ನರ್ಮ್ ಯೋಜನೆಯಡಿ ಮೈಸೂರಿಗೆ ಕಬಿನಿ ನೀರು

ಯೋಜನೆಯ ಅನ್ವಯ ಮೈಸೂರು ಮತ್ತು ನಂಜನಗೂಡು ತಾಲೂಕುಗಳ 30 ಗ್ರಾಮಗಳಿಗೆ 31.14 ಕೋಟಿ ರೂ. ವೆಚ್ಚದಲ್ಲಿ ಕಬಿನಿಯಿಂದ ನೀರು ಪೂರೈಸಲು ಜಿಲ್ಲಾ ಪಂಚಾಯಿತಿ ಯೋಜನೆ ಸಿದ್ದಪಡಿಸಿದೆ. ಕೆಲವು ದಿನಗಳಲ್ಲಿ ಯೋಜನೆ ಕಾಮಗಾರಿ ಪ್ರಾರಂಭವಾಗಲಿದೆ.
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನರ್ಮ್ ಯೋಜನಯಡಿ ಈ ಕುಡಿಯುವ ನೀರು ಪೂರೈಸುವ ಕಾಮಗಾರಿ ಕೈಗೊಳ್ಳಲಿದೆ. ದಸರಾ ಉತ್ಸವ ಮುಗಿಯುತ್ತಿದ್ದಂತೆ ಯೋಜನೆಗೆ ಕಾಮಗಾರಿ ಆರಂಭಿಸಲು ಸಿದ್ಧತೆ ನಡೆದಿದೆ.
ಯೋಜನೆ ಅನ್ವಯ ತಲೂರು ಕ್ರಾಸ್ ಬಳಿ ನಗರಕ್ಕೆ ನೀರು ಪೂರೈಸುವ ಟ್ಯಾಂಕ್ ಸಮೀಪ ಮತ್ತೊಂದು ಟ್ಯಾಂಕ್ ನಿರ್ಮಿಸಲಾಗುತ್ತದೆ ಇದರ ಮೂಲಕ ಮೈಸೂರು ನಗರಕ್ಕೆ ನೀರು ಪೂರೈಕೆ ಮಾಡಿ, ಓವರ್ ಹೆಡ್ ಟ್ಯಾಂಕ್ ಗಳ ಮೂಲಕ ಉಳಿದ 30 ಗ್ರಾಮಗಳಿಗೆ ನೀರು ಒದಗಿಸಲಾಗುತ್ತದೆ.
ನರ್ಮ್ ಯೋಜನೆಯಡಿ ಕೈಗೊಳ್ಳುವ ಈ ಕಾಮಗಾರಿಯಿಂದ 30 ಗ್ರಾಮಗಳ 12,000 ಮನೆಗಳಿಗೆ ನೀರು ದೊರೆಕುತ್ತದೆ. ಇದರಲ್ಲಿ ಮೈಸೂರು ಮತ್ತು ನಂಜನಗೂಡು ತಾಲೂಕುಗಳು ಸೇರಿವೆ. ಮೈಸೂರು ನಗರಕ್ಕೂ ಯೋಜನೆಯಿಂದ ಹೆಚ್ಚಿನ ನೀರು ಲಭ್ಯವಾಗಲಿದೆ.
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಈ ಯೋಜನೆ ಪೂರ್ಣಗೊಳಿಸಿ ಐದು ವರ್ಷಗಳ ಕಾಲ ಅದರ ಉಸ್ತುವಾರಿ ನೋಡಿಕೊಳ್ಳಲಿದೆ. ನಂಜನಗೂಡು ತಾಲೂಕಿನ 3 ಗ್ರಾಮ ಮತ್ತು ಮೈಸೂರಿನ 27 ಗ್ರಾಮಗಳು ಯೋಜನೆ ವ್ಯಾಪ್ತಿಗೆ ಒಳಪಡಲಿವೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications