ಮರೀಗೌಡ ಶರಣಾಗತಿ, ನ್ಯಾಯಾಂಗ ಬಂಧನ, ಜಾಮೀನಿಗೆ ಅರ್ಜಿ
ಮೈಸೂರು, ಆಗಸ್ಟ್ 03 : ಕಾಂಗ್ರೆಸ್ ಮುಖಂಡ ಕೆ.ಮರೀಗೌಡ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಎದುರಿಸುತ್ತಿರುವ ಮರೀಗೌಡ ಅವರು ಬುಧವಾರ ಮಧ್ಯಾಹ್ನ ಪೊಲೀಸರ ಮುಂದೆ ಶರಣಾಗಿದ್ದರು.
ಮೈಸೂರಿನ ನಜರಾಬಾದ್ ಠಾಣೆ ಪೊಲೀಸರು ಬುಧವಾರ ಸಂಜೆ ಮರೀಗೌಡ ಅವರನ್ನು 3ನೇ ಜೆಎಂಎಫ್ಸಿ ಕೋರ್ಟ್ಗೆ ಹಾಜರುಪಡಿಸಿದರು. ನ್ಯಾಯಾಧೀಶೆ ಜಿ.ದೀಪಾ ಅವರು 14 ದಿನಗಳ ಕಾಲ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ಮರೀಗೌಡ ಅವರನ್ನು ಮೈಸೂರಿನ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.[ಪೊಲೀಸರ ಮುಂದೆ ಶರಣಾದ ಕೆ.ಮರೀಗೌಡ]

ಜಾಮೀನಿಗೆ ಅರ್ಜಿ : ಮರೀಗೌಡ ಅವರ ಪರ ವಕೀಲರಾದ ಸಿ.ಎಂ.ಜಗದೀಶ್ ಅವರು ನ್ಯಾಯಾಲಯದ ಮುಂದೆ ಜಾಮೀನು ನೀಡಬೇಕು ಎಂದು ಅರ್ಜಿ ಸಲ್ಲಿಸಿದರು. ಕೋರ್ಟ್ ಅರ್ಜಿಯ ವಿಚಾರಣೆಯನ್ನು ಆಗಸ್ಟ್ 4ಕ್ಕೆ ಮುಂದೂಡಿದೆ.[ಮರೀಗೌಡ ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್]
ಜುಲೈ 4ರಂದು ತಮ್ಮ ವಿರುದ್ಧ ದೂರು ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಕೆ.ಮರೀಗೌಡ ಅವರು ಮೈಸೂರು ಜೆಎಂಎಫ್ಸಿ ಕೋರ್ಟ್ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿತ್ತು. ನಂತರ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು, ಆದರೆ, ಅಲ್ಲಿಯೂ ಜಾಮೀನು ಸಿಕ್ಕಿರಲಿಲ್ಲ. ಆಗಸ್ಟ್ 2ರ ಮಂಗಳವಾರ ಅವರು ಜಾಮೀನು ಅರ್ಜಿಯನ್ನು ವಾಪಸ್ ಪಡೆದಿದ್ದರು.[ಮರೀಗೌಡನ ಬಂಧನಕ್ಕಾಗಿ ಮೈಸೂರಲ್ಲಿ ಹಾರಿತು ಗಾಳಿಪಟ!]
ಎಲ್ಲಿಯೂ ಜಾಮೀನು ಸಿಗದ ಕಾರಣ ಆಗಸ್ಟ್ 3ರ ಬುಧವಾರ ಮೈಸೂರಿನ ನಜರಾಬಾದ್ ಠಾಣೆಗೆ ವಕೀಲರ ಜೊತೆ ಬಂದು ಶರಣಾಗಿದ್ದರು. ಗುರುವಾರ ಅವರಿಗೆ ಜಾಮೀನು ಸಿಗುವುದೇ ಎಂದು ಕಾದು ನೋಡಬೇಕು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications