ಮೈಸೂರು ಮಹಾನಗರ ಪಾಲಿಕೆ: ಎರಡನೇ ಬಾರಿಗೆ ಜೆಡಿಎಸ್-ಬಿಜೆಪಿ ದೋಸ್ತಿ
ಮೈಸೂರು, ಡಿಸೆಂಬರ್. 07 : ಮೈಸೂರು ಜಿಲ್ಲಾ ಪಂಚಾಯಿತಿ ಗದ್ದುಗೆಯನ್ನು ಕಳೆದುಕೊಂಡಿದ್ದ ಕಾಂಗ್ರೆಸ್ ಗೆ ಮೈಸೂರು ಮಹಾನಗರ ಪಾಲಿಕೆ ಅಧಿಕಾರ ಕೈತಪ್ಪಿದೆ. ಕಳೆದ ವರ್ಷ ಮಹಾನಗರ ಪಾಲಿಕೆ ಅಧಿಕಾರ ಹಿಡಿಯಲು ಯಶಸ್ವಿಯಾಗಿದ್ದ ಜೆಡಿಎಸ್ ಮತ್ತು ಬಿಜೆಪಿ ಈ ಬಾರಿಯೂ ಎರಡನೇ ಬಾರಿಗೆ ದೋಸ್ತಿ ಮುಂದುವರೆಸಿವೆ. ಇದರಿಂದ ಕಾಂಗ್ರೆಸ್ ಗೆ ತೀವ್ರ ಮುಖಭಂಗವಾಗಿದೆ.
ಬುಧವಾರ ನಡೆದ ಮೇಯರ್ ಮತ್ತು ಉಪ ಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಕೈಜೋಡಿಸಿದ್ದು, ಮೇಯರ್ ಆಗಿ ಜೆಡಿಎಸ್ ನ ಎಂ.ಜೆ.ರವಿಕುಮಾರ್ (ಚಿನ್ನಿ ರವಿ) ಹಾಗೂ ಉಪಮೇಯರ್ ಆಗಿ ಬಿಜೆಪಿಯ ರತ್ನ ಲಕ್ಷ್ಮಣ್ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಗೆ ಯಾವುದೇ ಕಾರಣಕ್ಕೂ ಅವಕಾಶ ಕೊಡಬಾರದೆಂಬ ಹಠಕ್ಕೆ ಬಿದ್ದ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಕೊನೆಗಳಿಗೆಯಲ್ಲಿ ತಂತ್ರ ರೂಪಿಸಿದ್ದು, ತವರು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಖಭಂಗ ತಂದೊಡ್ಡಿದೆ.

35ನೇ ವಾರ್ಡಿನ ಜೆಡಿಎಸ್ ಅಭ್ಯರ್ಥಿ ರವಿಕುಮಾರ್ 73 ಮತಗಳಲ್ಲಿ 42 ಮತಗಳನ್ನು ಪಡೆದು ಮೇಯರ್ ಆಗಿ ಆಯ್ಕೆಯಾದರು. ಇನ್ನು ಬಿಜೆಪಿಯ ರತ್ನ ಲಕ್ಷ್ಮಣ್ ಅವರು ಉಪ ಮೇಯರ್ ಆಗಿ ಅವರು ಆಯ್ಕೆಯಾದರು.
ರವಿಕುಮಾರ್ ಅವರು ಪ್ರತಿಸ್ಪರ್ಧಿ ಜಗದೀಶ್ ಅವರಿಗಿಂತ 12 ಹೆಚ್ಚು ಮತಗಳನ್ನು ಪಡೆದು ಗೆಲುವು ಸಾಧಿಸಿದರು. ರವಿಕುಮಾರ್ 42 ಮತಗಳನ್ನು ಪಡೆದರೆ ಜಗದೀಶ್ 30 ಮತಗಳನ್ನು ಪಡೆದರು.
ರವಿಕುಮಾರ್ ಮತ್ತು ರತ್ನ ಲಕ್ಷ್ಮಣ್ ಪರವಾಗಿ ಶಾಸಕ ಟಿ.ಟಿ. ದೇವೇಗೌಡ, ಎಮ್ ಎಲ್ ಸಿಗಳಾದ ಮರಿತಿಬ್ಬೇಗೌಡ, ಶ್ರೀಕಂಠೇಗೌಡ, ಸಂದೇಶ್ ನಾಗರಾಜ್, ಸಂಸದ ಪ್ರತಾಪ್ ಸಿಂಹ ಮತ್ತು 37 ಪಾಲಿಕೆ ಸದಸ್ಯರು ಮತ ಚಲಾಯಿಸಿದ್ದರು.

ಕಾಂಗ್ರೆಸ್ ನ ಜಗದೀಶ್ ಪರ 30 ಮತಗಳು ಚಲಾವಣೆಯಾಗಿದ್ದು, ಸಚಿವ ತನ್ವೀರ್ ಸೇಠ್ ಶಾಸಕರಾದ ವಾಸು ಸೋಮಶೇಖರ್ ಎಂಎಲ್ ಸಿ ಧರ್ಮಸೇನಾ ಅವರ ಮತಗಳು ಸೇರಿದಂತೆ 30 ಮತಗಳು ಚಲಾವಣೆಯಾಗಿವೆ.
ವಾರ್ಡ್-1ರ ಬಿಜೆಪಿ ಸದಸ್ಯ ಬಿ.ವಿ. ಮಂಜುನಾಥ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲೂ ಇತರರ ಸಹಾಯದಿಂದ ಆಗಮಿಸಿ ಮತ ಚಲಾಯಿಸಿದರು. ಕಳೆದ ಬಾರಿ ಮೇಯರ್ ಚುನಾವಣೆ ವೇಳೆ ಅನಿರೀಕ್ಷಿತ ಎಂಬಂತೆ ಕೆಜೆಪಿಯಿಂದ ಜಯಗಳಿಸಿದ್ದ ಬಿ.ಎಲ್. ಭೈರಪ್ಪ ಮೇಯರ್ ಆಗಿದ್ದರು. ರವಿಕುಮಾರ್ ಅವರು ಉಪಮೇಯರ್ ಆಗಿದ್ದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications