ಪತ್ರಕರ್ತ ನಿಷ್ಠಾವಂತನಾಗಿದ್ದರೆ ಮೊದಲು ತನ್ನ ಆಸ್ತಿ ಘೋಷಿಸಲಿ : ಪಬ್ಲಿಕ್ ವಾಹಿನಿ ಮುಖ್ಯಸ್ಥ ರಂಗನಾಥ್
ಮೈಸೂರು, ನವೆಂಬರ್ 25 : ಮಾಧ್ಯಮಗಳಲ್ಲಿ ಕನ್ನಡ ಪರ ಆಕ್ರೋಶಗಳು ಕ್ಷೀಣವಾಗುತ್ತಿವೆ ಎಂದು ಪಬ್ಲಿಕ್ ಟಿ.ವಿ.ಮುಖ್ಯಸ್ಥ ಎಚ್.ಆರ್. ರಂಗನಾಥ್ ಅಭಿಪ್ರಾಯಪಟ್ಟರು.
ಚಿತ್ರಗಳು : ಮೈಸೂರಲ್ಲಿ 83ನೇ ಸಾಹಿತ್ಯ ಸಮ್ಮೇಳನ ಸಂಭ್ರಮ
ಮೈಸೂರಿನಲ್ಲಿ ಆಯೋಜಿಸಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಧ್ಯಮ: ಮುಂದಿರುವ ಸವಾಲುಗಳು' ಎಂಬ ವಿಚಾರ ಕುರಿತ 3ನೇ ಗೋಷ್ಠಿಯಲ್ಲಿ ದಿಕ್ಸೂಚಿ ನುಡಿಗಳನ್ನಾಡುತ್ತಾ, ಮಾಧ್ಯಮಗಳು ಕನ್ನಡದ ಕೆಲಸ ಮಾಡಿದರೆ ಪತ್ರಕರ್ತರನ್ನು ಗೂಂಡಾಗಳು ಎಂದು ಗುರುತಿಸುತ್ತಾರೆ. ನ್ಯಾಯಾಲಯದಲ್ಲಿ ನಮ್ಮ ವಿರುದ್ಧ ಪ್ರಕರಣ ದಾಖಲಾಗುತ್ತದೆ. ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ಪತ್ರಕರ್ತ ಸಿಲುಕಿದ್ದಾನೆ ಎಂದು ಆತಂಕ ವ್ಯಕ್ತಪಡಿಸಿದರು.
ಪತ್ರಕರ್ತ ಹಾಗೂ ಪತ್ರಿಕೋದ್ಯಮ ಶಾಸಕಾಂಗದ ಹಿಡಿತಕ್ಕೆ ಸಿಲುಕಿದರೆ ಪ್ರಜಾಪ್ರಭುತ್ವ ಹಾಗೂ ತಳ ಸಮೂಹದ ಜನತೆಗೆ ಅಪಾಯ ಕಟ್ಟಿಟ್ಟ ಬುತ್ತಿ. ಇದನ್ನು ಹೇಗೆ ಎದುರಿಸುವುದು ಎನ್ನುವುದನ್ನು ನೆನಪಿಸಿಕೊಂಡರೆ ಭಯ ಆಗುತ್ತದೆ ಎಂದು ಹೇಳಿದರು.

ಬೇರೆಯವರಿಗೆ ಬುದ್ಧಿ ಹೇಳುವ ನಾವು ಹೇಗಿದ್ದೇವೆ? ನಮ್ಮ ಸಿದ್ಧಾಂತಗಳೇನು ಎನ್ನುವುದರ ಬಗ್ಗೆ ನಮ್ಮನ್ನು ನಾವು ಅವಲೋಕನ ಮಾಡಿಕೊಳ್ಳಬೇಕಿದೆ. ಶಾಸಕಾಂಗದಲ್ಲಿರುವವರಿಗೆ 5 ವರ್ಷಗಳಿಗೊಮ್ಮೆ ಚುನಾವಣೆ ಎಂಬ ಪರೀಕ್ಷೆ ಬರುತ್ತದೆ. ಕಾರ್ಯಾಂಗದಲ್ಲಿ ಕೆಲಸ ಮಾಡುವವರಿಗೆ ವರ್ಗಾವಣೆ, ಅಮಾನತು ಎಂಬ ಭಯ ಎಂಎಲ್ಎ, ಎಂಎಲ್ಸಿ, ಸಂಘನೆಗಳು, ಐಎಎಸ್ ಅಧಿಕಾರಿಗಳ ಸಂಪರ್ಕವನ್ನು ಇಟ್ಟುಕೊಂಡೇ ಬರುತ್ತಾರೆ. ಇದು ಇಂದಿನ ಪತ್ರಿಕೋದ್ಯಮದ ದುರಂತ ಎಂದು ಬೇಸರ ವ್ಯಕ್ತಪಡಿಸಿದರು.
ಪತ್ರಕರ್ತ ತನ್ನ ಆಸ್ತಿ ಘೋಷಿಸಬೇಕು : ಪತ್ರಕರ್ತನೆಂದರೆ ಅವನೂ ಕೂಡ ಸಾಮಾಜಿಕ ಜವಾಬ್ದಾರಿ ಇರುವ ವ್ಯಕ್ತಿ. ಆತ ಸಾರ್ವಜನಿಕ ಸೇವೆ ಮಾಡುವವನಾದ್ದರಿಂದ ತನ್ನ ಆಸ್ತಿಯನ್ನು ಘೋಷಣೆ ಮಾಡಿಕೊಳ್ಳಬೇಕಿದೆ. ಆದರೆ ನ್ಯಾಯಾಂಗ ಹಾಗೂ ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದು ಕರೆಯಿಸಿ ಕೊಂಡಿರುವ ಮಾಧ್ಯಮಗಳಿಗೆ ಯಾವುದೇ ಪರೀಕ್ಷೆ ಇಲ್ಲ. ಯಾರ ಹಂಗೂ ಇಲ್ಲದಿರುವುದರಿಂದ ಮುಂದೆ ಇದು ಯಾವ ದಿಕ್ಕಿಗೆ ಹೋಗುತ್ತದೆ ಎನ್ನುವ ಭಯ ಕಾಡುತ್ತದೆ ಎಂದರು. ಇಲ್ಲಿಯೂ ಎಲ್ಲರೂ ಶುದ್ಧವಾಗಿದ್ದಾರೆ ಎಂದು ಹೇಳುವ ಪರಿಸ್ಥಿತಿ ಈಗ ಇಲ್ಲ. ಕನಿಷ್ಠ ದೊಡ್ಡ ದೊಡ್ಡ ಮಾಧ್ಯಮಗಳು ತಮ್ಮ ಆಸ್ತಿಯನ್ನು ಘೋಷಣೆ ಮಾಡಿಕೊಳ್ಳುವುದರಿಂದ ಮುಂದಿನ ದಿನಗಳಲ್ಲಿ ಬರುವ ಕೆಟ್ಟ ಹೆಸರಿನಿಂದ ತಪ್ಪಿಸಿಕೊಳ್ಳಬಹುದು ಎಂದು ಹೇಳಿದರು.
ಗೋಷ್ಠಿಯ ಅಧ್ಯಕ್ಷತೆಯನ್ನುಪತ್ರಕರ್ತ ತಿಮ್ಮಪ್ಪ ಭಟ್ ವಹಿಸಿದ್ದರು. ಎನ್. ರವಿಶಂಕರ್, ಎನ್.ಉದಯಕುಮಾರ್ ವಿಚಾರ ಮಂಡನೆ ಮಾಡಿದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications