ಮೈಸೂರು ರಾಜಕೀಯದಲ್ಲಿ ಸಂಚಲನ ಮೂಡಿಸುವುದೇ ದೇವೇಗೌಡ್ರ ನಡೆ?
ಬಿಜೆಪಿ ಸರಕಾರ ಪತನಗೊಳ್ಳದಿದ್ದರೆ, ಮುಂಬರುವ ಅಸೆಂಬ್ಲಿ ಚುನಾವಣೆಗೆ ಇನ್ನೂ ಎರಡು ವರ್ಷವಿದೆ. 2023ರಲ್ಲಿ ನಡೆಯುವ ಚುನಾವಣೆಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ್ರು, ಸದ್ದಿಲ್ಲದೇ ಪೂರ್ವತಯಾರಿ ಆರಂಭಿಸಿದ್ದಾರೆ.
ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಲು ಜೆಡಿಎಸ್ ಪಾಲಿಗೆ ಅತಿ ಮುಖ್ಯವಾಗಿರುವ ಕಾವೇರಿ ಕಣಿವೆ ಭಾಗದ ಜಿಲ್ಲೆಗಳಲ್ಲಿ, ಮತ್ತೆ ಪಕ್ಷದ ಗತವೈಭವವನ್ನು ತರುವಲ್ಲಿ ಗೌಡ್ರು ಕಾರ್ಯೋನ್ಮುಖರಾಗಿದ್ದಾರೆ.
ಅದರ ಭಾಗವಾಗಿ, ಪಕ್ಷದಲ್ಲಿ ಇದ್ದೂ ಇಲ್ಲದಂತಿರುವವರು ಮತ್ತು ನಾನಾ ಕಾರಣಗಳಿಂದ ಪಕ್ಷ ತೊರೆದವರನ್ನು ಮತ್ತೆ ಜೆಡಿಎಸ್ಸಿಗೆ ವಾಪಸ್ ಕರೆಸಿಕೊಳ್ಳುವ ಸಲುವಾಗಿ, ಮುಖಂಡರ ಮನವೊಲಿಕೆ ಕೆಲಸವನ್ನು ಗೌಡ್ರು ಆರಂಭಿಸಿದ್ದಾರೆ.
ಅದರಂತೇ, ಮೈಸೂರು ಭಾಗದ ಪ್ರಮುಖ ಮತ್ತು ಪ್ರಭಾವೀ ನಾಯಕ ಜಿ.ಟಿ.ದೇವೇಗೌಡ್ರ ಜೊತೆಗೆ ದೊಡ್ಡ ಗೌಡ್ರು ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಜೊತೆಗಿನ ಮುನಿಸಿನಿಂದ ಜಿಟಿಡಿ, ಪಕ್ಷದ ಚಟುವಟಿಕೆಯಿಂದ ದೂರವಾಗಿದ್ದರು.

ಸಿದ್ದರಾಮಯ್ಯನವರನ್ನೇ ಸೋಲಿಸಿದ್ದ ಜಿ.ಟಿ.ದೇವೇಗೌಡ
ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರನ್ನೇ ಸೋಲಿಸಿದ್ದ ಜಿ.ಟಿ.ದೇವೇಗೌಡ, ನಂತರದ ದಿನಗಳಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜೊತೆಗಿನ ಮನಸ್ತಾಪದಿಂದ ದೂರವುಳಿದಿದ್ದರು. ಜೊತೆಗೆ, ಜಿಟಿಡಿ ಮತ್ತು ಎಚ್ಡಿಕೆ ನಡುವಿನ ಅಂತರ ಹೆಚ್ಚಾಗುತ್ತಲೇ ಬರುತ್ತಿತ್ತು. ಈಗ, ಗೌಡ್ರು, ಅವರ ಮನವೊಲಿಸುವ ಕೆಲಸಕ್ಕೆ ಮುಂದಾಗಿದ್ದಾರೆ.

ದೇವೇಗೌಡ್ರು ದೂರವಾಣಿ ಮೂಲಕ ಜಿ.ಟಿ.ದೇವೇಗೌಡ್ರ ಜೊತೆ ಮಾತುಕತೆ
ಎರಡು ದಿನಗಳ ಹಿಂದೆ ದೇವೇಗೌಡ್ರು ದೂರವಾಣಿ ಮೂಲಕ ಜಿ.ಟಿ.ದೇವೇಗೌಡ್ರ ಜೊತೆ ಮಾತುಕತೆ ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ಪಕ್ಷ ಬಿಡುವ ನಿರ್ಧಾರಕ್ಕೆ ಬರಬಾರದು ಎಂದು ಮನವೊಲಿಕೆ ಮಾಡಿದ್ದಾರೆ. ಜಿಟಿಡಿ ಕೂಡಾ ಗೌಡ್ರ ಮಾತಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ದೇವೇಗೌಡ್ರೇ ಖುದ್ದಾಗಿ ಮಾತನಾಡಿರುವುದರಿಂದ, ಜಿಟಿಡಿ ಸಕಾರಾತ್ಮಕವಾಗಿ ಸ್ಪಂದನೆ
ಕುಮಾರಸ್ವಾಮಿ ಜೊತೆಗಿನ ಮನಸ್ತಾಪವನ್ನು ಸರಿ ಪಡಿಸುವುದು, ಜಿಟಿಡಿ ಮತ್ತು ಅವರ ಮಗನಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುವುದು ಈ ರೀತಿಯ ಭರವಸೆಯನ್ನು ದೇವೇಗೌಡ್ರು, ಜಿಟಿಡಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ದೇವೇಗೌಡ್ರೇ ಖುದ್ದಾಗಿ ಮಾತನಾಡಿರುವುದರಿಂದ, ಜಿಟಿಡಿ ಕೂಡಾ ಇದಕ್ಕೆ ಪೂರಕವಾಗಿ ಸ್ಪಂದಿಸಿದ್ದಾರೆ.

ಜಿ.ಟಿ.ದೇವೇಗೌಡ್ರ ಬಣವನ್ನು ಸೋಲಿಸಲು ಕುಮಾರಸ್ವಾಮಿ ಮೈಸೂರಿನಲ್ಲೇ ಠಿಕಾಣಿ
ಕೆಲವು ತಿಂಗಳ ಹಿಂದೆ ನಡೆದ ಮೈಮೂಲ್ ಚುನಾವಣೆಯಲ್ಲಿ ಜಿ.ಟಿ.ದೇವೇಗೌಡ್ರ ಬಣವನ್ನು ಸೋಲಿಸಲು ಕುಮಾರಸ್ವಾಮಿ ಮೈಸೂರಿನಲ್ಲೇ ಠಿಕಾಣಿ ಹೂಡಿದ್ದರು. ಎಚ್ಡಿಕೆ ಯಾವುದೇ ಪ್ರಯತ್ನ ಫಲಕೊಡದೇ ಜಿಟಿಡಿ ಬಣ ಭರ್ಜರಿ ಜಯವನ್ನು ದಾಖಲಿಸಿತ್ತು. ಈಗ, ದೇವೇಗೌಡ್ರ ಮನವೊಲಿಕೆ ಕಾರ್ಯ ಪಕ್ಷಕ್ಕೆ ಯಾವರೀತಿ ಮುಂದಿನ ದಿನಗಳಲ್ಲಿ ಉಪಯೋಗವಾಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ











Click it and Unblock the Notifications