ಸಚಿವರ ನಿಧನಕ್ಕೆ ಕಂಬನಿ ಮಿಡಿದ ಜೆಎಸ್ಎಸ್ ಕಾಲೇಜು
ಮೈಸೂರು, ಜನವರಿ 3 : ಮೈಸೂರಿನ ಬಿ.ಎನ್ ರಸ್ತೆಯಲ್ಲಿರುವ ಜೆ.ಎಸ್.ಎಸ್. ಪದವಿ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಅಗಲಿದ ಸಕ್ಕರೆ ಸಚಿವ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಎಸ್.ಮಹದೇವ ಪ್ರಸಾದ್ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿ ಮೌನ ಆಚರಿಸಲಾಯಿತು.
ರಾಜ್ಯ ಸಹಕಾರ, ಸಕ್ಕರೆ ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಮಹದೇವ ಪ್ರಸಾದ್ ಹೃದಯಾಘಾತದಿಂದ ಅಕಾಲಿಕವಾಗಿ ನಿಧನರಾಗಿರುವುದು ತುಂಬಾ ನೋವಿನ ಸಂಗತಿಯಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರು ಜನಪ್ರಿಯ ರಾಜಕಾರಣಿಯನ್ನು ನೆನೆದರು.
ಕಾಲೇಜಿನ ದಿನಗಳಲ್ಲಿಯೇ ವಿದ್ಯಾರ್ಥಿ ಸಂಘದ ಚುನಾವಣೆಗಳಲ್ಲಿ ಸ್ಪರ್ಧಿಸಿ ಅಧ್ಯಕ್ಷರಾಗಿ ಆಯ್ಕೆಯಾಗುವುದರ ಮೂಲಕ ತಮ್ಮ ಸಂಘಟನಾ ಶಕ್ತಿಯನ್ನು ಸಾಬೀತು ಪಡಿಸಿದ್ದರು. ಗುಂಡ್ಲುಪೇಟೆ ಕ್ಷೇತ್ರದಿಂದ ಸತತವಾಗಿ 5 ಬಾರಿ ರಾಜ್ಯ ವಿಧಾನಸಭೆಗೆ ಆಯ್ಕೆಯಾಗುವ ಮೂಲಕ ಜನಪ್ರಿಯ ನಾಯಕರಾಗಿದ್ದರು ಎಂದು ಅವರನ್ನು ಬಣ್ಣಿಸಿದರು. [ಎಚ್ಎಸ್ಎಂ ನಿಧನ : ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ]

ಆಹಾರ ಮತ್ತು ನಾಗರೀಕ ಪೂರೈಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಚಿವರಾಗಿಯೂ ಸಾರ್ಥಕ ಸೇವೆಯನ್ನು ಸಲ್ಲಿಸಿದ್ದರು. 'ಸಂಗಮ ಪ್ರತಿಷ್ಠಾನ'ವನ್ನು ಸ್ಥಾಪಿಸಿ ಅದರ ಮೂಲಕ ಉಚಿತ ಸಾಮೂಹಿಕ ವಿವಾಹ, ಆರೋಗ್ಯ ತಪಾಸಣಾ ಶಿಬಿರ ಹಾಗೂ ಉದ್ಯೋಗ ಮೇಳಗಳನ್ನು ಆಯೋಜಿಸಿದ್ದರು ಎಂದು ಅವರನ್ನು ಕೊಂಡಾಡಿದರು.
ಅವರ ಆತ್ಮಕ್ಕೆ ಭಗವಂತ ಚಿರಶಾಂತಿಯನ್ನು ಕರುಣಿಸಲಿ ಮತ್ತು ಅವರ ಕುಟುಂಬ ವರ್ಗದವರಿಗೆ ಇವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಕಾಲೇಜಿನ ಪ್ರಾಂಶುಪಾಲರು ಆಶಿಸಿದರು. ಮುಖ್ಯ ಕಾರ್ಯನಿರ್ವಾಹಕರು, ಅಧ್ಯಾಪಕರು, ಅಧ್ಯಾಪಕೇತರರು ಮತ್ತು ವಿದ್ಯಾರ್ಥಿವೃಂದ ಸಚಿವರ ನಿಧನಕ್ಕೆ ಕಂಬನಿ ಮಿಡಿದಿದೆ. [ವ್ಯಕ್ತಿಚಿತ್ರ : ಸಜ್ಜನ ರಾಜಕಾರಣಿ ಎಚ್ ಎಸ್ ಮಹದೇವ ಪ್ರಸಾದ್]
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications