Get Updates
Get notified of breaking news, exclusive insights, and must-see stories!

ವರುಣಾದಲ್ಲಿ ಜೆಡಿಎಸ್ ಬೆಂಬಲಿಗರು ಬಿಜೆಪಿಗೆ ಮತ ಹಾಕಿದ್ದಾರೆ: ಸಿದ್ದರಾಮಯ್ಯ

ಮೈಸೂರು, ಮೇ 12: ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದು, ಬಹುತೇಕ ಎಕ್ಸಿಟ್ ಪೋಲ್‌ಗಳು ಇದನ್ನೇ ಸೂಚಿಸುತ್ತಿವೆ ಎಂದು ಹೇಳಿದ್ದಾರೆ.

ಅವರು ಬೆಂಗಳೂರಿಗೆ ತೆರಳುವ ಮುನ್ನ ಮೈಸೂರಿನ ಶಾರದಾದೇವಿ ನಗರದಲ್ಲಿರುವ ತಮ್ಮ ಮನೆಯ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶನಿವಾರ ಮತ ಎಣಿಕೆ ನಡೆಯಲಿದ್ದು ಫಲಿತಾಂಶ ಬರಲಿದೆ. ಜನರ ನಾಡಿಮಿಡಿತದ ಬಗ್ಗೆ ನನ್ನ ತಿಳುವಳಿಕೆ ನಿಜವಾಗಿದೆ. ನಾನು ನಿರೀಕ್ಷಿಸಿದ ಅದೇ ಫಲಿತಾಂಶವನ್ನು ನಾವು ಪಡೆಯುತ್ತೇವೆ. ಕಾಂಗ್ರೆಸ್ 130 ರಿಂದ 150 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

karnataka assembly elections 2023 Siddaramaiah

ಹಳೇ ಮೈಸೂರು ಭಾಗದ ಪರಿಸ್ಥಿತಿಯನ್ನು ಅವಲೋಕಿಸಿದ ಅವರು, ಹಳೆ ಮೈಸೂರಿನ ಕೆಲವೆಡೆ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿ ಏರ್ಪಟ್ಟಿದ್ದು, ಈ ಭಾಗದಲ್ಲಿ ಎಲ್ಲಿಯೂ ಬಿಜೆಪಿ ಜತೆ ನೇರ ಹಣಾಹಣಿ ಇಲ್ಲ. ಕರಾವಳಿ ಭಾಗದಲ್ಲಿಯೂ ಕಾಂಗ್ರೆಸ್‌ನ ಸ್ಥಾನಗಳು ಹೆಚ್ಚಾಗಲಿವೆ ಎಂದು ಹೇಳಿದರು.

ವರುಣಾದಲ್ಲಿ ನಾನೇ ಸುಲಭವಾಗಿ ಗೆಲ್ಲುತ್ತೇನೆ. ಜನ ಸೋಮಣ್ಣಗೆ ಯಾಕೆ ಮತ ಹಾಕುತ್ತಾರೆ. ವರುಣಾಗೆ ಅವರ ಕೊಡುಗೆ ಏನು? ಅವರು ಜಾತಿ ರಾಜಕಾರಣ ಮತ್ತು ಹಣದ ರಾಜಕಾರಣ ಮಾಡಿದ್ದಾರೆ. ವರುಣಾದಲ್ಲಿ ಜೆಡಿಎಸ್ ಬೆಂಬಲಿಗರು ಬಿಜೆಪಿಗೆ ಮತ ಹಾಕಿದ್ದಾರೆ. ವರುಣದಲ್ಲಿ ಆದರೂ ನಾನು ಸುಲಭವಾಗಿ ಗೆಲ್ಲುತ್ತೇನೆ ಎಂದರು.

ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಕದಡುವ ಇಂತಹ ಸಂಘಟನೆಗಳನ್ನು ನಿಷೇಧಿಸಲು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿರುವುದರಿಂದ ಬಜರಂಗದಳ ಸಮಸ್ಯೆಯೇ ಅಲ್ಲ. ಲಿಂಗಾಯತ ನಾಯಕರೆಲ್ಲ ಭ್ರಷ್ಟರು ಎಂದು ಎಲ್ಲಿ ಹೇಳಿದ್ದೆ, ಸಿಎಂ ಬಸವರಾಜ ಬೊಮ್ಮಾಯಿ ಭ್ರಷ್ಟ ಎಂದು ಮಾತ್ರ ಹೇಳಿದ್ದೆ, ಅದನ್ನೂ ಬಿಜೆಪಿ ತಿರುಚಿ ನೆಗೆಟಿವ್ ಪ್ರಚಾರ ಮಾಡಿದೆ. ಜನರು ಸ್ಪಷ್ಟ ಬಹುಮತ ನೀಡುತ್ತಿರುವಾಗ ಶಾಸಕರನ್ನು ಕಾಪಾಡುವ ಪ್ರಶ್ನೆ ಎಲ್ಲಿದೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+