ಬದುಕಿನ ಕೊನೆ ಅವಧಿಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು: ದೇವೇಗೌಡ
ಹುಣಸೂರು, ಜೂನ್ 29: ನನಗೆ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು ಎಂಬ ಕನಸು ಹೊರತು ಮಗ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕು ಎಂಬ ವ್ಯಾಮೋಹ ಇಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಪಟ್ಟಣದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ನಾಡಿನ ರೈತರ ಹಿತಕಾಯುವ ಪಕ್ಷ ಅಂತ ಏನಾದರೂ ಇದ್ದರೆ ಅದು ಜೆಡಿಎಸ್ ಮಾತ್ರ. ಆದ್ದರಿಂದ ಹಳೇ ಮೈಸೂರು ಪ್ರಾಂತ್ಯದಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಡಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ನನ್ನ ಬದುಕಿನ ಕೊನೆಯ ಅವಧಿಯಲ್ಲಿ ಅನ್ನದಾತರಾದ ರೈತರ ಪಕ್ಷವಾಗಿರುವ ಜೆಡಿಎಸ್ ಅಧಿಕಾರಕ್ಕೆ ಬರಬೇಕು. ಇದು ನನ್ನ ಬಹುದಿನದ ಕನಸು. ಅದನ್ನು ನನಸು ಮಾಡುವಲ್ಲಿ ಕಾರ್ಯಕರ್ತರು ಮುಂದಾಗಬೇಕು ಎಂದರು.
20 ತಿಂಗಳು ಉತ್ತಮ ಅಧಿಕಾರ ನೀಡಿದ ಎಚ್.ಡಿ.ಕುಮಾರ ಸ್ವಾಮಿ ಮತ್ತೊಮ್ಮೆ ಈ ರಾಜ್ಯದ ಚುಕ್ಕಾಣಿ ಹಿಡಿಯಬೇಕು. ಆಗ ಮಾತ್ರ ಈ ನಾಡು ಅಭಿವೃದ್ಧಿಯತ್ತ ದಾಪುಗಾಲು ಹಾಕಲು ಸಾಧ್ಯ. ಅದಕ್ಕಾಗಿ ಇಡೀ ರಾಜ್ಯವನ್ನು ಈ ಇಳಿವಯಸ್ಸಿನಲ್ಲೂ ಸುತ್ತಾಡಿ, ನಾಡಿನಗಲಕ್ಕೂ ಕಾರ್ಯಕರ್ತರು ಹಾಗೂ ಎಲ್ಲ ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡಿಲಿದ್ದೇನೆ ಎಂದು ಹೇಳಿದರು.
ನನಗೆ ಹೋರಾಟ ಹೊಸತೇನಲ್ಲ ದಿ.ದೇವರಾಜ ಅರಸರ ಕಾಲದಲ್ಲೂ ರಾಜಿಯಿಲ್ಲದೆ ಹೋರಾಟ ಮಾಡಿದ್ದೇನೆ. ಮುಂದೆಯೂ ಹೋರಾಟ ಮಾಡುವುದಾಗಿ ಹೇಳಿದರು.
ಸಿದ್ದರಾಮಯ್ಯ ಒಬ್ಬ ವ್ಯಕ್ತಿಯಷ್ಟೆ ಶಕ್ತಿಯಲ್ಲ. ಅಂದು ನಮ್ಮ ಪಕ್ಷ ಅವರನ್ನು ಬೆಳೆಸಿದ್ದಕ್ಕೆ ಇಂದು ಅವರು ಮುಖ್ಯಮಂತ್ರಿಯಾಗಿದ್ದಾರೆ. ಅವರ ರಾಜಕೀಯ ಜೀವನವನ್ನು ಕಾಲ ನಿರ್ಧಾರ ಮಾಡುತ್ತದೆ ಎಂದರು.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications