ಸೈಕಲ್ ಏರಲಿದ್ದಾರೆ ಜೆಡಿಎಸ್ ನ ಬೆಂಕಿ ಮಹದೇವು

ಜೆಡಿಎಸ್ ನಾಯಕರ ವಿರುದ್ಧ ಅಸಮಾಧಾನಗೊಂಡಿರುವ ಪ್ರಬಲ ವೀರಶೈವ ನಾಯಕ ಮತ್ತು ಮಾಜಿ ಸಚಿವ ಎಂ.ಮಹದೇವು ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ಮೈಸೂರಿನಿಂದ ಸ್ಪರ್ಧಿಸಲಿದ್ದಾರೆ. ಸಮಾಜವಾದಿ ಪಕ್ಷ ಅವರಿಗೆ ಅಧಿಕೃತ ಆಹ್ವಾನವನ್ನು ನೀಡಿದೆ.
ಗುರುವಾರ ಸಮಾಜವಾದಿ ಪಕ್ಷದ ಅಧ್ಯಕ್ಷ ಬಾಬಾ ಗೌಡ ಪಾಟೀಲ್ ಮತ್ತು ಪಕ್ಷದ ಮುಖಂಡ ಗೂಳಿಹಟ್ಟಿ ಶೇಖರ್ ಮಹದೇವು ಅವರನ್ನು ಭೇಟಿಯಾಗಿ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ. ಶೀಘ್ರದಲ್ಲೇ ಮಹದೇವು ಜೆಡಿಎಸ್ ತೊರೆಯುವುದು ಖಚಿತವಾಗಿದೆ.
ಮೈಸೂರಿರನಲ್ಲಿ ಜೆಡಿಎಸ್ ಲೋಕಸಭೆ ಚುನಾವಣೆಯಲ್ಲಿ ನನಗೆ ಟಿಕೆಟ್ ನೀಡುವುದಿಲ್ಲ. ಮೈಸೂರಿನಿಂದ ಮಾಜಿ ಸಿಎಂ ಸದಾನಂದ ಗೌಡರು ಸ್ಪರ್ಧಿಸುವ ಸಾಧ್ಯತೆ ಇದೆ. ಅವರಿಗೆ ಬೆಂಬಲ ನೀಡಿಲು ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸುವುದಿಲ್ಲ ಎಂದು ಮಹದೇವು ಹೇಳಿದ್ದಾರೆ.
ಆದ್ದರಿಂದ ಸಮಾಜವಾದಿ ಪಕ್ಷ ಸೇರಿ ಮೈಸೂರಿನಿಂದ ಚುನಾವಣೆಗೆ ಸ್ಫರ್ಧಿಸಲು ಬಯಸಿದ್ದೇನೆ. ಪಕ್ಷ ನನಗೆ ಟಿಕೆಟ್ ನೀಡುತ್ತದೆ ಎಂಬ ನಂಬಿಕೆ ಇದೆ ಎಂದು ಹೇಳುವ ಮೂಲಕ ಮಹದೇವು ಸೈಕಲ್ ಏರುವ ಸೂಚನೆಯನ್ನು ಕೊಟ್ಟಿದ್ದಾರೆ.
ಪಕ್ಷದ ವಿರುದ್ಧ ಅಸಮಾಧಾನ : ಎಂ.ಮಹದೇವು ವಿಧಾನಸಭೆ ಚುನಾವವಣೆ ವೇಳೆಯಲ್ಲಿ ಚಾಮುಂಡೇಶ್ವರಿ ಮತ್ತು ಹನ್ನೂರು ಕ್ಷೇತ್ರದಿಂದ ಟಿಕೆಟ್ ಬಯಸಿದ್ದರು. ಆದರೆ. ಜೆಡಿಎಸ್ ರಾಷ್ಟಾಧ್ಯಕ್ಷ ಎಚ್.ಡಿ.ದೇವೇಗೌಡ ಮತ್ತು ಆಗ ರಾಜ್ಯಾಧ್ಯಕ್ಷರಾಗಿದ್ ಕುಮಾರಸ್ವಾಮಿ ಟಿಕೆಟ್ ನೀಡಲು ಕೊನೆಯ ಕ್ಷಣದಲ್ಲಿ ನಿರಾಕರಿಸಿದ್ದರು.
ಅಂದಿನಿಂದಲೇ ಪಕ್ಷದ ನಾಯಕರ ಧೋರಣೆ ವಿರುದ್ಧ ಮಹದೇವು ಅಸಮಾಧಾನಗೊಂಡಿದ್ದರು. ಸದ್ಯ ಸಮಾಜವಾದಿ ಪಕ್ಷದಿಂದ ಆಹ್ವಾನ ಬಂದಿರುವ ಹಿನ್ನೆಲೆಯಲ್ಲಿ ಜೆಡಿಎಸ್ ತೊರೆಯಲು ನಿರ್ಧರಿಸಿದ್ದಾರೆ. ಇದರಿಂದ ಮೈಸೂರು ಭಾಗದಲ್ಲಿ ಸಮಾಜವಾದಿ ಪಕ್ಷಕ್ಕೆ ಮತ್ತಷ್ಟು ಬಲ ದೊರೆಯಲಿದೆ.
ಕೆಲವು ದಿನಗಳ ಹಿಂದೆ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಜೆಡಿಎಸ್ ತೊರೆದಿದ್ದರು. ಸದ್ಯ ಮತ್ತೊಬ್ಬ ಹಿರಿಯ ನಾಯಕ ಎಂ.ಮಹದೇವು ಪಕ್ಷ ತೊರೆಯಲು ಸಜ್ಜಾಗಿದ್ದಾರೆ. ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವಾಗ ಜೆಡಿಎಸ್ ನಲ್ಲಿ ಪಕ್ಷಾಂತರಿಗಳ ಸಂಖ್ಯೆ ಹೆಚ್ಚಾಗುತ್ತಿದೆ. (ಜೆಡಿಎಸ್ ತೊರೆದ ಯತ್ನಾಳ್)
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications