಾಥ್-ಸಾ ರಾ ಮಹೇಶ್ ನಡುವೆ ವಾಗ್ದಾಳಿ ನಡೆಯುತ್ತಲೇ ಇದೆ. ಸಾ ರಾ ಮಹೇಶ್ ವಿಶ್ವನಾಥ್ ಅವರ ವಿರುದ್ಧ ಮಾಡಿದ್ದ ಆರೋಪದಿಂದ ಕುಪಿತಗೊಂಡ ಲೋಕೇಶ್, 28 ರಿಂದ 30 ಕೋಟಿ ರೂಪಾಯಿಯನ್ನು ವಿಶ್ವನಾಥ್ ಸಾಲ ಪಡೆದಿದ್ದಾರೆಯೇ ? ಅವರು ಸಂಕಷ್ಟದಲ್ಲಿದ್ದಾರೆಯೇ? ಎಂದು ಸಾ ರಾ ಮಹೇಶ್ ಗೆ ಪ್ರಶ್ನಿಸಿದ್ದರು.

English summary
JDS leader suspended from party for threatening Minister Sa Ra Mahesh. Hunasuru JDS Leader suspended for 6 years from Party on the reason for anti-political party activities
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X