ಮೈಸೂರಿನಲ್ಲಿ ಮತ್ತೆ ಒಂದಾದ ಸಿದ್ದರಾಮಯ್ಯ ಮತ್ತು ದೇವೇಗೌಡ
ಮೈಸೂರು, ಮಾರ್ಚ್ 27: ಚುನಾವಣಾ ವರ್ಷದಲ್ಲಿ ಪಕ್ಷಾಂತರ ಪರ್ವಕ್ಕೆ ಮುನ್ನುಡಿ ಬರೆಯುವ ಕೆಲಸಗಳು ವೇಗವನ್ನು ಪಡೆದುಕೊಳ್ಳುತ್ತಿದೆ. ಮುಂದಿನ ಚುನಾವಣೆಯ ಹೊತ್ತಿಗೆ ಹಾಲೀ ಹಲವು ಜೆಡಿಎಸ್ ಶಾಸಕರು ಪಕ್ಷವನ್ನು ತೊರೆಯುವುದು ಬಹುತೇಕ ಖಚಿತಗೊಳ್ಳುತ್ತಿದೆ.
ಪಕ್ಷದ ಅದರಲ್ಲೂ ಪ್ರಮುಖವಾಗಿ ಜೆಡಿಎಸ್ ಬೇರು ಬಲವಾಗಿರುವ ಜಿಲ್ಲೆಗಳ ನಾಯಕರುಗಳು ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಈ ಪೈಕಿ ಬಹಿರಂಗವಾಗಿಯೇ ಮೂವರು ಹಾಲೀ ಶಾಸಕರು ಪಕ್ಷ ತೊರೆಯುವ ಬಗ್ಗೆ ಮಾತನ್ನಾಡಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೆಗೌಡ, ಗುಬ್ಬಿ ಶಾಸಕ ಶ್ರೀನಿವಾಸ್ ಮತ್ತು ಕೋಲಾರ ಶಾಸಕ ಶ್ರೀನಿವಾಸ ಗೌಡ, ಈ ಮೂವರೂ ಈಗಾಗಲೇ ಬಹಿರಂಗವಾಗಿಯೇ ತಮ್ಮ ನಿಲುವನ್ನು ಸಾರ್ವಜನಿಕವಾಗಿ ತಿಳಿಸಿದ್ದಾರೆ.
ಈ ಪೈಕಿ, ದೇವೇಗೌಡ್ರ ಕುಟುಂಬಕ್ಕೆ ಒಂದು ಕಾಲದಲ್ಲಿ ಆಪ್ತರಾಗಿದ್ದ ಜಿ.ಟಿ.ದೇವೇಗೌಡ ಕೂಡಾ ಮಗನೊಂದಿಗೆ ಕಾಂಗ್ರೆಸ್ ಸೇರುವುದಾಗಿ ಹೇಳಿದ್ದಾರೆ. ಜಿಟಿಡಿಯವರು ಕಳೆದ ಚುನಾವಣೆಯಲ್ಲಿ ತಮ್ಮ ಎದುರಾಳಿಯಾಗಿದ್ದ ಸಿದ್ದರಾಮಯ್ಯನವರ ಜೊತೆಗೆ ಆಪ್ತರಾಗುತ್ತಿದ್ದಾರೆ.

ನನ್ನ ಮಗನಿಗೆ ಟಿಕೆಟ್ ಕೊಟ್ಟರೆ ಮಾತ್ರ ನಾನು ಕಾಂಗ್ರೆಸ್ ಪಕ್ಷ ಸೇರುತ್ತೇನೆ
ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಸೇರುವ ವಿಚಾರದಲ್ಲಿ ಮಾತನಾಡಿದ್ದ ಜಿ.ಟಿ.ದೇವೇಗೌಡ, "ನನ್ನ ಮಗನಿಗೆ ಟಿಕೆಟ್ ಕೊಟ್ಟರೆ ಮಾತ್ರ ನಾನು ಕಾಂಗ್ರೆಸ್ ಪಕ್ಷ ಸೇರುತ್ತೇನೆ. ಮೊದಲು ನನ್ನ ಮಗ ಹರೀಶ್ ಗೌಡ ವಿಚಾರದಲ್ಲಿ ಕಾಂಗ್ರೆಸ್ ತನ್ನ ತೀರ್ಮಾನ ಹೇಳಿದ ಮೇಲೆ ಉಳಿದ ಮಾತುಕತೆ ನಡೆಸುತ್ತೇನೆ" ಎಂದು ಹೇಳಿದ್ದರು. ಈಗ, ಕ್ಷೇತ್ರದ ಕಾರ್ಯಕ್ರಮವೊಂದಕ್ಕೆ ಸಿದ್ದರಾಮಯ್ಯನವರನ್ನು ಕರೆಸಿದ್ದಾರೆ. ಆ ಮೂಲಕ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರಿಗೆ ಸಡ್ಡು ಹೊಡೆದಿದ್ದಾರೆ.
|
ಖುದ್ದು ಸಿದ್ದರಾಮಯ್ಯನವರೇ ಟ್ವೀಟ್ ಮಾಡಿದ್ದಾರೆ
ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯಲ್ಲಿ ಶನಿವಾರ (ಮಾರ್ಚ್ 26) ನಡೆದ ಕಾರ್ಯಕ್ರಮವೊಂದರಲ್ಲಿ ಸಿದ್ದರಾಮಯ್ಯ ಭಾಗವಹಿಸಿದ್ದಾರೆ. ಈ ಬಗ್ಗೆ ಖುದ್ದು ಸಿದ್ದರಾಮಯ್ಯನವರೇ ಟ್ವೀಟ್ ಮಾಡಿದ್ದಾರೆ. "ಮೈಸೂರಿನ ಇಲವಾಲದಲ್ಲಿ ಹೊಸದಾಗಿ ಆಳವಡಿಸಿರುವ ಬೀದಿ ದೀಪಗಳ ಉದ್ಘಾಟನೆಯನ್ನು ನೆರವೇರಿಸಿದೆ. ಕ್ಷೇತ್ರದ ಶಾಸಕರೂ ಆದ ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರು ಈ ವೇಳೆ ಹಾಜರಿದ್ದರು"ಎಂದು ಟ್ವೀಟ್ ಮಾಡಿದ್ದಾರೆ.

ಸಚಿವ ಸ್ಥಾನ ಹಂಚಿಕೆ ವಿಚಾರದಲ್ಲಿ ಕುಮಾರಸ್ವಾಮಿ ಜೊತೆಗೆ ಮನಸ್ತಾಪ
ಸಿದ್ದರಾಮಯ್ಯನವರನ್ನು ಕಳೆದ ಚುನಾವಣೆಯಲ್ಲಿ ಜಿ.ಟಿ.ದೇವೇಗೌಡ ಭಾರೀ ಅಂತರದಿಂದ ಸೋಲಿಸಿದ್ದರು. ಕುಮಾರಸ್ವಾಮಿಯವರನ್ನು ಪ್ರಚಾರಕ್ಕೆ ಅತಿಯಾಗಿ ಕರೆಸಿಕೊಳ್ಳದೇ ತಮ್ಮ ವರ್ಚಸ್ಸಿನಿಂದಲೇ ಜಿಟಿಡಿ ಗೆಲುವು ಸಾಧಿಸಿದ್ದರು. ಇದಾದ ಸ್ವಲ್ಪದಿನಗಳಲ್ಲಿ ಸಚಿವ ಸ್ಥಾನ ಹಂಚಿಕೆ ವಿಚಾರದಲ್ಲಿ ಕುಮಾರಸ್ವಾಮಿ ಜೊತೆಗೆ ಮನಸ್ತಾಪ ಉಂಟಾಗಿತ್ತು. ಸಮ್ಮಿಶ್ರ ಸರಕಾರದ ಪತನದ ನಂತರ ಜೆಡಿಎಸ್ ಚಟುವಟಿಕೆಯಿಂದ ಜಿಟಿಡಿ ಸಂಪೂರ್ಣ ದೂರವಾಗಿದ್ದರು. ಕ್ಷೇತ್ರದ ಕಾರ್ಯಕ್ರಮಕ್ಕೆ ಜಿಟಿಡಿಯವರು ಎಚ್ಡಿಕೆಯವರನ್ನು ಕರೆಯುತ್ತಿಲ್ಲ. ಹಾಗೆಯೇ, ಕುಮಾರಸ್ವಾಮಿಯವರು ಅವರನ್ನು ಆಹ್ವಾನಿಸುತ್ತಿಲ್ಲ.

ಜಿಟಿಡಿ ಮಗ ಹರೀಶ್ ಮತ್ತು ನಿಖಿಲ್ ದೇವಸ್ಥಾನವೊಂದರಲ್ಲಿ ಭೇಟಿ
ಜಿಟಿಡಿಯವರ ಮನವೊಲಿಸುವ ಕೆಲಸವನ್ನು ದೇವೇಗೌಡ್ರು ಹಲವು ಬಾರಿ ಮಾಡಿದ್ದರು. ಇದರ ಜೊತೆಗೆ, ಜಿಟಿಡಿ ಮಗ ಹರೀಶ್ ಮತ್ತು ನಿಖಿಲ್ ಕುಮಾರಸ್ವಾಮಿಯವರು ದೇವಸ್ಥಾನವೊಂದರಲ್ಲಿ ಭೇಟಿಯಾಗಿದ್ದರು. "ನನ್ನ ಮಗ ಮತ್ತು ಜಿಟಿಡಿಯವರ ಮಗ ಹಳೆಯ ಸ್ನೇಹಿತರು. ಜಿಟಿಡಿ ಪಕ್ಷದಲ್ಲೇ ಉಳಿಯಲಿದ್ದಾರಾ ಎನ್ನುವ ಪ್ರಶ್ನೆಗೆ ಸದ್ಯ ಉತ್ತರಿಸಲಾರೆ. ಕೆಲವೊಮ್ಮೆ ಮಕ್ಕಳ ಮಾತನ್ನೂ ಕೇಳಬೇಕಾಗುತ್ತದೆ"ಎಂದು ಕುಮಾರಸ್ವಾಮಿ ಮಾರ್ಮಿಕವಾಗಿ ನುಡಿದಿದ್ದರು. ಆದ್ರೆ, ಜಿಟಿಡಿ ದಿನದಿಂದ ದಿನಕ್ಕೆ ಕಾಂಗ್ರೆಸ್ಸಿಗೆ ಹತ್ತಿರವಾಗುತ್ತಿದ್ದಾರೆ.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications