ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಕಿ ನಂದಿಸುತ್ತಿರುವ ಸ್ವಯಂಸೇವಕರಿಗೆ ಸಹಾಯ ಮಾಡಿ:ಯದುವೀರ್ ಮನವಿ

|
Google Oneindia Kannada News

ಮೈಸೂರು, ಫೆಬ್ರವರಿ 25 :ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಕಳೆದ 5 ದಿನಗಳಿಂದ ಕಾಡ್ಗಿಚ್ಚು ಸಂಭವಿಸಿದ್ದು, ಈ ಹಿನ್ನೆಲೆಯಲ್ಲಿ ಮೈಸೂರು ಮಹಾರಾಜ ಯದುವೀರ್ ಒಡೆಯರ್ ಕೂಡ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ವಯಂಸೇವಕರ ಸಹಾಯಕ್ಕಾಗಿ ಮನವಿ ಮಾಡಿಕೊಂಡಿದ್ದಾರೆ.

ಪಾರಂಪರಿಕ ಕಟ್ಟಡಗಳ ನೆಲಸಮ ವಿಚಾರ:ಅಸಮಾಧಾನ ವ್ಯಕ್ತಪಡಿಸಿದ ಯದುವೀರ್ಪಾರಂಪರಿಕ ಕಟ್ಟಡಗಳ ನೆಲಸಮ ವಿಚಾರ:ಅಸಮಾಧಾನ ವ್ಯಕ್ತಪಡಿಸಿದ ಯದುವೀರ್

ಈ ಕುರಿತು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಯದುವೀರ್, ದಯವಿಟ್ಟು ಈ ಬಗ್ಗೆ ಸುದ್ದಿ ಹರಡಿಸಿ, ನಮ್ಮ ಕಾಡನ್ನು ರಕ್ಷಿಸಲು ಅರಣ್ಯ ಇಲಾಖೆಗೆ ಸಹಾಯ ಮಾಡೋಣ ಎಂದು ಮನವಿ ಮಾಡಿಕೊಂಡಿದ್ದಾರೆ.

 ಮೈಸೂರಿನಲ್ಲಿ ವೈಭವದ ರಥಸಪ್ತಮಿ ಆಚರಣೆ:ಕುಟುಂಬ ಸಮೇತ ಯದುವೀರ್ ಪೂಜೆ ಮೈಸೂರಿನಲ್ಲಿ ವೈಭವದ ರಥಸಪ್ತಮಿ ಆಚರಣೆ:ಕುಟುಂಬ ಸಮೇತ ಯದುವೀರ್ ಪೂಜೆ

ಬಂಡೀಪುರ ಹುಲಿ ಸಂರಕ್ಷಿತ ಅಭಯಾರಣ್ಯದಲ್ಲಿ ಸಂಭವಿಸಿರುವ ಕಾಡ್ಗಿಚ್ಚಿನ ಸುದ್ದಿ ತಿಳಿದು ಬಹಳ ನೋವಾಗಿದೆ. ಅಂದಾಜು ಸುಮಾರು 20,000 ಎಕರೆ ಅರಣ್ಯಪ್ರದೇಶದ ಪ್ರಾಣಿಸಂಕುಲ ಹಾಗೂ ಸಸ್ಯಸಂಕುಲಕ್ಕೆ ಅಪಾರ ಹಾನಿಯುಂಟಾಗಿದೆ. ನಮ್ಮ ಪರಿಸರ ಪರಂಪರೆಗೆ ಸಂಭವಿಸಿರುವ ಈ ನಷ್ಟವು ಬಹಳ ದುಃಖಕರ ಸಂಗತಿಯಾಗಿದೆ.

ಹೊತ್ತಿ ಉರಿದ ಬಂಡೀಪುರ: ಬೆಂಕಿಯಲ್ಲಿ ಬೆಂದ ಪ್ರಾಣಿಗಳು, 2500 ಎಕರೆ ಅರಣ್ಯ ಪ್ರದೇಶ ನಾಶ

Join hands to save Bandipura:Yaduveer Krishnadatta Wadiyar

ಅರಣ್ಯ ಇಲಾಖೆಯವರಿಗೆ ಸ್ವಯಂಸೇವಕರು ಬೇಕಾಗಿದ್ದಾರೆ ಹಾಗೂ ಸಾರ್ವಜನಿಕರಿಂದ ಸಹಾಯ ಕೋರಿದ್ದಾರೆ. ಬಂಡೀಪುರ ಪ್ರವೇಶದ ಚೆಕ್ ಪೋಸ್ಟ್ ಕಚೇರಿಯಲ್ಲಿ ನೀವು ನೀರಿನ ಬಾಟಲಿಗಳು, ಗ್ಲುಕೋಸ್, ಔಷಧ, ಇತರೆ ಅಗ್ನಿಶಾಮಕ ಅಗತ್ಯತೆಗಳು, ಆಹಾರ ಮತ್ತು ಇತರೆ ಸರಬರಾಜುಗಳನ್ನು ನೀಡಬಹುದಾಗಿದೆ ಎಂದು ತಮ್ಮ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

English summary
Yaduveer Krishnadutt Wadiyer expressed his sadness over the fire Bandipur forest. Yaduveer requested at social media to peoplehelp the volunteers who are burning quench.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X