ಸೋಮವಾರದ ತನಕ ಮರೀಗೌಡಗೆ ಜೈಲೇ ಗತಿ
ಮೈಸೂರು, ಆಗಸ್ಟ್ 05 : ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಮುಖಂಡ ಮರೀಗೌಡ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಲಾಗಿದೆ. ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಎದುರಿಸುತ್ತಿರುವ ಕೆ.ಮರೀಗೌಡ ಅವರು ಬುಧವಾರ ಪೊಲೀಸರ ಮುಂದೆ ಶರಣಾಗಿದ್ದರು.
ಮರೀಗೌಡ ಪರ ವಕೀಲ ಸಿ.ಎಂ.ಜಗದೀಶ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಮೈಸೂರಿನ ಜೆಎಂಎಫ್ಸಿ ಕೋರ್ಟ್ನಲ್ಲಿ ಶುಕ್ರವಾರ ನಡೆಯಿತು. ಸಹಕಾರಿ ಸರ್ಕಾರಿ ಅಭಿಯೋಜಕರು ಜಾಮೀನಿಗೆ ಆಕ್ಷೇಪಣೆ ವ್ಯಕ್ತಪಡಿಸಿದರು. ಆದ್ದರಿಂದ, ಅರ್ಜಿಯ ವಿಚಾರಣೆಯನ್ನು ಸೋಮವಾರ (ಆಗಸ್ಟ್ 8)ಕ್ಕೆ ಮುಂದೂಡಲಾಗಿದೆ.[ಮರೀಗೌಡ ಶರಣಾಗತಿ, ನ್ಯಾಯಾಂಗ ಬಂಧನ, ಜಾಮೀನಿಗೆ ಅರ್ಜಿ]

ಬುಧವಾರ ಮೈಸೂರಿನ ನಜರಾಬಾದ್ ಠಾಣೆ ಪೊಲೀಸರ ಮುಂದೆ ಶರಣಾದ ಮರೀಗೌಡ ಅವರನ್ನು 3ನೇ ಜೆಎಂಎಫ್ಸಿ ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ನ್ಯಾಯಾಧೀಶೆ ಜಿ.ದೀಪಾ ಅವರು 14 ದಿನಗಳ ಕಾಲ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.[ಶರಣಾದ ಕೆ.ಮರೀಗೌಡ]
ಮರೀಗೌಡ ಅವರ ಪರ ವಕೀಲರು ಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಬುಧವಾರ ಅರ್ಜಿಯ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಲಾಗಿತ್ತು. ಗುರುವಾರ ಆಗಸ್ಟ್ 5ರ ಶುಕ್ರವಾರಕ್ಕೆ ವಿಚಾರಣೆ ಮುಂದೂಡಲಾಗಿತ್ತು. ಇಂದು ಸೋಮವಾರಕ್ಕೆ ಮುಂದೂಡಲಾಗಿದ್ದು, ಮರೀಗೌಡ ಜೈಲಿನಲ್ಲಿಯೇ ಕಾಲ ಕಳೆಯಬೇಕಾಗಿದೆ. [ಮರೀಗೌಡ ಕಾಂಗ್ರೆಸ್ಸಿನಿಂದ ಅಮಾನತು]
ಮೈಸೂರು ಜೈಲಿನಲ್ಲಿದ್ದಾರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತ ಮತ್ತು ಮೈಸೂರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಮರೀಗೌಡ ಅವರ ವಿರುದ್ಧ ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರು ನಜರಬಾದ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ತಮ್ಮ ಕೆಲಸಗಳಿಗೆ ಮರೀಗೌಡ ಅಡ್ಡಿ ಪಡಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಗಳು ದೂರು ನೀಡಿದ್ದರು. ತಮ್ಮ ವಿರುದ್ಧ ದೂರು ದಾಖಲಾದ ಬಳಿಕ ಮರೀಗೌಡ ಅವರು ತಲೆಮರೆಸಿಕೊಂಡಿದ್ದರು. ಒಂದು ತಿಂಗಳ ಬಳಿಕ ಬುಧವಾರ ಪೊಲೀಸರು ಮುಂದೆ ಶರಣಾಗಿದ್ದರು. ನ್ಯಾಯಾಂಗ ಬಂಧನದಲ್ಲಿರುವ ಅವರು ಮೈಸೂರು ಕೇಂದ್ರ ಕಾರಾಗೃಹದಲ್ಲಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications