ಬೆಂಕಿ ನಂದಿಸುತ್ತಿರುವ ಸ್ವಯಂಸೇವಕರಿಗೆ ಸಹಾಯ ಮಾಡಿ:ಯದುವೀರ್ ಮನವಿ
ಮೈಸೂರು, ಫೆಬ್ರವರಿ 25 :ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಕಳೆದ 5 ದಿನಗಳಿಂದ ಕಾಡ್ಗಿಚ್ಚು ಸಂಭವಿಸಿದ್ದು, ಈ ಹಿನ್ನೆಲೆಯಲ್ಲಿ ಮೈಸೂರು ಮಹಾರಾಜ ಯದುವೀರ್ ಒಡೆಯರ್ ಕೂಡ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ವಯಂಸೇವಕರ ಸಹಾಯಕ್ಕಾಗಿ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಯದುವೀರ್, ದಯವಿಟ್ಟು ಈ ಬಗ್ಗೆ ಸುದ್ದಿ ಹರಡಿಸಿ, ನಮ್ಮ ಕಾಡನ್ನು ರಕ್ಷಿಸಲು ಅರಣ್ಯ ಇಲಾಖೆಗೆ ಸಹಾಯ ಮಾಡೋಣ ಎಂದು ಮನವಿ ಮಾಡಿಕೊಂಡಿದ್ದಾರೆ.
ಬಂಡೀಪುರ ಹುಲಿ ಸಂರಕ್ಷಿತ ಅಭಯಾರಣ್ಯದಲ್ಲಿ ಸಂಭವಿಸಿರುವ ಕಾಡ್ಗಿಚ್ಚಿನ ಸುದ್ದಿ ತಿಳಿದು ಬಹಳ ನೋವಾಗಿದೆ. ಅಂದಾಜು ಸುಮಾರು 20,000 ಎಕರೆ ಅರಣ್ಯಪ್ರದೇಶದ ಪ್ರಾಣಿಸಂಕುಲ ಹಾಗೂ ಸಸ್ಯಸಂಕುಲಕ್ಕೆ ಅಪಾರ ಹಾನಿಯುಂಟಾಗಿದೆ. ನಮ್ಮ ಪರಿಸರ ಪರಂಪರೆಗೆ ಸಂಭವಿಸಿರುವ ಈ ನಷ್ಟವು ಬಹಳ ದುಃಖಕರ ಸಂಗತಿಯಾಗಿದೆ.
ಹೊತ್ತಿ ಉರಿದ ಬಂಡೀಪುರ: ಬೆಂಕಿಯಲ್ಲಿ ಬೆಂದ ಪ್ರಾಣಿಗಳು, 2500 ಎಕರೆ ಅರಣ್ಯ ಪ್ರದೇಶ ನಾಶ

ಅರಣ್ಯ ಇಲಾಖೆಯವರಿಗೆ ಸ್ವಯಂಸೇವಕರು ಬೇಕಾಗಿದ್ದಾರೆ ಹಾಗೂ ಸಾರ್ವಜನಿಕರಿಂದ ಸಹಾಯ ಕೋರಿದ್ದಾರೆ. ಬಂಡೀಪುರ ಪ್ರವೇಶದ ಚೆಕ್ ಪೋಸ್ಟ್ ಕಚೇರಿಯಲ್ಲಿ ನೀವು ನೀರಿನ ಬಾಟಲಿಗಳು, ಗ್ಲುಕೋಸ್, ಔಷಧ, ಇತರೆ ಅಗ್ನಿಶಾಮಕ ಅಗತ್ಯತೆಗಳು, ಆಹಾರ ಮತ್ತು ಇತರೆ ಸರಬರಾಜುಗಳನ್ನು ನೀಡಬಹುದಾಗಿದೆ ಎಂದು ತಮ್ಮ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications