ಜೆಡಿಎಸ್ ಪಕ್ಷ ನಿಷ್ಠರ ಸಭೆಗೆ ನನಗೆ ಆಹ್ವಾನ ಬಂದಿಲ್ಲ, ಆದರೂ ಹೋಗುತ್ತೇನೆ
ಮೈಸೂರು, ಜ 4: "ಜೆಡಿಎಸ್ ಕರೆದಿರುವ ಪಕ್ಷದ ನಿಷ್ಟಾವಂತರ ಸಭೆಗೆ ನನಗೆ ಆಹ್ವಾನ ಬಂದಿಲ್ಲ. ಆದರೂ, ಬಿಡುವಿದ್ದರೆ ಖಂಡಿತ ಸಭೆಯಲ್ಲಿ ಪಾಲ್ಗೊಳ್ಳಲಿದ್ದೇನೆ" ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.
ಜೆಡಿಎಸ್ ನಲ್ಲಿದ್ದರೂ ಸಕ್ರಿಯವಾಗಿ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸದ ಜಿಟಿಡಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜೊತೆ ಅಂತರವನ್ನು ಕಾಯ್ದುಕೊಂಡು ಬಂದಿದ್ದಾರೆ. ಆದರೂ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಜಿಟಿಡಿಯವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದರು.
ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ಜಿಟಿಡಿ,"ಇದೇ ಬರುವ ಏಳನೇ ತಾರೀಕಿನಿಂದ ಜೆಡಿಎಸ್ ನಿಷ್ಟಾವಂತರ ಸಭೆಯನ್ನು ಕರೆಯಲಾಗಿದೆ. ಪಕ್ಷದಿಂದಾಗಲಿ ಅಥವಾ ದೇವೇಗೌಡರಿಂದಾಗಲಿ ನನಗೆ ಆಹ್ವಾನ ಬಂದಿಲ್ಲ"ಎಂದು ಹೇಳಿದ್ದಾರೆ.

"ನನಗೆ ನನ್ನ ಕ್ಷೇತ್ರ ಮತ್ತು ಕ್ಷೇತ್ರದ ಅಭಿವೃದ್ದಿ ಮುಖ್ಯ. ಆದರೂ, ನನಗೆ ಏಳನೇ ತಾರೀಕಿನಂದು ಬಿಡುವಿದ್ದಲ್ಲಿ, ನಾನು ಆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೇನೆ"ಎಂದು ಜಿ.ಟಿ.ದೇವೇಗೌಡ ಹೇಳಿದ್ದಾರೆ.
"ಕಾಲಕ್ಕೆ ತಕ್ಕಂತೆ ಬದಲಾವಣೆಗಳು ನಡೆಯುತ್ತಿರುತ್ತವೆ, ಅದೇ ರೀತಿ ಜೆಡಿಎಸ್ ನಲ್ಲೂ ಬದಲಾವಣೆಯಾಗುತ್ತಿದೆ. ಈ ವರ್ಷ ನನ್ನಲ್ಲಿ ಏನೂ ಬದಲಾವಣೆಯಾಗುವುದಿಲ್ಲ. 2023ರಲ್ಲಿ ಬದಲಾವಣೆ ಆದರೂ ಆಗಬಹುದು"ಎಂದು ಜಿಟಿಡಿ ಹೇಳಿದ್ದಾರೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇತ್ತೀಚೆಗೆ ಜಿ.ಟಿ.ದೇವೇಗೌಡರನ್ನು ಭೇಟಿಯಾಗಿದ್ದರು. ಮುಂದಿನ ಅಸೆಂಬ್ಲಿ ಚುನಾವಣೆಯ ವೇಳೆ, ಮೈಸೂರು ಭಾಗದಲ್ಲಿ ಸಾಕಷ್ಟು ಬದಲಾವಣೆಯಾಗಲಿದೆ ಎಂದೇ ಈ ಇಬ್ಬರು ನಾಯಕರ ಭೇಟಿಯನ್ನು ವ್ಯಾಖ್ಯಾನಿಸಲಾಗಿತ್ತು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications