ಜಿ.ಟಿ. ದೇವೇಗೌಡ ವಿರುದ್ಧ ವಾಗ್ದಾಳಿ ನಡೆಸಿದ ಜೆಡಿಎಸ್ ನಾಯಕರು
ಮೈಸೂರು, ಡಿಸೆಂಬರ್ 4: ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ನಡೆದ ಜೆಡಿಎಸ್ ಪ್ರಚಾರ ಸಭೆ, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ, ವಿರುದ್ಧ ಗದಾ ಪ್ರಹಾರಕ್ಕೆ ವೇದಿಕೆಯಾಯಿತು.
ಮೈಸೂರು-ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಿ.ಎನ್. ಮಂಜೇಗೌಡ ಪರ ಮತಯಾಚನೆ ಹಿನ್ನೆಲೆ ಮೈಸೂರಿನ ವಿಜಯನಗರದ ಕೊಡವ ಸಮಾಜದಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಶನಿವಾರ ಪ್ರಚಾರ ಸಭೆ ಆಯೋಜಿಸಲಾಗಿತ್ತು. ಆದರೆ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದ ಕುಮಾರಸ್ವಾಮಿ ಹಾಗೂ ಕೆ.ಆರ್. ನಗರ ಶಾಸಕ ಸಾ.ರಾ.ಮಹೇಶ್, ಮೈಮುಲ್ ಮಾಜಿ ಅಧ್ಯಕ್ಷ ಮಾವಿನಹಳ್ಳಿ ಸಿದ್ದೇಗೌಡ, ತಮ್ಮದೇ ಪಕ್ಷದ ಶಾಸಕ ಜಿ.ಟಿ.ದೇವೇಗೌಡ ವಿರುದ್ಧ ವಾಗ್ದಾಳಿ ನಡೆಸಿದರು.
ಸಮಾವೇಶದಲ್ಲಿ ಮೊದಲಿಗೆ ಮಾತನಾಡಿದ ಮೈಮುಲ್ ಮಾಜಿ ಅಧ್ಯಕ್ಷ ಮಾವಿನಹಳ್ಳಿ ಸಿದ್ದೇಗೌಡ, 'ಜಿ.ಟಿ.ದೇವೇಗೌಡರೇ ಇದು ನಿಮ್ಮ ಕೊನೆಯ ಕಾಲ. ನಿಮ್ಮ ದುಡ್ಡು, ಧಮ್ಕಿ ರಾಜಕಾರಣ ಇನ್ಮುಂದೆ ನಡೆಯಲ್ಲ ಎಂದು ಆಕ್ರೋಶ ಹೊರ ಹಾಕಿದರು. ವಿಧಾನ ಪರಿಷತ್ತು ಚುನಾವಣೆ ಬಂದಿದೆ. ಚಾಮುಂಡೇಶ್ವರಿ ಕ್ಷೇತ್ರದ ಸಭೆ ಕರೆದಿದ್ದೇವೆ, ನಾವು ಗ್ರಾ.ಪಂ ಸದಸ್ಯರನ್ನು ಆಹ್ವಾನಿಸಿದರೆ ಹಿಂದಿನಿಂದ ಬಂದು ಬೆದರಿಕೆ ಹಾಕಿದ್ದು, ಯಾವುದೇ ಕಾರಣಕ್ಕೂ ಜೆಡಿಎಸ್ ಸಭೆಗೆ ಹೋಗಬಾರದು ಅಂತ ಧಮ್ಕಿ ಹಾಕಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿಗೆ ವೋಟ್ ಹಾಕಿ ಅಂತ ಜಿ.ಟಿ.ದೇವೇಗೌಡರೇ ಹೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನೀವು ಬಿಜೆಪಿಗೆ ಹೋಗಿ ಸೋತಿದ್ರಿ. ಮರಳಿ ಮನೆಗೆ ಅಂತ ಜೆಡಿಎಸ್ಗೆ ಬಂದಿದ್ದೀರಿ. ಕುಮಾರಸ್ವಾಮಿ ಹುಷಾರಿಲ್ಲದೆ ಇದ್ದರೂ ರೂಟ್ ಮ್ಯಾಪ್ ಹಾಕಿಕೊಂಡು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದರು. ಅದೆಲ್ಲವನ್ನೂ ಯಾರೂ ಮರೆಯಬಾರದು. ಜೆಡಿಎಸ್ ನಂಬಿದ ಯಾರೂ ಕೆಟ್ಟಿಲ್ಲ ಎಂದು ಜಿಟಿಡಿ ವಿರುದ್ಧ ವಾಗ್ದಾಳಿ ನಡೆಸಿದರು.
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿ, ಯಾವುದೇ ಫಲಾಪೇಕ್ಷೆ ಇಲ್ಲದೆ ಕಾರ್ಯಕರ್ತರು ಜೆಡಿಎಸ್ ಕಾಪಾಡಿಕೊಂಡು ಬಂದಿದ್ದಾರೆ.ಎಲ್ಲಾ ಸಮಾಜದವರು ನನ್ನನ್ನ ಪ್ರೀತಿಯಿಂದ ಕಂಡಿದ್ದೀರಿ. 2006ರಿಂದಲೂ ನಾಯಕ ಸಮಾಜ ಅವರ ಮಗನಂತೆ ಕಾಣುತ್ತಿದೆ. ಇವತ್ತಿನ ಸಭೆಗೆ ಹೋಗದಂತೆ ಜಿಟಿಡಿ ಧಮಕಿ ಹಾಕಿದ್ದಾರಂತೆ. ಚಾಮುಂಡೇಶ್ವರಿ ಕಾರ್ಯಕರ್ತರು ಧಮಕಿ ಹೆದರಲ್ಲ. ಹಲವಾರಿ ಬಾರಿ ಇದನ್ನ ಸಾಬೀತು ಮಾಡಿದ್ದಾರೆ. ನಮ್ಮನ್ನ ಬಿಜೆಪಿಯ ಬಿ ಟೀಂ ಎಂದವರೆ ನಮ್ಮ ಜೊತೆ ಬಂದು ಸರ್ಕಾರ ಮಾಡಿದರು. ಬಲವಂತವಾಗಿ ನೀವೆ ಸಿಎಂ ಆಗಿ ಎಂದು ನನ್ನ ತಲೆಗೆ ಕಟ್ಟಿದ್ರು. ಸರ್ಕಾರ ಮಾಡಿದ ಮೊದಲ ದಿನದಿಂದಲೇ ಯಾವ ರೀತಿ ನಡೆಸಿಕೊಂಡರು ಎಂಬುದು ಜನತೆಗೆ ಗೊತ್ತು. ರೈತರ ಸಾಲಮನ್ನಾ ಮಾಡಲು ಎಲ್ಲಾ ಕಿರುಕುಳವನ್ನು ಸಹಿಸಿಕೊಂಡೆ. ಸಾಲ ಮನ್ನಾದಂತ ಐತಿಹಾಸಿಕ ತೀರ್ಮಾನ ಕೈಗೊಂಡೆ ಎಂದು ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಹೇಳಿದರು.

ಶಾಕಸ ಸಾ.ರಾ. ಮಹೇಶ್ ಮಾತನಾಡಿ, ಬಿಜೆಪಿ ಅಭ್ಯರ್ಥಿ ಕೈಗಾರಿಕೋದ್ಯಮಿ, ಶಿಕ್ಷಣ ಸಂಸ್ಥೆಯವರಾದರೆ ಕಾಂಗ್ರೆಸ್ ಅಭ್ಯರ್ಥಿ ಸರ್ಕಾರಿ ಕೆಲಸದಿಂದ ನಿವೃತ್ತಿಯಾಗಿ ಬಂದವರು. ಹೀಗಾಗಿ ಅವರಿಬ್ಬರಿಗೂ ಗ್ರಾಮ ಪಂಚಾಯಿತಿ ಸದಸ್ಯರ ಸಮಸ್ಯೆ ಗೊತ್ತಿಲ್ಲ. ಆದರೆ ಜೆಡಿಎಸ್ ಅಭ್ಯರ್ಥಿ ಸಿ.ಎನ್.ಮಂಜೇಗೌಡ ಗ್ರಾಮ ಪಂಚಾಯಿತಿ ಸದಸ್ಯ, ಅಧ್ಯಕ್ಷರಾಗಿ ಕೆಲಸ ಮಾಡಿದವರು. ಮಂಜೇಗೌಡರು 2013ರಲ್ಲಿ ಶಾಸಕರಾಗಬೇಕಿತ್ತು. ದೊಡ್ಡ ನಾಯಕರು ಬಂದರು ಅಂತ ಅವರಿಗೆ ಅವಕಾಶ ಕೊಡಲಿಲ್ಲ. ಸೈನಿಕರಾಗಿ, ಸಾರ್ವಜನಿಕ ಸೇವೆ ಮಾಡಿದ್ದಾರೆ ಎಂದರು.
-
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications